AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ರೆಸಾರ್ಟ್​ ಕಟ್ಟಿದ್ದು ರೈತರ ಭೂಮಿಯಲ್ಲಾ? ಆರೋಪಕ್ಕೆ ರಿಯಲ್ ಸ್ಟಾರ್​ ಖಡಕ್​ ಉತ್ತರ

ತಮ್ಮ ಮೇಲೆ ಎದುರಾದ ಆರೋಪಕ್ಕೆ ಪ್ರತಿಕ್ರಿಯೆ ನೀಡುವ ಸಲುವಾಗಿ ಉಪೇಂದ್ರ ಒಂದು ವಿಡಿಯೋ ಮಾಡಿದ್ದಾರೆ. ಅದರಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಿದ್ದಾರೆ. ಏನಾದರೂ ಹೇಳುವುದಕ್ಕಿಂತ ಮುಂಚೆ ದಾಖಲೆಗಳನ್ನು ಪರಿಶೀಲಿಸಿ ಎಂದು ಅವರು ಹೇಳಿದ್ದಾರೆ.

ಉಪೇಂದ್ರ ರೆಸಾರ್ಟ್​ ಕಟ್ಟಿದ್ದು ರೈತರ ಭೂಮಿಯಲ್ಲಾ? ಆರೋಪಕ್ಕೆ ರಿಯಲ್ ಸ್ಟಾರ್​ ಖಡಕ್​ ಉತ್ತರ
ಉಪೇಂದ್ರ
ಮದನ್​ ಕುಮಾರ್​
|

Updated on: May 27, 2021 | 8:26 AM

Share

ಕೊರೊನಾ ಎರಡನೇ ಅಲೆ ಆರಂಭ ಆದಾಗಿನಿಂದ ನಟ ಉಪೇಂದ್ರ ಅವರು ಜನರ ಸಹಾಯಕ್ಕೆ ನಿಂತಿದ್ದಾರೆ. ಲಾಕ್​ಡೌನ್​ ಕಾರಣದಿಂದ ದುಡಿಮೆ ಇಲ್ಲದೆ ಮನೆಯಲ್ಲಿ ಕಷ್ಟಪಡುತ್ತಿರುವ ಅನೇಕರಿಗೆ ಅವರು ನೆರವಾಗಿದ್ದಾರೆ. ಚಿತ್ರರಂಗದ ಬಡ ಕಾರ್ಮಿಕರಿಗೆ, ಹಿರಿಯ ಕಲಾವಿದರಿಗೆ, ಕಷ್ಟದಲ್ಲಿರುವ ತಂತ್ರಜ್ಞರಿಗೆ ಅವರು ಅಗತ್ಯ ವಸ್ತು ಮತ್ತು ದಿನಸಿ ಕಿಟ್​ಗಳನ್ನು ವಿತರಿಸಿದ್ದಾರೆ. ರೈತರಿಂದ ನೇರವಾಗಿ ತರಕಾರಿಗಳನ್ನು ಖರೀದಿಸುವ ಮೂಲಕ ಅನ್ನದಾತರಿಗೂ ಉಪ್ಪಿ ನೆರವಾಗಿದ್ದಾರೆ. ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡುತ್ತಿರುವ ಅವರ ಮೇಲೆ ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಒಂದು ಆರೋಪ ಎದುರಾಯಿತು. ರೈತರ ಭೂಮಿಯಲ್ಲಿ ಉಪೇಂದ್ರ ರೆಸಾರ್ಟ್​ ಕಟ್ಟಿದ್ದಾರೆ ಎಂಬ ಆರೋಪ ಕೇಳಿಬಂತು. ಅದಕ್ಕೆ ಸ್ವತಃ ಉಪ್ಪಿ ಉತ್ತರ ನೀಡಿದ್ದಾರೆ.

ತಮ್ಮ ಮೇಲೆ ಎದುರಾದ ಆರೋಪಕ್ಕೆ ಪ್ರತಿಕ್ರಿಯೆ ನೀಡುವ ಸಲುವಾಗಿ ಅವರು ಒಂದು ವಿಡಿಯೋ ಮಾಡಿದ್ದಾರೆ. ಅದರಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಿದ್ದಾರೆ. ‘ರೈತರ ಭೂಮಿ ಕಿತ್ತುಕೊಂಡು ನಾವು ಅಲ್ಲಿ ರೆಸಾರ್ಟ್​ ಮಾಡಿದೀವಿ ಎಂದು ಒಬ್ಬರು ಆರೋಪ ಮಾಡಿದ್ದಾರೆ. ದಯವಿಟ್ಟು ತಾವು ಏನಾದರೂ ಹೇಳುವುದಕ್ಕಿಂತ ಮುಂಚೆ ದಾಖಲೆಗಳನ್ನು ಪರಿಶೀಲಿಸಿ. ಸುಮಾರು 13-14 ವರ್ಷಗಳ ಹಿಂದೆ ಅಲ್ಲಿ ವಿಲೇಜ್​ ಅಂತ ಒಂದು ರೆಸಾರ್ಟ್​ ಇತ್ತು. ಅದು ಹರಾಜಿಗೆ ಬಂತಿತ್ತು. ಹರಾಜಿನಲ್ಲಿ ಸರ್ಕಾರದಿಂದ ನೇರವಾಗಿ ಖರೀದಿಸಿ ನಾವು ರುಪ್ಪೀಸ್​ ರೆಸಾರ್ಟ್​ ಮಾಡಿದ್ವಿ. ಮೊದಲೂ ಆ ಜಾಗ ರೆಸಾರ್ಟ್​ ಆಗಿತ್ತು’ ಎಂದು ಉಪೇಂದ್ರ ಹೇಳಿದ್ದಾರೆ.

‘ಆ ರೆಸಾರ್ಟ್​ನ ಹಿಂದಿರುವುದು ಕೃಷಿ ಭೂಮಿ. ಅದನ್ನು ಶಿವಣ್ಣ ಅವರಿಂದ ಖರೀದಿಸಿದ್ದು. ಅದರಲ್ಲಿ ನಾವು ಇಂದಿಗೂ ವ್ಯವಸಾಯ ಮಾಡ್ತಾ ಇದೀವಿ. ಹಲವಾರು ತರಕಾರಿ ಬೆಳೆದಿರುವುದನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ ಕೂಡ. ಅಷ್ಟೂ ನಿಮಗೆ ಅನುಮಾನ ಇದ್ದರೆ ರೆಸಾರ್ಟ್​ಗೆ ಬಂದು ನೋಡಿ. ಅದರ ಹಿಂದಿರುವ ಜಮೀನನ್ನೂ ನೋಡಿ. ಅದು-ಇದು ಒಂದೇ​ ಎಂದು ತಿಳಿದುಕೊಳ್ಳಬೇಡಿ’ ಎಂದು ಉಪೇಂದ್ರ ಉತ್ತರ ನೀಡಿದ್ದಾರೆ.

ಪ್ರಜಾಕೀಯ ಪಕ್ಷ ಹೊಂದಿರುವ ಉಪೇಂದ್ರ ಅವರು ಆಡಳಿತ ಪಕ್ಷಗಳನ್ನು ಯಾಕೆ ಖಂಡಿಸುವುದಿಲ್ಲ? ಹೋರಾಟಗಳನ್ನು ಯಾಕೆ ಮಾಡುವುದಿಲ್ಲ ಎಂಬ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ. ‘ಈ ಹಿಂದೆ ಬೇರೆ ಪಕ್ಷಗಳು ಅಧಿಕಾರದಲ್ಲಿ ಇದ್ದಾಗಲೂ ನಾನು ಖಂಡಿಸಿಲ್ಲ. ಹೋರಾಟ ಮಾಡಿಲ್ಲ. ಯಾಕೆಂದರೆ ಅದರಲ್ಲಿ ನನಗೆ ನಂಬಿಕೆ ಇಲ್ಲ. ಮೂಲವಾಗಿ ಇಲ್ಲಿ ಜನರು ಬದಲಾವಣೆ ಆಗಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

ಕಡುಕಷ್ಟ ಕಾಲದಲ್ಲಿ ಹಿರಿಯ ಕಲಾವಿದರ ಕೈ ಹಿಡಿದ ಉಪೇಂದ್ರ; ಮನಸಾರೆ ಹರಸಿದ ಜೀವಗಳು

‘ನಾನು ಮುಖ್ಯಮಂತ್ರಿ ಆಗ್ಬೇಕು; ನೀವು ನನ್ನ ಗೆಲ್ಲಿಸ್ತೀರಾ?’; ಉಪೇಂದ್ರ ಕೇಳಿದ ಪ್ರಶ್ನೆಗೆ ಜನ ಕೊಟ್ಟ ಉತ್ತರ ಏನು?

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ