Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

| Updated By: ರಾಜೇಶ್ ದುಗ್ಗುಮನೆ

Updated on: Aug 01, 2023 | 2:34 PM

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
Follow us on

ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಈ ವಿಚಾರ ಕೇಳಿ ಶಿವರಾಜ್​ಕುಮಾರ್ (Shivarajkumar) ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

ಶಿವರಾಜ್​ಕುಮಾರ್ ಅವರು ಹತ್ತಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ತಮಿಳು ಚಿತ್ರಗಳನ್ನು ಒಪ್ಪಿಕೊಂಡಿರುವುದರಿಂದ ಅವರು ಬೇರೆ ರಾಜ್ಯಗಳಿಗೂ ತೆರಳಬೇಕಾಗುತ್ತದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೈಲರ್’ ಚಿತ್ರದ ಆಡಿಯೋ ಲಾಂಚ್​ನಲ್ಲಿ ಅವರು ಭಾಗಿ ಆಗಿದ್ದರು. ಅವರು ವೇದಿಕೆ ಏರಿದ ವೇಳೆ ಸಿಳ್ಳೆಗಳು ಬಿದ್ದಿದ್ದವು. ಈ ಮೂಲಕ ಪರಭಾಷೆಯಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ಸಾಬೀತಾಗಿತ್ತು. ಇಷ್ಟೆಲ್ಲ ಕೆಲಸಗಳ ಮಧ್ಯೆ ಅವರು ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಮುಂದಾಗಿರುವುದು ಅನೇಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಯು ಆರ್​ ಸೋ ಕ್ಯೂಟ್​’; ನವಾಜ್​ ಡೈಲಾಗ್​ಗೆ ಫಿದಾ ಆದ ಶಿವರಾಜ್​ಕುಮಾರ್

ಈ ಮೊದಲು ರಾಜ್​ಕುಮಾರ್ ಅವರು ಕೂಡ ನಂದಿನಿ ಉತ್ಪನ್ನದ ರಾಯಭಾರಿ ಆಗಿದ್ದರು. ಅವರು ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ರೈತರಿಗೆ ಸಹಕಾರಿ ಆಗುತ್ತದೆ ಎಂಬ ಉದ್ದೇಶ ರಾಜ್​ಕುಮಾರ್ ಸಂಭಾವನೆ ಪಡೆದಿರಲಿಲ್ಲ.  ಅವರ ಹಾದಿಯಲ್ಲಿ ಪುನೀತ್ ಸಾಗಿದ್ದರು. ಅವರು ಹಲವು ವರ್ಷಗಳ ಕಾಲ ನಂದಿನಿ ಪ್ರಾಡಕ್ಟ್​​ಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ