AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್

ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್
ಉಪೇಂದ್ರರನ್ನು ಚಿತ್ರರಂಗದಿಂದ 5 ವರ್ಷ ಬ್ಯಾನ್ ಮಾಡಲು ಮನವಿ ಮಾಡಿದ ಸಾಮಾಜಿಕ ಕಾರ್ಯಕರ್ತ
Ramesha M
| Updated By: ರಾಜೇಶ್ ದುಗ್ಗುಮನೆ|

Updated on:Aug 17, 2023 | 1:00 PM

Share

ನಟ ಉಪೇಂದ್ರ (Upendra) ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ದಲಿತ ಸಂಘಟನೆಯವರು ಈ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಉಪೇಂದ್ರ ಅವರ ಬಂಧನಕ್ಕೂ ಆಗ್ರಹಿಸಲಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಏನಿದು ಪ್ರಕರಣ?

ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಲೈವ್​ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಕೇಸ್ ದಾಖಲಾಯಿತು. ಅದೇ ರೀತಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಕೂಡ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಹೆಚ್ಚಿದ ಬಿಸಿ

ಮೊದಲ ಪ್ರಕರಣದಲ್ಲಿ ಹೈಕೋರ್ಟ್ ತಡೆ ಕೊಟ್ಟ ಬೆನ್ನಲ್ಲೇ ಹರೀಶ್ ಕುಮಾರ್ ಅವರು ಆ್ಯಕ್ಟೀವ್ ಆದರು. ‘ಮೊದಲ ಪ್ರಕರಣದಲ್ಲಿ ಮಾತ್ರ ತಡೆ ಕೊಡಲಾಗಿದೆ. ಎರಡನೇ ಪ್ರಕರಣ ಹಾಗೆಯೇ ಉಳಿದುಕೊಂಡಿದೆ. ಹೀಗಾಗಿ, ಪೊಲೀಸರು ಉಪೇಂದ್ರ ಅವರನ್ನು ಬಂಧಿಸಬೇಕು’ ಎಂದು ಹರೀಶ್ ಕುಮಾರ್ ಪ್ರತಿಭಟನೆ ಮಾಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವೂ ನಡೆಯಿತು.

ಇದನ್ನೂ ಓದಿ: ಉಪೇಂದ್ರ ಬೆನ್ನಲ್ಲೇ ಇದೀಗ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ವಿಡಿಯೋ ವೈರಲ್, ದೂರು ದಾಖಲು

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್

ಹಿರಿಯ ವಕೀಲ ಉದಯ್ ಹೊಳ್ಳ ಅವರು ಎರಡನೇ ಎಫ್​ಐಆರ್​ಗೂ ತಡೆನೀಡುವಂತೆ ಹೈಕೋರ್ಟ್ ಮೊರೆ ಹೋದರು. ತಕ್ಷಣ ಅರ್ಜಿ ವಿಚಾರಣೆ ನಡೆಸುವಂತೆ ಕೋರಿದರು. ಇಂದು (ಆಗಸ್ಟ್ 17) ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಎರಡನೇ ಎಫ್​ಐಆರ್​ಗೂ ಕೋರ್ಟ್​ ತಡೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Thu, 17 August 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ