AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ಗೆ ಶಿವಣ್ಣನೇ.. ದಿ ಲೀಡರ್!

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸಂಕಷ್ಟದಲ್ಲಿದೆ. ಹೀಗಾಗಿ ಕೆಲವೊಂದು ಉದ್ಯಮಗಳಿಗೆ ರಾಜ್ಯ ಸರ್ಕಾರ ಕೆಲ ಪ್ಯಾಕೆಜ್‌ಗಳನ್ನ ಘೋಷಿಸಿದೆ. ಆದ್ರೆ ಚಿತ್ರರಂಗದತ್ತ ಕಣ್ಣೆತ್ತಿಯೂ ನೋಡಿಲ್ಲ. ಹೀಗಾಗಿ ಈ ಕುರಿತು ಚರ್ಚಿಸಲು ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ಸೇರುತ್ತಿದ್ದಾರೆ. ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸಂಕಷ್ಟ ಎದುರಿಸಲು ವಿವಿಧ ರಂಗಗಳಿಗೆ ಕೆಲ ಪ್ಯಾಕೆಜ್‌ ಘೋಷಿಸಿದ್ದಾರೆ. ಆದ್ರೆ ಸ್ಯಾಂಡಲ್‌ವುಡ್‌ಗೆ ಯಾವುದೇ ಪರಿಹಾರವಾಗಲಿ ಪ್ಯಾಕೆಜ್‌ಗಳನ್ನಾಗಲಿ ಪ್ರಕಟಿಸಿಲ್ಲ. ಹೀಗಾಗಿ ನಿರಾಶೆಗೊಂಡಿರುವ ಚಿತ್ರರಂಗದ ಗಣ್ಯರು ಈ ಬಗ್ಗೆ ಚರ್ಚಿಸಲು ನಟ ಶಿವರಾಜ್‌ಕುಮಾರ್‌ ಅವರ […]

ಕೊರೊನಾ ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ಗೆ ಶಿವಣ್ಣನೇ.. ದಿ ಲೀಡರ್!
Guru
| Edited By: |

Updated on:Jul 25, 2020 | 12:21 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸಂಕಷ್ಟದಲ್ಲಿದೆ. ಹೀಗಾಗಿ ಕೆಲವೊಂದು ಉದ್ಯಮಗಳಿಗೆ ರಾಜ್ಯ ಸರ್ಕಾರ ಕೆಲ ಪ್ಯಾಕೆಜ್‌ಗಳನ್ನ ಘೋಷಿಸಿದೆ. ಆದ್ರೆ ಚಿತ್ರರಂಗದತ್ತ ಕಣ್ಣೆತ್ತಿಯೂ ನೋಡಿಲ್ಲ. ಹೀಗಾಗಿ ಈ ಕುರಿತು ಚರ್ಚಿಸಲು ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ಸೇರುತ್ತಿದ್ದಾರೆ.

ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸಂಕಷ್ಟ ಎದುರಿಸಲು ವಿವಿಧ ರಂಗಗಳಿಗೆ ಕೆಲ ಪ್ಯಾಕೆಜ್‌ ಘೋಷಿಸಿದ್ದಾರೆ. ಆದ್ರೆ ಸ್ಯಾಂಡಲ್‌ವುಡ್‌ಗೆ ಯಾವುದೇ ಪರಿಹಾರವಾಗಲಿ ಪ್ಯಾಕೆಜ್‌ಗಳನ್ನಾಗಲಿ ಪ್ರಕಟಿಸಿಲ್ಲ. ಹೀಗಾಗಿ ನಿರಾಶೆಗೊಂಡಿರುವ ಚಿತ್ರರಂಗದ ಗಣ್ಯರು ಈ ಬಗ್ಗೆ ಚರ್ಚಿಸಲು ನಟ ಶಿವರಾಜ್‌ಕುಮಾರ್‌ ಅವರ ಮನೆಯಲ್ಲಿ ಸಭೆ ಸೇರುತ್ತಿದ್ದಾರೆ.

ಈ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅದರ ಸಂಸ್ಥೆಗಳು ಕೂಡಾ ಸಭೆಯಲ್ಲಿ ಭಾಗಿಯಾಗಲಿವೆ. ಸಭೆಯಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ಚರ್ಚಿಯಾಗಲಿದೆ.

ಸಭೆಯ ನಂತರ ಶಿವರಾಜ್ ಕುಮಾರ್ ಅವರ ನೇತೃತ್ವದಲ್ಲಿ ಚಿತ್ರರಂಗದ ಪ್ರಮುಖರು ಮುಖ್ಯಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆಗಳನ್ನ ಅವರ ಗಮನಕ್ಕೆ ತರಲಿದ್ದಾರೆ. ಹಾಗೇನೆ ಸರ್ಕಾರದಿಂದ ಕೆಲ ಪ್ಯಾಕೆಜ್‌ಗಳಿಗೆ ಬೇಡಿಕೆಯಿಡಲಿದ್ದಾರೆ. ಅಂಬರೀಷ್‌ ನಿಧನದ ನಂತರ ಇದೇ ಮೊದಲ ಬಾರಿಗೆ ಚಿತ್ರರಂಗದ ಪ್ರಮುಖರು ಸಭೆ ಸೇರುತ್ತಿದ್ದು, ಇದಕ್ಕೆ ಶಿವರಾಜ್‌ಕುಮಾರ್‌ ನೇತೃತ್ವ ವಹಿಸುತ್ತಿರೋದು ವಿಶೇಷ.

Published On - 3:34 pm, Thu, 23 July 20

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ