AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!
ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ ಸುದೀಪ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 04, 2021 | 11:56 AM

Share

ಮೈಸೂರು: ಜಿಲ್ಲೆಯ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದು ನಟ ಸುದೀಪ್ ಜೊತೆ ನಿರ್ದೇಶಕ ಅನೂಪ್ ಭಂಡಾರಿ ಸಹ ಆಗಮಿಸಿದ್ರು. ಕಿಚ್ಚ ಸುದೀಪ್​​ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ದೃಶ್ಯ ಕಂಡು ಬಂದಿದೆ.

ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸದ್ಯ ಈಗ ಫ್ಯಾಂಟಮ್ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಹಾಗೂ ಕಿಚ್ಚ ಸುದೀಪ್ ಅದೇ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ನಿರ್ದೇಶಕ ಹಾಗೂ ನಟ ಇಬ್ಬರೂ ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವಿಯ ಆಶೀರ್ವಾದ ಪಡೆದ್ರು.

ದೇವಾಲಯದಲ್ಲಿ ಪ್ರದಕ್ಷಿಣೆ ಹಾಕುವ ವೇಳೆ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಲು ಕೆಲ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು. ಹಾಗೂ ಅಭಿಮಾನಿಯೊಬ್ಬನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದ್ರು. ಇದರ ಜೊತೆಗೆ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಘಟನೆ ಸಹ ನಡೀತು.

ಫ್ಯಾಂಟಮ್‌ ಕಿಚ್ಚ ಎದುರು ಸೊಂಟ ಬಳುಕಿಸಿ.. ಕಿಚ್ಚು ಹಚ್ಚಲು ಬರ್ತಿದ್ದಾರೆ ಬಾಲಿವುಡ್‌ನ ಈ ನಟಿ..!

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!