AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮುಖ್ಯಮಂತ್ರಿ ಆಗ್ಬೇಕು; ನೀವು ನನ್ನ ಗೆಲ್ಲಿಸ್ತೀರಾ?’; ಉಪೇಂದ್ರ ಕೇಳಿದ ಪ್ರಶ್ನೆಗೆ ಜನ ಕೊಟ್ಟ ಉತ್ತರ ಏನು?

ಉಪೇಂದ್ರ ಅವರ ಈ ಪೋಸ್ಟ್​ ವೈರಲ್​ ಆಗಿದೆ. ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಲಾಕ್​ಡೌನ್​ ಸಂದರ್ಭದಲ್ಲಿ ಉಪ್ಪಿ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರು ಗಮನಿಸಿದ್ದಾರೆ.

‘ನಾನು ಮುಖ್ಯಮಂತ್ರಿ ಆಗ್ಬೇಕು; ನೀವು ನನ್ನ ಗೆಲ್ಲಿಸ್ತೀರಾ?’; ಉಪೇಂದ್ರ ಕೇಳಿದ ಪ್ರಶ್ನೆಗೆ ಜನ ಕೊಟ್ಟ ಉತ್ತರ ಏನು?
ಉಪೇಂದ್ರ
ಮದನ್​ ಕುಮಾರ್​
|

Updated on: May 23, 2021 | 8:54 AM

Share

ನಟ ಉಪೇಂದ್ರ ಅವರು ತಮ್ಮದೇ ಹಾದಿಯಲ್ಲಿ ಸಾಗುತ್ತ ಜನಸೇವೆ ಮಾಡುತ್ತಿದ್ದಾರೆ. ಈಗ ಎಲ್ಲೆಲ್ಲೂ ಕೊರೊನಾ ವೈರಸ್​ ಕಾಟ ಕೊಡುತ್ತಿರುವುದರಿಂದ ಅನೇಕರ ಬದುಕು ಸಂಕಷ್ಟದಲ್ಲಿದೆ. ಅಂಥವರಿಗೆಲ್ಲ ಸಹಾಯ ಮಾಡಲು ಉಪೇಂದ್ರ ಹಗಲಿರುಳು ಕಷ್ಟಪಡುತ್ತಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಪಡೆದುಕೊಂಡಿರುವ ಅವರು ಪ್ರಜಾಕೀಯ ಪಕ್ಷದ ಮೂಲಕ ರಾಜಕೀಯದಲ್ಲೂ ದೊಡ್ಡ ಬದಲಾವಣೆ ತರಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಈಗಾಗಲೇ ಸೋಶಿಯಲ್​ ಮೀಡಿಯಾ ಮೂಲಕ, ಮಾಧ್ಯಮಗಳ ಸಂದರ್ಶನಗಳ ಮೂಲಕ ತಮ್ಮ ನಿಲುವು ಏನು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಈಗ ಅವರು ಕೇಳಿರುವ ಒಂದು ಪ್ರಶ್ನೆಗೆ ಜನರಿಂದ ಬಗೆಬಗೆಯ ಉತ್ತರ ಬಂದಿದೆ.

ಉಪೇಂದ್ರ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ‘ನಾನು ಉಪೇಂದ್ರ… ಈ ರಾಜ್ಯದ ಮುಖ್ಯಮಂತ್ರಿ (CM) ಆಗ್ಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ? ನೀವು ನನ್ನನ್ನ ಗೆಲ್ಲಿಸ್ತೀರಾ?’ ಎಂಬ ಪ್ರಶ್ನೆಯೊಂದಿಗೆ ಅವರು ಮಾತು ಆರಂಭಿಸಿದ್ದಾರೆ.

ಈ ಪೋಸ್ಟ್​ನಲ್ಲಿ ಅವರು ತಮ್ಮ ಪ್ರಜಾಕೀಯದ ಆಶಯವನ್ನು ಇನ್ನಷ್ಟು ಒತ್ತಿಹೇಳುವ ಪ್ರಯತ್ನ ಮಾಡಿದ್ದಾರೆ. ಸದ್ಯ ಉಪೇಂದ್ರ ಅವರ ಈ ಪೋಸ್ಟ್​ ವೈರಲ್​ ಆಗಿದೆ. ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಲಾಕ್​ಡೌನ್​ ಸಂದರ್ಭದಲ್ಲಿ ಉಪ್ಪಿ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರು ಗಮನಿಸಿದ್ದಾರೆ. ಹಾಗಾಗಿ ತಮ್ಮ ಸಂಪೂರ್ಣ ಬೆಂಬಲ ನಿಮಗಿದೆ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಜೊತೆಗೆ ಉಪೇಂದ್ರಗೆ ಕೆಲವು ಸಲಹೆಗಳನ್ನೂ ಜನರು ನೀಡಿದ್ದಾರೆ.

‘ಸರ್ ನಿಮ್ಮ ಆಲೋಚನೆಗಳು ಸರಿಯಾಗಿಯೇ ಇದೆ. ಆದರೆ ಒಂದು ಪಕ್ಷವನ್ನು ನಡೆಸಲು ಒಬ್ಬ ಸಮರ್ಥ ನಾಯಕ ಬೇಕು. ನೀವು ಆ ಜವಾಬ್ದಾರಿ ತೆಗೆದುಕೊಂಡು ಮುಖ್ಯಮಂತ್ರಿ ಆಗುವುದಾದರೆ ಯುವ ಸಮೂಹ ನಿಮ್ಮನ್ನು ಖಂಡಿತವಾಗಿ ಬೆಂಬಲಿಸುತ್ತೇವೆ. ಇಷ್ಟು ದಿನ ಕೇವಲ ಜಾತಿ, ಧರ್ಮ, ಭ್ರಷ್ಟಾಚಾರ ನೋಡಿ ನೋಡಿ ಸಾಕಾಗಿದೆ. ರಾಜ್ಯ ರಾಜಕಾರಣದ ದಿಕ್ಕು ಬದಲಾಗಬೇಕಿದೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

‘ನೀವು ಕೊಂಚ ಸಾಮಾಜಿಕ ಜಾಲತಾಣ ಬದಿಗಿರಿಸಿ ತಳಮಟ್ಟದಲ್ಲಿ ಪ್ರಜಾಕೀಯದ ವಿಚಾರಗಳನ್ನು ತಲುಪಿಸುವಲ್ಲಿ ಗಮನಹರಿಸಿದರೆ ಸೂಕ್ತ. ಏಕೆಂದರೆ ಭಾರತ ಹಳ್ಳಿಗಳ ದೇಶ. ಹಳ್ಳಿ ಹಳ್ಳಿಗಳಲ್ಲಿ ಪ್ರಜಾಕೀಯದ ವಿಚಾರಧಾರೆ ಹರಿಯಬೇಕಾದರೆ, ನೀವೇ ಸ್ವತಃ ರಾಜ್ಯದ ಹಳ್ಳಿ ಹಳ್ಳಿಗೂ ಪ್ರವಾಸ ಕೈಗೊಂಡು ವಿಚಾರವನ್ನು ಮುಟ್ಟಿಸಬೇಕು. ಕೇವಲ ಸಾಮಾಜಿಕ ಜಾಲತಾಣ ಯುವಕರಿಗಷ್ಟೇ ಸೀಮಿತವಾಗಿದೆ’ ಎಂದು ಒಬ್ಬರು ಸಲಹೆ ನೀಡಿದ್ದಾರೆ. ಉಪೇಂದ್ರ ಅವರೇ ನಮ್ಮ ಸಿಎಂ ಆಗಬೇಕು ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

View this post on Instagram

A post shared by Upendra (@nimmaupendra)

ಸೋಶಿಯಲ್​ ಮೀಡಿಯಾದಲ್ಲಿ ಉಪೇಂದ್ರ ಹಂಚಿಕೊಂಡಿರುವ ಪೋಸ್ಟ್​.

ಇದನ್ನೂ ಓದಿ:

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

ರೈತರ ಸಹಾಯಕ್ಕೆ ನಿಂತ ಉಪೇಂದ್ರ; ಬೆಳೆ ಖರೀದಿಸಿ, ಸಂಕಷ್ಟದಲ್ಲಿ ಇರುವವರಿಗೆ ಹಂಚಿದ ನಟ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!