Shivarajkumar: ತಮಿಳು ಸಿನಿಮಾಗೆ ಶಿವಣ್ಣ ಸಾಥ್; ಈ ಚಿತ್ರದಲ್ಲಿದೆ ರೆಟ್ರೋ ಕಥೆ  

ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳನ್ನು ಇಟ್ಟುಕೊಂಡು ‘ನಾನ್ ವೈಲೆನ್ಸ್’ ಸಿನಿಮಾ ಮಾಡಲಾಗಿದೆ. 90ರ ದಶಕದ ಕಥೆಯನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ‘ಮೆಟ್ರೋ' ಮತ್ತು ‘ಕೊಡಿಯಲ್ಲಿ ಒರುವನ್' ಚಿತ್ರಗಳ ಮೂಲಕ ನಿರ್ದೇಶಕ ಆನಂದ ಕೃಷ್ಣನ್ ಮೆಚ್ಚುಗೆ ಪಡೆದಿದ್ದಾರೆ.

Shivarajkumar: ತಮಿಳು ಸಿನಿಮಾಗೆ ಶಿವಣ್ಣ ಸಾಥ್; ಈ ಚಿತ್ರದಲ್ಲಿದೆ ರೆಟ್ರೋ ಕಥೆ  
ಶಿವರಾಜ್​ಕುಮಾರ್

Updated on: May 30, 2024 | 2:09 PM

ನಟ ಶಿವರಾಜ್​ಕುಮಾರ್ (Shivarajkumar) ಅವರು ಹೊಸ ಸಿನಿಮಾಗಳಿಗೆ ಬೆಂಬಲ ನೀಡುತ್ತಾರೆ. ಕೇವಲ ಕನ್ನಡ ಮಾತ್ರವಲ್ಲದೆ ಪರಭಾಷೆಯ ಚಿತ್ರಗಳಿಗೂ ಅವರು ವಿಶ್ ತಿಳಿಸಿದ್ದು ಇದೆ. ಈಗ ತಮಿಳಿನ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ‘ನಾನ್ ವೈಲೆನ್ಸ್’ ಚಿತ್ರಕ್ಕೆ ಶಿವರಾಜ್​ಕುಮಾರ್ ಸಾಥ್ ನೀಡಿದ್ದಾರೆ. ಈ ಮೊದಲು ‘ಮೆಟ್ರೋ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರದ ಫಸ್ಟ್ ಲುಕ್​ನ ಅವರು ಸೋಶಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿ, ಶುಭಾಶಯ ಕೋರಿದ್ದಾರೆ.

‘ನಾನ್ ವೈಲೆನ್ಸ್’ ಚಿತ್ರದಲ್ಲಿ ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಮುಖ್ಯ ಪಾತ್ರ ಮಾಡಿದ್ದಾರೆ. ಅದಿತಿ ಬಾಲನ್, ‘ಕೆಜಿಎಫ್’ ಖ್ಯಾತಿಯ ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿ ಇದ್ದಾರೆ. ಈಗ ಶಿವರಾಜ್​ಕುಮಾರ್ ಕಡೆಯಿಂದ ಸಿನಿಮಾಗೆ ಮೆಚ್ಚುಗೆ ಸಿಕ್ಕಿರುವುದರಿಂದ ಸಹಜವಾಗಿಯೇ ಸಿನಿಮಾದ ತಂಡದ ಬಲ ಹೆಚ್ಚಿದಂತೆ ಆಗಿದೆ.

ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳನ್ನು ಇಟ್ಟುಕೊಂಡು ‘ನಾನ್ ವೈಲೆನ್ಸ್’ ಸಿನಿಮಾ ಮಾಡಲಾಗಿದೆ. 90ರ ದಶಕದ ಕಥೆಯನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ‘ಮೆಟ್ರೋ’ ಮತ್ತು ‘ಕೊಡಿಯಲ್ಲಿ ಒರುವನ್’ ಚಿತ್ರಗಳ ಮೂಲಕ ನಿರ್ದೇಶಕ ಆನಂದ ಕೃಷ್ಣನ್ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರ ಹೊಸ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ‘ಉತ್ತರಕಾಂಡ’ ಶೂಟಿಂಗ್​ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​

ಈಗಾಗಲೇ ‘ನಾನ್ ವೈಲೆನ್ಸ್’ ಶೂಟಿಂಗ್ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಆಗಲಿದೆ. ‘ನಾನ್ ವೈಲೆನ್ಸ್’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ‘ಎಕೆ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಲೇಖಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರೆಟ್ರೋ ಕಾಲದ ಫೀಲ್ ಕೊಡಲು ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ. ಯುವಾನ್ ಶಂಕರ್ ರಾಜ್ ಸಂಗೀತ ಸಂಯೋಜನೆ, ಎನ್​ಎಸ್ ಉದಯ್ ಕುಮಾರ್ ಛಾಯಾಗ್ರಹಣ, ಶ್ರೀಕಾಂತ್ ಎನ್​ಬಿ ಸಂಕಲನ ಈ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us