AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಸಿನಿಮಾ ಸಹಿಹಾಕಿದ ಬಳಿಕ ಬದಲಾಯ್ತು ಸುಧೀರ್ ಬದುಕು

1973ರ ‘ಬೀಸಿದ ಬಲೆ’ ಸಿನಿಮಾ ಮೂಲಕ ಸುಧೀರ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಏಳೆಂಟು ವರ್ಷಗಳಲ್ಲಿ ಕೆಲವೇ ಕೆಲವು ಸಿನಿಮಾ ಮಾಡಿದರು. 1981ರಲ್ಲಿ ರಿಲೀಸ್ ಆದ ರಾಜ್​ಕುಮಾರ್ ನಟನೆಯ ‘ನೀ ನನ್ನ ಗೆಲ್ಲಲಾರೆ’ ಹಾಗೂ ‘ಕೆರಳಿದ ಸಿಂಹ’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿ ಅವರು ಗಮನ ಸೆಳೆದರು.

ರಾಜ್​ಕುಮಾರ್ ಸಿನಿಮಾ ಸಹಿಹಾಕಿದ ಬಳಿಕ ಬದಲಾಯ್ತು ಸುಧೀರ್ ಬದುಕು
ರಾಜ್​ಕುಮಾರ್ ಸಿನಿಮಾ ಸಹಿಹಾಕಿದ ಬಳಿಕ ಬದಲಾಯ್ತು ಸುಧೀರ್ ಬದುಕು
ರಾಜೇಶ್ ದುಗ್ಗುಮನೆ
|

Updated on: Aug 24, 2024 | 12:48 PM

Share

ನಟ ಸುಧೀರ್ ಅವರು ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ಅವರಿಗೆ ಬೇಡಿಕೆಯ ಖಳನಟನಾಗಿ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದರು. ಅವರ ಮಗ ತರುಣ್ ಈಗ ಚಿತ್ರರಂಗದ ಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸುಧೀರ್ ಅವರ ಬದುಕು ಆರಂಭದಲ್ಲಿ ಸಾಮಾನ್ಯ ಕಲಾವಿದರ ರೀತಿಯೇ ಇತ್ತು. ಯಾವಾಗ ರಾಜ್​ಕುಮಾರ್ ಸಿನಿಮಾ ಸಹಿ ಹಾಕಿದರೋ ಅಲ್ಲಿಂದ ಅವರ ಬದುಕು ಬದಲಾಯ್ತು. ಈ ಬಗ್ಗೆ ಸುಧೀರ್ ಪತ್ನಿ ಮಾಲತಿ ಸುಧೀರ್ ಅವರು ಮಾತನಾಡಿದ್ದರು.

1973ರ ‘ಬೀಸಿದ ಬಲೆ’ ಸಿನಿಮಾ ಮೂಲಕ ಸುಧೀರ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಏಳೆಂಟು ವರ್ಷಗಳಲ್ಲಿ ಕೆಲವೇ ಕೆಲವು ಸಿನಿಮಾ ಮಾಡಿದರು. 1981ರಲ್ಲಿ ರಿಲೀಸ್ ಆದ ರಾಜ್​ಕುಮಾರ್ ನಟನೆಯ ‘ನೀ ನನ್ನ ಗೆಲ್ಲಲಾರೆ’ ಹಾಗೂ ‘ಕೆರಳಿದ ಸಿಂಹ’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿ ಅವರು ಗಮನ ಸೆಳೆದರು. ರಾಜ್​ಕುಮಾರ್ ಜೊತೆ ಸುಧೀರ್ ನಟಿಸಬೇಕು ಎಂಬುದು ಪತ್ನಿ ಮಾಲತಿ ಅವರ ಆಸೆಯೂ ಆಗಿತ್ತು.

ರಾಜ್​ಕುಮಾರ್ ಸಿನಿಮಾದಲ್ಲಿ ನನ್ನ ಪತಿ ನಟಿಸಬೇಕಿತ್ತು ಎಂಬುದು ನನ್ನ ಆಸೆ ಆಗಿತ್ತು. ‘ರಾಘವೇಂದ್ರ ಸ್ವಾಮಿ ಇದಾನೆ ಬಿಡು’ ಎಂದು ಸುಧೀರ್ ಅವರು ಮಾಲತಿಗೆ ಹೇಳಿದ್ದರು. ದೇವರ ಮೇಲೆ ಮಾಲತಿಗೆ ಅಷ್ಟಾಗಿ ನಂಬಿಕೆ ಇರಲಿಲ್ಲ. ಹೀಗಾಗಿ, ಈ ಮಾತನ್ನು ಅವರು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಆದರೆ ಒಂದು ದಿನ ಚಮತ್ಕಾರ ನಡೆಯಿತು.

ರಾಯರ ವಾರ ಗುರುವಾರವೇ ರಾಜ್​ಕುಮಾರ್ ಅವರು ಸುಧೀರ್ ಮನೆಗೆ ಬಂದರು. ಕಾರು ಬಂದು ನಿಂತಿದ್ದು ನೋಡಿದ ಮಾಲತಿ ಅವರು ಹೋಗಿ ನೋಡಿದರೆ ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಕಾರಲ್ಲಿ ಇದ್ದಿದ್ದರು. ‘ಸುಧೀರ್​ಗೆ ಬರೋಕೆ ಹೇಳು. ಇಲ್ಲೇ ವರದಣ್ಣವರ ಮನೆಯಲ್ಲಿ ಇರುತ್ತೇನೆ’ ಎಂದು ಹೇಳಿ ರಾಜ್​ಕುಮಾರ್ ಅವರು ತೆರಳಿದ್ದರು. ಅಲ್ಲಿ ಮಾತನಾಡಿದರು. ಆ ಬಳಿಕ ಕಚೇರಿಗೆ ಬರೋಕೆ ಹೇಳಿದ್ದರು.

ಇದನ್ನೂ ಓದಿ: ತರುಣ್​-ಸೋನಲ್​ ಮದುವೆಗೆ ಚಂದದ ಸೀರೆ ಧರಿಸಿ ಬಂದ ಆಶಿಕಾ ರಂಗನಾಥ್

ಕಚೇರಿಗೆ ಹೋದರೆ ಸುಧೀರ್ ಅವರಿಗೆ ‘ನೀ ನನ್ನ ಗೆಲ್ಲಲಾರೆ’ ಹಾಗೂ ‘ಕೆರಳಿದ ಸಿಂಹ’ದಲ್ಲಿ ನಟಿಸಿದ್ದರು. ಇದರಿಂದ ಅವರ ಬದುಕು ಸಂಪೂರ್ಣವಾಗಿ ಬದಲಾಗಿತ್ತು. ಈ ವಿಚಾರವನ್ನು ಮಾಲತಿ ಅವರೇ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ