‘ಉಪೇಂದ್ರ’ ರಿಲೀಸ್​ಗೂ ಮೊದಲು ಅಭಿಮಾನಿಗಳನ್ನು ಕನ್​ಫ್ಯೂಸ್ ಮಾಡಿದ ಉಪ್ಪಿ

ಉಪೇಂದ್ರ ಬರೆದಿರೋ ಸಾಲುಗಳು ‘ನಾನು’ ವಿಚಾರಕ್ಕೆ ಸಂಬಂಧಿಸಿದೆ. ಅವರು ಕೆಲವರು ಪೋಸ್ಟರ್​ಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವೀನಾ ಟಂಡನ್, ಪ್ರೇಮಾ, ಗುರುಕಿರಣ್​, ಅರುಣ್ ಗೋವಿಲ್ ಮೊದಲಾದವರು ನಟಿಸಿದ್ದರು.

‘ಉಪೇಂದ್ರ’ ರಿಲೀಸ್​ಗೂ ಮೊದಲು ಅಭಿಮಾನಿಗಳನ್ನು ಕನ್​ಫ್ಯೂಸ್ ಮಾಡಿದ ಉಪ್ಪಿ
ಉಪೇಂದ್ರ
Follow us
|

Updated on: Sep 14, 2024 | 2:30 PM

ನಟ ಉಪೇಂದ್ರ ನಿರ್ದೇಶನದ ‘ಉಪೇಂದ್ರ’ ಸಿನಿಮಾ 1999ರ ಅಕ್ಟೋಬರ್ 22ರಂದು ರಿಲೀಸ್ ಆಗಿತ್ತು. ಈ ಸಿನಿಮಾ ರಿಲೀಸ್ ಆಗಿ 25 ವರ್ಷಗಳು ಕಳೆಯುತ್ತಿರುವ ಸಂದರ್ಭದಲ್ಲಿ ಸಿನಿಮಾನ ರೀ-ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಸೆಪ್ಟೆಂಬರ್ 20ರಂದು ಈ ಚಿತ್ರ ರೀ-ರೀಲೀಸ್ ಆಗುತ್ತಿದೆ. ಉಪೇಂದ್ರ ಅವರು ಈ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಫ್ಯಾನ್ಸ್ ತಲೆಗೆ ಹುಳಬಿಟ್ಟಿದ್ದಾರೆ.

ಉಪೇಂದ್ರ ಸಿನಿಮಾದಲ್ಲಿ ಉಪೇಂದ್ರ ಅವರು ‘ನಾನು’ ಹೆಸರಿನ ಪಾತ್ರ ಮಾಡಿದ್ದರು. ಪಾತ್ರದ ಹೆಸರೇ ಸಾಕಷ್ಟು ಗೊಂದಲ ಸೃಷ್ಟಿ ಮಾಡುತ್ತದೆ. ಈಗ ಉಪೇಂದ್ರ ಅವರು ‘ನಾನು’ ಹೆಸರನ್ನೇ ಇಟ್ಟುಕೊಂಡು ಸಾಲುಗಳನ್ನು ಬರೆದಿದ್ದಾರೆ. ‘ನಾನು ‘ನಾನು’ ಬಿಡಕ್ ಟ್ರೈ ಮಾಡ್ತಿದೀನಿ. ಆದ್ರೆ ನೀನು ‘ನಾನು’ನ ಬಿಡ್ತಿಲ್ಲ. ನಿಮ್ಮ ‘ನಾನು’ ರೀ ರಿಲೀಸ್. ಇದೇ ಸೆಪ್ಟೆಂಬರ್ 20ಕ್ಕೆ. 25 ವರ್ಷ ಆದರೂ ಇನ್ನೂ ಈ ಚಿತ್ರದ ಹಾಡು, ಸಂಭಾಷಣೆ ಜೀವಂತವಾಗಿ ಇಟ್ಟಿರುವ ನಿಮಗೆ ನಮಸ್ಕಾರ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

ಸದ್ಯ ಉಪೇಂದ್ರ ಬರೆದಿರೋ ಸಾಲುಗಳು ‘ನಾನು’ ವಿಚಾರಕ್ಕೆ ಸಂಬಂಧಿಸಿದೆ. ಅವರು ಕೆಲವರು ಪೋಸ್ಟರ್​ಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವೀನಾ ಟಂಡನ್, ಪ್ರೇಮಾ, ಗುರುಕಿರಣ್​, ಅರುಣ್ ಗೋವಿಲ್ ಮೊದಲಾದವರು ನಟಿಸಿದ್ದರು.

ಇದನ್ನೂ ಓದಿ: ಉಪೇಂದ್ರ ಕುಟುಂಬದಲ್ಲಿ ಗೌರಿ-ಗಣೇಶ ಹಬ್ಬ ಆಚರಿಸಿದ್ದು ಹೇಗೆ ನೋಡಿ..

‘ಉಪೇಂದ್ರ’ ಚಿತ್ರವನ್ನು ಶಿಲ್ಪಾ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಅಂದಿನ ಕಾಲಕ್ಕೆ ಈ ಚಿತ್ರ 10 ಕೋಟಿ ರೂಪಾಯಿ ಗಳಿಕೆ ಮಾಡಿತ್ತು ಎನ್ನಲಾಗಿದೆ. ಈ ಚಿತ್ರಕ್ಕೆ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡಿ ಅದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುವ ಆಲೋಚನೆ ಶಿಲ್ಪಾ ಶ್ರೀನಿವಾಸ್​ಗೆ ಇದೆಯಂತೆ. ಬೆಂಗಳೂರಿನ ಮಾಗಡಿ ರೋಡ್ ಬಳಿ ಇರುವ ವೀರೇಶ್ ಥಿಯೇಟರ್​ನಲ್ಲಿ ಸೆಪ್ಟೆಂಬರ್ 20ರಂದು ಮುಂಜಾನೆ 6.30ಕ್ಕೆ ಫ್ಯಾನ್​ ಶೋ ಆಯೋಜನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್