AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ

ಇಷ್ಟು ದಿನ ಉಪೇಂದ್ರ ಅವರು ಸೋಲಿನ ವಿಚಾರದಲ್ಲಿ ಮೌನವಾಗಿದ್ದರು. ಈಗ ಅವರು ಒಗಟಿನ ರೂಪದಲ್ಲಿ ಟ್ವೀಟ್ ಮಾಡಿದ್ದಾರೆ.

‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: May 18, 2023 | 10:19 AM

Share

ನಟ ಉಪೇಂದ್ರ (Upendra) ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪಿಸಿರುವ ಅವರು ಅದರ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ಸದಸ್ಯರು ಸ್ಪರ್ಧೆ ಮಾಡಿದ್ದರು. ಆದರೆ, ಯಾರೊಬ್ಬರೂ ಗೆಲ್ಲಲು ಸಾಧ್ಯವಾಗಲೇ ಇಲ್ಲ. ಇಷ್ಟು ದಿನ ಉಪೇಂದ್ರ ಅವರು ಸೋಲಿನ ವಿಚಾರದಲ್ಲಿ ಮೌನವಾಗಿದ್ದರು. ಈಗ ಅವರು ಒಗಟಿನ ರೂಪದಲ್ಲಿ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವೇನು ಎಂಬ ಬಗ್ಗೆ ಅನೇಕರಿಗೆ ಪ್ರಶ್ನೆ ಮೂಡಿದೆ.

ಮಾರ್ಮಿಕವಾಗಿ ಟ್ವೀಟ್ ಮಾಡಿರುವ ಉಪೇಂದ್ರ, ‘ಒಂದು ದೊಡ್ಡ ಕಲ್ಲು ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಅದನ್ನು ಎತ್ತಲು ಹತ್ತು ಜನ ಬೇಕು. ಅದನ್ನು ನಾವೆಲ್ಲಾ ಸೇರಿ ತೆಗೆಯೋಣ ಎಂದರೆ ‘ನೀವು ಎತ್ತಿ ತೋರಿಸಿ ನಾವು ಜೊತೆ ಸೇರುತ್ತೇವೆ’ ಎನ್ನುತ್ತಿದ್ದಾರೆ. ಏನು ಮಾಡುವುದು? ಜನಸಾಮಾನ್ಯ ಅಲ್ಲ. ಜನ ಅಸಾಮಾನ್ಯರು ತಿಳಿಸಿ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ‘ಯಾರನ್ನೂ ಬಲವಂತ ಮಾಡಬಾರದು’ ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅವರು ಪ್ರಜಾಕೀಯ ಹ್ಯಾಶ್​ಟ್ಯಾಗ್ ಹಾಕಿದ್ದಾರೆ. ಈ ಟ್ವೀಟ್ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ಆಗುತ್ತಿದೆ. ನಾನಾ ರೀತಿಯಲ್ಲಿ ಇದ್ನು ಅರ್ಥೈಸಲಾಗುತ್ತಿದೆ.

ಇದನ್ನೂ ಓದಿ: ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಚುನಾವಣೆಗೂ ಮೊದಲು ಟ್ವೀಟ್ ಮಾಡಿದ್ದ ಉಪೇಂದ್ರ, ‘ನಂಬಿದರೆ ನಂಬಿ ಬಿಟ್ಟರೆ ಬಿಡಿ. ತುಂಬಾ ರಾಜಕಾರಿಣಿಗಳ ಮಕ್ಕಳೇ ಪ್ರಜಾಕಾರಿಣಿಗಳು. ರಾಜಕಾರಿಣಿಗಳ ಮನೆಯಲ್ಲೇ ವೋಟ್ ಡಿವೈಡ್ ಮಾಡಿ, ಪ್ರಜಾಕೀಯಕ್ಕೆ ವೋಟ್ ಹಾಕಿಸಿದ್ದಾರೆ ನಮ್ಮ ಅಸಾಮಾನ್ಯ ಪ್ರಜಾ ಪ್ರಭುಗಳು’ ಎಂದು ಬರೆದುಕೊಂಡಿದ್ದರು. ಆದರೆ, ಪ್ರಜಾಕೀಯ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ