AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್

ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್
ಉಪೇಂದ್ರರನ್ನು ಚಿತ್ರರಂಗದಿಂದ 5 ವರ್ಷ ಬ್ಯಾನ್ ಮಾಡಲು ಮನವಿ ಮಾಡಿದ ಸಾಮಾಜಿಕ ಕಾರ್ಯಕರ್ತ
Follow us
Ramesha M
| Updated By: ರಾಜೇಶ್ ದುಗ್ಗುಮನೆ

Updated on:Aug 17, 2023 | 1:00 PM

ನಟ ಉಪೇಂದ್ರ (Upendra) ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ದಲಿತ ಸಂಘಟನೆಯವರು ಈ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಉಪೇಂದ್ರ ಅವರ ಬಂಧನಕ್ಕೂ ಆಗ್ರಹಿಸಲಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಏನಿದು ಪ್ರಕರಣ?

ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಲೈವ್​ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಕೇಸ್ ದಾಖಲಾಯಿತು. ಅದೇ ರೀತಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಕೂಡ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಹೆಚ್ಚಿದ ಬಿಸಿ

ಮೊದಲ ಪ್ರಕರಣದಲ್ಲಿ ಹೈಕೋರ್ಟ್ ತಡೆ ಕೊಟ್ಟ ಬೆನ್ನಲ್ಲೇ ಹರೀಶ್ ಕುಮಾರ್ ಅವರು ಆ್ಯಕ್ಟೀವ್ ಆದರು. ‘ಮೊದಲ ಪ್ರಕರಣದಲ್ಲಿ ಮಾತ್ರ ತಡೆ ಕೊಡಲಾಗಿದೆ. ಎರಡನೇ ಪ್ರಕರಣ ಹಾಗೆಯೇ ಉಳಿದುಕೊಂಡಿದೆ. ಹೀಗಾಗಿ, ಪೊಲೀಸರು ಉಪೇಂದ್ರ ಅವರನ್ನು ಬಂಧಿಸಬೇಕು’ ಎಂದು ಹರೀಶ್ ಕುಮಾರ್ ಪ್ರತಿಭಟನೆ ಮಾಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವೂ ನಡೆಯಿತು.

ಇದನ್ನೂ ಓದಿ: ಉಪೇಂದ್ರ ಬೆನ್ನಲ್ಲೇ ಇದೀಗ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ವಿಡಿಯೋ ವೈರಲ್, ದೂರು ದಾಖಲು

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್

ಹಿರಿಯ ವಕೀಲ ಉದಯ್ ಹೊಳ್ಳ ಅವರು ಎರಡನೇ ಎಫ್​ಐಆರ್​ಗೂ ತಡೆನೀಡುವಂತೆ ಹೈಕೋರ್ಟ್ ಮೊರೆ ಹೋದರು. ತಕ್ಷಣ ಅರ್ಜಿ ವಿಚಾರಣೆ ನಡೆಸುವಂತೆ ಕೋರಿದರು. ಇಂದು (ಆಗಸ್ಟ್ 17) ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಎರಡನೇ ಎಫ್​ಐಆರ್​ಗೂ ಕೋರ್ಟ್​ ತಡೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Thu, 17 August 23

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್