AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್

ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್
ಉಪೇಂದ್ರರನ್ನು ಚಿತ್ರರಂಗದಿಂದ 5 ವರ್ಷ ಬ್ಯಾನ್ ಮಾಡಲು ಮನವಿ ಮಾಡಿದ ಸಾಮಾಜಿಕ ಕಾರ್ಯಕರ್ತ
Ramesha M
| Edited By: |

Updated on:Aug 17, 2023 | 1:00 PM

Share

ನಟ ಉಪೇಂದ್ರ (Upendra) ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ದಲಿತ ಸಂಘಟನೆಯವರು ಈ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಉಪೇಂದ್ರ ಅವರ ಬಂಧನಕ್ಕೂ ಆಗ್ರಹಿಸಲಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಏನಿದು ಪ್ರಕರಣ?

ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಲೈವ್​ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಕೇಸ್ ದಾಖಲಾಯಿತು. ಅದೇ ರೀತಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಕೂಡ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಹೆಚ್ಚಿದ ಬಿಸಿ

ಮೊದಲ ಪ್ರಕರಣದಲ್ಲಿ ಹೈಕೋರ್ಟ್ ತಡೆ ಕೊಟ್ಟ ಬೆನ್ನಲ್ಲೇ ಹರೀಶ್ ಕುಮಾರ್ ಅವರು ಆ್ಯಕ್ಟೀವ್ ಆದರು. ‘ಮೊದಲ ಪ್ರಕರಣದಲ್ಲಿ ಮಾತ್ರ ತಡೆ ಕೊಡಲಾಗಿದೆ. ಎರಡನೇ ಪ್ರಕರಣ ಹಾಗೆಯೇ ಉಳಿದುಕೊಂಡಿದೆ. ಹೀಗಾಗಿ, ಪೊಲೀಸರು ಉಪೇಂದ್ರ ಅವರನ್ನು ಬಂಧಿಸಬೇಕು’ ಎಂದು ಹರೀಶ್ ಕುಮಾರ್ ಪ್ರತಿಭಟನೆ ಮಾಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವೂ ನಡೆಯಿತು.

ಇದನ್ನೂ ಓದಿ: ಉಪೇಂದ್ರ ಬೆನ್ನಲ್ಲೇ ಇದೀಗ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ವಿಡಿಯೋ ವೈರಲ್, ದೂರು ದಾಖಲು

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್

ಹಿರಿಯ ವಕೀಲ ಉದಯ್ ಹೊಳ್ಳ ಅವರು ಎರಡನೇ ಎಫ್​ಐಆರ್​ಗೂ ತಡೆನೀಡುವಂತೆ ಹೈಕೋರ್ಟ್ ಮೊರೆ ಹೋದರು. ತಕ್ಷಣ ಅರ್ಜಿ ವಿಚಾರಣೆ ನಡೆಸುವಂತೆ ಕೋರಿದರು. ಇಂದು (ಆಗಸ್ಟ್ 17) ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಎರಡನೇ ಎಫ್​ಐಆರ್​ಗೂ ಕೋರ್ಟ್​ ತಡೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Thu, 17 August 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ