AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ

ಇಷ್ಟು ದಿನ ಉಪೇಂದ್ರ ಅವರು ಸೋಲಿನ ವಿಚಾರದಲ್ಲಿ ಮೌನವಾಗಿದ್ದರು. ಈಗ ಅವರು ಒಗಟಿನ ರೂಪದಲ್ಲಿ ಟ್ವೀಟ್ ಮಾಡಿದ್ದಾರೆ.

‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: May 18, 2023 | 10:19 AM

Share

ನಟ ಉಪೇಂದ್ರ (Upendra) ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪಿಸಿರುವ ಅವರು ಅದರ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ಸದಸ್ಯರು ಸ್ಪರ್ಧೆ ಮಾಡಿದ್ದರು. ಆದರೆ, ಯಾರೊಬ್ಬರೂ ಗೆಲ್ಲಲು ಸಾಧ್ಯವಾಗಲೇ ಇಲ್ಲ. ಇಷ್ಟು ದಿನ ಉಪೇಂದ್ರ ಅವರು ಸೋಲಿನ ವಿಚಾರದಲ್ಲಿ ಮೌನವಾಗಿದ್ದರು. ಈಗ ಅವರು ಒಗಟಿನ ರೂಪದಲ್ಲಿ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವೇನು ಎಂಬ ಬಗ್ಗೆ ಅನೇಕರಿಗೆ ಪ್ರಶ್ನೆ ಮೂಡಿದೆ.

ಮಾರ್ಮಿಕವಾಗಿ ಟ್ವೀಟ್ ಮಾಡಿರುವ ಉಪೇಂದ್ರ, ‘ಒಂದು ದೊಡ್ಡ ಕಲ್ಲು ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಅದನ್ನು ಎತ್ತಲು ಹತ್ತು ಜನ ಬೇಕು. ಅದನ್ನು ನಾವೆಲ್ಲಾ ಸೇರಿ ತೆಗೆಯೋಣ ಎಂದರೆ ‘ನೀವು ಎತ್ತಿ ತೋರಿಸಿ ನಾವು ಜೊತೆ ಸೇರುತ್ತೇವೆ’ ಎನ್ನುತ್ತಿದ್ದಾರೆ. ಏನು ಮಾಡುವುದು? ಜನಸಾಮಾನ್ಯ ಅಲ್ಲ. ಜನ ಅಸಾಮಾನ್ಯರು ತಿಳಿಸಿ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ‘ಯಾರನ್ನೂ ಬಲವಂತ ಮಾಡಬಾರದು’ ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅವರು ಪ್ರಜಾಕೀಯ ಹ್ಯಾಶ್​ಟ್ಯಾಗ್ ಹಾಕಿದ್ದಾರೆ. ಈ ಟ್ವೀಟ್ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ಆಗುತ್ತಿದೆ. ನಾನಾ ರೀತಿಯಲ್ಲಿ ಇದ್ನು ಅರ್ಥೈಸಲಾಗುತ್ತಿದೆ.

ಇದನ್ನೂ ಓದಿ: ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಚುನಾವಣೆಗೂ ಮೊದಲು ಟ್ವೀಟ್ ಮಾಡಿದ್ದ ಉಪೇಂದ್ರ, ‘ನಂಬಿದರೆ ನಂಬಿ ಬಿಟ್ಟರೆ ಬಿಡಿ. ತುಂಬಾ ರಾಜಕಾರಿಣಿಗಳ ಮಕ್ಕಳೇ ಪ್ರಜಾಕಾರಿಣಿಗಳು. ರಾಜಕಾರಿಣಿಗಳ ಮನೆಯಲ್ಲೇ ವೋಟ್ ಡಿವೈಡ್ ಮಾಡಿ, ಪ್ರಜಾಕೀಯಕ್ಕೆ ವೋಟ್ ಹಾಕಿಸಿದ್ದಾರೆ ನಮ್ಮ ಅಸಾಮಾನ್ಯ ಪ್ರಜಾ ಪ್ರಭುಗಳು’ ಎಂದು ಬರೆದುಕೊಂಡಿದ್ದರು. ಆದರೆ, ಪ್ರಜಾಕೀಯ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ