AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಸುದೀಪ್, ಅಪಪ್ರಚಾರದ ವಿರುದ್ಧ ಮುನ್ನೆಚ್ಚರಿಕೆ ಎಂದ ನಟ

Kichcha Sudeep: ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಕಿಚ್ಚ ಸುದೀಪ್, ಅಪಪ್ರಚಾರದ ವಿರುದ್ಧ ಮುನ್ನೆಚ್ಚರಿಕೆ ಎಂದ ನಟ

ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಸುದೀಪ್, ಅಪಪ್ರಚಾರದ ವಿರುದ್ಧ ಮುನ್ನೆಚ್ಚರಿಕೆ ಎಂದ ನಟ
ಸುದೀಪ್
ಮಂಜುನಾಥ ಸಿ.
|

Updated on:Apr 11, 2023 | 10:45 PM

Share

ನಟ ಕಿಚ್ಚ ಸುದೀಪ್ (Sudeep) ಬಿಜೆಪಿಗೆ (BJP) ಬೆಂಬಲ ಸೂಚಿಸಿದ ಬೆನ್ನಲ್ಲೆ, ಕೆಲವು ಕಿಡಿಗೇಡಿಗಳು, ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದ್ದರು. ಆ ಬಗ್ಗೆ ದೂರು ಸಹ ದಾಖಲಾಗಿ ತನಿಖೆ ನಡೆಯುತ್ತಿದೆ. ಈ ನಡುವೆ ಸುದೀಪ್ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದಿದ್ದಾರೆ. ದುರುಳರು ತಮ್ಮ ತಿರುಚಿದ ವಿಡಿಯೋ, ಫೇಕ್ ವಿಡಿಯೋಗಳ ಮೂಲಕ ಮಾನಹಾನಿಗೆ ಯತ್ನಿಸುವ ಅಪಾಯವಿದೆಯಾದ್ದರಿಂದ ಇದು ಮುನ್ನೆಚ್ಚರಿಕಾ ಕ್ರಮವಷ್ಟೆ ಎಂದಿದ್ದಾರೆ ನಟ ಸುದೀಪ್.

ಈ ಬಗ್ಗೆ ಮಾಧ್ಯಮಗಳಿಗೂ ಮನವಿ ಮಾಡಿರುವ ನಟ ಸುದೀಪ್, ”ನನ್ನ-ನಿಮ್ಮ ಅವಿನಾಭಾವ ಸಂಬಂಧ ಒಂದು ಕುಟುಂಬದಂತದ್ದು. ಕೆಲವು ಕಿಡಿಗೇಡಿಗಳು ನನ್ನದಲ್ಲದ ತಿರುಚಿದ ಜೋಡಿಸಿದ ಕೃತಕವಾದ (morphed) ವೀಡಿಯೋ ತುಣುಕುಗಳ ವಿರುದ್ಧದ ಮುನ್ನೆಚರಿಕೆಯಷ್ಟೇ ಇದು. ಮಾಧ್ಯಮವೆಂದರೆ ಇವತ್ತಿಗೆ ನಿಮ್ಮಗಳ ಜೊತೆಗೇ ಸಾಮಾಜಿಕ ಜಾಲತಾಣ ಸೇರಿದಂತೆ ಹಲವಾರು ಡಿಜಿಟಲ್ ವೇದಿಕೆಗಳಿವೆ. ಅವುಗಳನ್ನು ದುರ್ಬಳಕೆ ಮಾಡಿಕೊಂಡು ಚಾರಿತ್ರ್ಯವಧೆ ಮಾಡುವ ಹುನ್ನಾರದ ವಿರುದ್ಧ ಈ ತಡೆಯಾಜ್ಞೆಯನ್ನು ವಕೀಲರ ಸಲಹೆ ಮೇರೆಗೆ ತಂದಿದ್ದೇನೆ ವಿನಃ ಬೇರೆ ಯಾವ ಕಾರಣಕ್ಕೂ ಅಲ್ಲ. ಜೊತೆಗೆ ನಿಮ್ಮಗಳನ್ನು ಹೊರತುಪಡಿಸಿ ಸಾಮಾಜಿಕ ಜಾಲತಾಣ, ಡಿಜಿಟಲ್ ವೇದಿಕೆಗಳ ಮೇಲೆ ನ್ಯಾಯಾಲಯ ತಡೆಯಾಜ್ಞೆ ಕೊಡದು. ಈ ಸೂಕ್ಷ್ಮ ತಮಗೂ ಗೊತ್ತಿದೆ ಹಾಗಾಗಿ ಅನ್ಯಥಾ ಭಾವಿಸಬಾರದಾಗಿ ವಿನಂತಿ ಎಂದಿದ್ದಾರೆ ನಟ ಸುದೀಪ್.

ಸುದೀಪ್, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿರುವ ಬೆನ್ನಲ್ಲೆ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದರು. ಆ ಬಗ್ಗೆ ಮಾತನಾಡಿದ್ದ ನಟ ಸುದೀಪ್, ಈ ಕಾರ್ಯವನ್ನು ಚಿತ್ರರಂಗದವರೇ ಮಾಡಿರುವ ಗುಮಾನಿ ವ್ಯಕ್ತಪಡಿಸಿದ್ದಲ್ಲದೆ, ಆ ಬಗ್ಗೆ ದೂರು ಸಹ ದಾಖಲಾಗಿತ್ತು. ತನಿಖೆ ನಡೆಸಿರುವ ಪೊಲೀಸರಿಗೆ ಬೆದರಿಕೆ ಪತ್ರ ಕಳಿಸಲಾಗಿರುವುದು ಆಗಿರುವುದು ದೊಮ್ಮಲೂರು ಅಂಚೆ ಕಚೇರಿಯಿಂದ ಎಂಬುದು ಗೊತ್ತಾಗಿದೆ.

ಬೆದರಿಕೆ ಪತ್ರದ ಮೂಲ ಹುಡುಕಿ ಹೊರಟಾಗ ಇನ್ನಷ್ಟು ವಿವರಗಳು ಲಭ್ಯವಾಗಿದ್ದು, ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ಬಂದು ಪೋಸ್ಟ್ ಬಾಕ್ಸ್​ಗೆ ಬೆದರಿಕೆ ಪತ್ರ ಹಾಕಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಈ ಕಾರಿನ ನಂಬರ್​ ಪ್ಲೇಟ್​ ಆದರಿಸಿ ತನಿಖೆ ನಡೆಸಿದಾಗ ನಂಬರ್ ಪ್ಲೇಟ್ ನಕಲಿ ಎಂಬುದು ತಿಳಿದು ಬಂದಿದೆ. ಕೆಂಗೇರಿ ಬಳಿಯ ವ್ಯಕ್ತಿಯೊಬ್ಬರಿಗೆ ಸೇರಿರುವ ಸ್ವಿಫ್ಟ್ ಕಾರಿನ ಸಂಖ್ಯೆಯನ್ನು ಕಿಡಿಗೇಡಿಗಳು ಬಳಸಿದ್ದಾರೆ. ಆದರೆ ಬೆದರಿಕೆ ಪತ್ರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಆ ವ್ಯಕ್ತಿ ಹೇಳಿದ್ದಾರೆ. ನಂಬರ್ ಪ್ಲೇಟ್​ ಬದಲಿಸಿ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ. ಬೆದರಿಕೆ ಪತ್ರ ಬರೆದ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಆದಷ್ಟು ಬೇಗ ಕಿಡಿಗೇಡಿಗಳು ಪತ್ತೆಯಾಗಲಿ ಎಂದು ಸುದೀಪ್​ ಫ್ಯಾನ್ಸ್​ ಕಾಯುತ್ತಿದ್ದಾರೆ.

ಬೆದರಿಕೆ ಪತ್ರ ಬಂದಿರುವುದರ ಹಿಂದೆ ರಾಜಕೀಯದವರ ಕೈವಾಡ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್​ ಅವರು ಏಪ್ರಿಲ್​ 5ರಂದು ಪ್ರತಿಕ್ರಿಯೆ ನೀಡಿದ್ದರು. ಬೆದರಿಕೆ ಪತ್ರ ಬರೆದಿರುವುದು ರಾಜಕೀಯದವರಿಂದಲ್ಲ ಎಂದಿದ್ದ ಸುದೀಪ್ ‘ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಯಾರು ಅಂತ ಗೊತ್ತಿದ್ದರೂ ಕೂಡ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದು ಸುದೀಪ್​ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:44 pm, Tue, 11 April 23

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು