AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ತಮಿಳು ಸಿನಿಮಾಗೆ ಶಿವಣ್ಣ ಸಾಥ್; ಈ ಚಿತ್ರದಲ್ಲಿದೆ ರೆಟ್ರೋ ಕಥೆ  

ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳನ್ನು ಇಟ್ಟುಕೊಂಡು ‘ನಾನ್ ವೈಲೆನ್ಸ್’ ಸಿನಿಮಾ ಮಾಡಲಾಗಿದೆ. 90ರ ದಶಕದ ಕಥೆಯನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ‘ಮೆಟ್ರೋ' ಮತ್ತು ‘ಕೊಡಿಯಲ್ಲಿ ಒರುವನ್' ಚಿತ್ರಗಳ ಮೂಲಕ ನಿರ್ದೇಶಕ ಆನಂದ ಕೃಷ್ಣನ್ ಮೆಚ್ಚುಗೆ ಪಡೆದಿದ್ದಾರೆ.

Shivarajkumar: ತಮಿಳು ಸಿನಿಮಾಗೆ ಶಿವಣ್ಣ ಸಾಥ್; ಈ ಚಿತ್ರದಲ್ಲಿದೆ ರೆಟ್ರೋ ಕಥೆ  
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: May 30, 2024 | 2:09 PM

Share

ನಟ ಶಿವರಾಜ್​ಕುಮಾರ್ (Shivarajkumar) ಅವರು ಹೊಸ ಸಿನಿಮಾಗಳಿಗೆ ಬೆಂಬಲ ನೀಡುತ್ತಾರೆ. ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯ ಚಿತ್ರಗಳಿಗೂ ಅವರು ವಿಶ್ ತಿಳಿಸಿದ್ದು ಇದೆ. ಈಗ ತಮಿಳಿನ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ‘ನಾನ್ ವೈಲೆನ್ಸ್’ ಚಿತ್ರಕ್ಕೆ ಶಿವರಾಜ್​ಕುಮಾರ್ ಸಾಥ್ ನೀಡಿದ್ದಾರೆ. ಈ ಮೊದಲು ‘ಮೆಟ್ರೋ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರದ ಫಸ್ಟ್ ಲುಕ್​ನ ಅವರು ಸೋಶಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿ, ಶುಭಾಶಯ ಕೋರಿದ್ದಾರೆ.

‘ನಾನ್ ವೈಲೆನ್ಸ್’ ಚಿತ್ರದಲ್ಲಿ ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಮುಖ್ಯ ಪಾತ್ರ ಮಾಡಿದ್ದಾರೆ. ಅದಿತಿ ಬಾಲನ್, ‘ಕೆಜಿಎಫ್’ ಖ್ಯಾತಿಯ ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿ ಇದ್ದಾರೆ. ಈಗ ಶಿವರಾಜ್​ಕುಮಾರ್ ಕಡೆಯಿಂದ ಸಿನಿಮಾಗೆ ಮೆಚ್ಚುಗೆ ಸಿಕ್ಕಿರುವುದರಿಂದ ಸಹಜವಾಗಿಯೇ ಸಿನಿಮಾದ ತಂಡದ ಬಲ ಹೆಚ್ಚಿದಂತೆ ಆಗಿದೆ.

ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳನ್ನು ಇಟ್ಟುಕೊಂಡು ‘ನಾನ್ ವೈಲೆನ್ಸ್’ ಸಿನಿಮಾ ಮಾಡಲಾಗಿದೆ. 90ರ ದಶಕದ ಕಥೆಯನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ‘ಮೆಟ್ರೋ’ ಮತ್ತು ‘ಕೊಡಿಯಲ್ಲಿ ಒರುವನ್’ ಚಿತ್ರಗಳ ಮೂಲಕ ನಿರ್ದೇಶಕ ಆನಂದ ಕೃಷ್ಣನ್ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರ ಹೊಸ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ‘ಉತ್ತರಕಾಂಡ’ ಶೂಟಿಂಗ್​ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​

ಈಗಾಗಲೇ ‘ನಾನ್ ವೈಲೆನ್ಸ್’ ಶೂಟಿಂಗ್ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಆಗಲಿದೆ. ‘ನಾನ್ ವೈಲೆನ್ಸ್’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ‘ಎಕೆ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಲೇಖಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರೆಟ್ರೋ ಕಾಲದ ಫೀಲ್ ಕೊಡಲು ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ. ಯುವಾನ್ ಶಂಕರ್ ರಾಜ್ ಸಂಗೀತ ಸಂಯೋಜನೆ, ಎನ್​ಎಸ್ ಉದಯ್ ಕುಮಾರ್ ಛಾಯಾಗ್ರಹಣ, ಶ್ರೀಕಾಂತ್ ಎನ್​ಬಿ ಸಂಕಲನ ಈ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್