AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಶ್ರೀಮುರಳಿ ಕಾಲಿಗೆ ಮತ್ತೆ ಪೆಟ್ಟು; ಅರ್ಧಕ್ಕೆ ನಿಂತ ‘ಬಘೀರ’ ಶೂಟಿಂಗ್

‘ಬಘೀರ’ ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಡ್ಯೂಪ್ ಬಳಸದೆ ಸ್ವತಃ ಶ್ರೀಮುರಳಿ ಅವರೇ ಸ್ಟಂಟ್​ಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಶೂಟಿಂಗ್​ನ ಫೈಟಿಂಗ್ ಸೀನ್ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಅವರು ಸರ್ಜರಿಗೆ ಒಳಗಾಗಿ ಎರಡು ತಿಂಗಳು ರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ನಟ ಶ್ರೀಮುರಳಿ ಕಾಲಿಗೆ ಮತ್ತೆ ಪೆಟ್ಟು; ಅರ್ಧಕ್ಕೆ ನಿಂತ ‘ಬಘೀರ’ ಶೂಟಿಂಗ್
ಶ್ರೀಮುರಳಿ
Mangala RR
| Updated By: ರಾಜೇಶ್ ದುಗ್ಗುಮನೆ|

Updated on:Apr 22, 2024 | 7:10 AM

Share

ನಟ ಶ್ರೀಮುರಳಿ  (Srimurali) ಕಾಲಿಗೆ ಮತ್ತೆ ಗಾಯ ಆಗಿದೆ. ಅವರ ನಟನೆಯ ‘ಬಘೀರ’ ಸಿನಿಮಾ ಶೂಟಿಂಗ್ ವೇಳೆ ಈ ದುರ್ಘಟನೆ ನಡೆದಿದೆ. ಇದರಿಂದ ಅವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಶ್ರೀಮುರಳಿ ನಟನೆಯ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾದ ರಿಲೀಸ್​ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. 2021ರ ‘ಮದಗಜ’ ಬಳಿಕ ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

‘ಬಘೀರ’ ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಗೊತ್ತಾಗಿದೆ. ಡ್ಯೂಪ್ ಬಳಸದೆ ಸ್ವತಃ ಶ್ರೀಮುರಳಿ ಅವರೇ ಸ್ಟಂಟ್​ಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಈ ಚಿತ್ರದ ಶೂಟಿಂಗ್​ನ ಫೈಟಿಂಗ್ ಸೀನ್ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಅವರು ಸರ್ಜರಿಗೆ ಒಳಗಾಗಿ ಎರಡು ತಿಂಗಳು ರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

‘ಬಘೀರ’ ಚಿತ್ರಿಕರಣದ ಸಮಯದಲ್ಲಿ ಚಿತ್ರದಲ್ಲಿನ ಮುಖ್ಯವಾಗಿ ನಡೆಯುವ ಸನ್ನಿವೇಶದ ಬಹು ದೊಡ್ಡ ಸ್ಟಂಟ್ ಸೀನ್ ವೇಳೆ ಶ್ರೀಮುರಳಿ ಅವರಿಗೆ ಕಾಲಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಬಘೀರ’ ಸಿನಿಮಾಗೆ ಖ್ಯಾತ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಬಂಡವಾಳ ಹೂಡುತ್ತಿದೆ. ಸೂರಿ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ರಂಗಾಯಣ ರಘು ಮೊದಲಾದವರು ನಟಿಸುತ್ತಿದ್ದಾರೆ. ಈ ಸಿನಿಮಾಗೆ ಪ್ರಶಾಂತ್ ನೀಲ್ ಹಾಗೂ ಸೂರಿ ಕಥೆ ಬರೆದಿದ್ದಾರೆ.

ಇದನ್ನೂ ಓದಿ: ‘ಭೈರತಿ ರಣಗಲ್​’ನಲ್ಲಿ ಶ್ರೀಮುರಳಿ ಇರ್ತಾರಾ? ಅವರೇ ಕೊಟ್ಟರು ಉತ್ತರ

‘ಮದಗಜ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರಿಕ್ಷೆ ಇದೆ. ಅಂದುಕೊಂಡ ಸಮಯದಲ್ಲಿ ಸಿನಿಮಾ ಕೆಲಸ ಪೂರ್ಣಗೊಳಿಸಲು ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಇದರ ಜೊತೆಗೆ ಶ್ರೀಮುರಳಿ ಅವರ ಕಾಲಿಗೆ ಪದೇ ಪದೇ ಗಾಯ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Mon, 22 April 24

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ