AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ್​ ಪಾತ್ರಕ್ಕೆ ಡಬ್​ ಮಾಡುವಾಗ ಭಯವಾಯ್ತು’; ‘ಜೇಮ್ಸ್​’ ಕಾರ್ಯಕ್ರಮದಲ್ಲಿ ಶಿವಣ್ಣ ಭಾವುಕ ನುಡಿ

ಪುನೀತ್​ ರಾಜ್​ಕುಮಾರ್ ನಟನೆಯ ‘ಜೇಮ್ಸ್​’ ಸಿನಿಮಾ ಮಾರ್ಚ್​ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಮಾರ್ಚ್​ 6) ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದ ವೇದಿಕೆ ಮೇಲೆ ಶಿವರಾಜ್​ಕುಮಾರ್ ಮಾತನಾಡಿದ್ದಾರೆ.

‘ಪುನೀತ್​ ಪಾತ್ರಕ್ಕೆ ಡಬ್​ ಮಾಡುವಾಗ ಭಯವಾಯ್ತು’; ‘ಜೇಮ್ಸ್​’ ಕಾರ್ಯಕ್ರಮದಲ್ಲಿ ಶಿವಣ್ಣ ಭಾವುಕ ನುಡಿ
ಶಿವಣ್ಣ
TV9 Web
| Edited By: |

Updated on:Mar 06, 2022 | 9:11 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್​’ ಸಿನಿಮಾ (James Movie) ಮಾರ್ಚ್​ 17ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಮಾರ್ಚ್​ 6) ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದ ವೇದಿಕೆ ಮೇಲೆ ಶಿವರಾಜ್​ಕುಮಾರ್ (Shivarajkumar) ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣ ಸಾಕಷ್ಟು ಭಾವುಕರಾದರು. ‘ಮಾತನಾಡೋಕೆ ಕಷ್ಟ ಆಗುತ್ತಿದೆ. ನಾಲ್ಕು ತಿಂಗಳಿಂದ ನಗ್ತೀವೀ, ಊಟ ಮಾಡ್ತೀವಿ, ಶೂಟಿಂಗ್​ನಲ್ಲಿ ಭಾಗಿ ಆಗ್ತೀವಿ. ಆದರೆ, ಮನಸ್ಸಲ್ಲಿರೋ ನೋವು ಕಡಿಮೆ ಆಗುತ್ತಿಲ್ಲ. ಬದುಕಬೇಕು ಬದುಕುತ್ತಾ ಇದ್ದೇವೆ. ಅಪ್ಪು ಚಿಕ್ಕ ವಯಸ್ಸಿಗೆ ಹೋದ. ನೆನಪಿಸಿಕೊಂಡಾಗೆಲ್ಲ ನೋವು ಜಾಸ್ತಿನೇ ಆಗುತ್ತದೆ. ಪ್ರೆಸ್​ಮೀಟ್​ನಲ್ಲಿ ನಾನು ಏನು ಮಾತನಾಡೋಕೆ ಸಾಧ್ಯ? ಇಲ್ಲಿ ಮಾತನಾಡೋದು ಕಷ್ಟ’ ಎಂದರು ಶಿವರಾಜ್​ಕುಮಾರ್.

‘ಅಪ್ಪು ವಾಯ್ಸ್​ಗೆ ನಾನೇ ಡಬ್ಬಿಂಗ್​ ಮಾಡಬೇಕು ಎಂದಾಗ ನಾನು ಹೇಳಿದೆ. ಅವನದ್ದೇ ವಾಯ್ಸ್​ ಬಳಕೆ ಮಾಡೋಕೆ ಆಗತ್ತ ನೋಡಿ ಎಂದು ಹೇಳಿದ್ದೆ. ಮಿಮಿಕ್ರಿ ಮಾಡುವವರ ಬಳಿ ಮಾಡಿಸೋಕೆ ಟ್ರೈ ಮಾಡಿ ಎಂದಿದ್ದೆ. ಚೇತನ್​ ಅವರು ಟ್ರೈ ಮಾಡಿದರು. ಆದರೆ, ಸರಿಯಾಗಿ ಬರಲಿಲ್ಲ. ನಾನು ತುಂಬಾನೇ ಹೆದರಿಕೊಂಡು ಮಾಡಿದೆ. ಅಪ್ಪು ಅವರದ್ದು ಅದ್ಭುತ ವಾಯ್ಸ್​ ಆಗಿತ್ತು. ಸ್ವಲ್ಪ ಟ್ರೈ ಮಾಡಿದ್ದೇನೆ. ಅಪ್ಪು ವಾಯ್ಸ್​ಗೆ ಎರಡು ದಿನ ಡಬ್ ಮಾಡಿದ್ದೇನೆ’ ಎಂದರು ಶಿವಣ್ಣ.

‘ಜೇಮ್ಸ್, ಇದು​ ಒಳ್ಳೆಯ ಮನಸ್ಸಿನ ವ್ಯಕ್ತಿಯ ಚಿತ್ರ. ಯಾವಾಗ ಕಾಲ್​ ಮಾಡಿದ್ರೂ ಶಿವಣ್ಣ ಅಂತಿದ್ದ. ಯಾವಾಗಲೂ ಹಗ್​ ಮಾಡುವಾಗ ಹೃದಯ ಭಾಗ ಟಚ್​ ಆಗುವ ರೀತಿಯಲ್ಲಿ ಹಗ್​ ಮಾಡುತ್ತಿದ್ದ. ಸಿನಿಮಾದಲ್ಲಿ ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. ಪುನೀತ್ ಇಂಡಸ್ಟ್ರಿಯವರ ಹಾಗೂ ಅಭಿಮಾನಿಗಳ ಹಾರ್ಟ್​ನಲ್ಲಿ ಸದಾ ಇರ್ತಾನೆ. ಅಪ್ಪು ಅನೇಕರಿಗೆ ಸ್ಫೂರ್ತಿ ಆಗಿದ್ದ’ ಎಂದು ಭಾವುಕರಾದರು ಶಿವಣ್ಣ.

‘ಅಪ್ಪು ಹಾಗೂ ಚಿಕ್ಕಣ್ಣ ಇಬ್ಬರೂ ಕ್ಲೋಸ್​ ಆಗಿದ್ದರು. ನಾನು ಚೆನ್ನೈಗೆ ಹೋದಾಗ ನೀವು ಪುನೀತ್​ ಅವರ ಅಣ್ಣ ಅಲ್ಲವಾ ಎಂದು ಜನರು ಕೇಳಿದ್ದರು. ಕೃಷ್ಣಗಿರಿಯಲ್ಲಿ ಶೂಟ್​ ಮಾಡುವಾಗಲೂ ಅದೇ ರೀತಿ ಪ್ರಶ್ನೆ ಕೇಳಿದ್ದರು. ಅವನ ಅಣ್ಣನಾಗಿ ಇರೋಕೆ ನಾನು ಅದೃಷ್ಟ ಮಾಡಿದ್ದೆ. ಅಪ್ಪು ಯಾವಾಗಲೂ ಬದುಕಿರುತ್ತಾನೆ. ಜೇಮ್ಸ್​ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಮಾತು ಮುಗಿಸಿದರು ಶಿವರಾಜ್​ಕುಮಾರ್.

ಇದನ್ನೂ ಓದಿ: ರಸ್ತೆಬದಿ ನಿಂತವರ ಜತೆ ಮನೆಯವರಂತೆ ಮಾತಾಡಿದ ಶಿವರಾಜ್​ಕುಮಾರ್​; ಸರಳತೆಗೆ ಮತ್ತೊಂದು ಹೆಸರು ಶಿವಣ್ಣ

ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್​ ರಾಜ್​ಕುಮಾರ್​: ವಂಶಿಕಾ ಸೂಪರ್​ ಮಾತು

Published On - 8:39 pm, Sun, 6 March 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು