AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ನಗರ ವಿವಿ ​

ಸೆಂಟ್ರಲ್ ಕಾಲೇಜ್​ನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಬೆಂಗಳೂರು ನಗರ ವಿವಿ ವಾರ್ಷಿಕ ಘಟಿಕೋತ್ಸವದಲ್ಲಿ ವಿ. ರವಿಚಂದ್ರನ್​ಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ನಗರ ವಿವಿ ​
ರವಿಚಂದ್ರನ್
TV9 Web
| Edited By: |

Updated on: Apr 11, 2022 | 1:40 PM

Share

ನಟ ರವಿಚಂದ್ರನ್​ ( V Ravichandran) ಅವರು ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಚಿತ್ರರಂಗದಲ್ಲಿ ಮಾಡಿದ ಸಾಧನೆಗೆ ಅನೇಕ ಪ್ರಶಸ್ತಿಗಳು ರವಿಚಂದ್ರನ್​ ಅವರನ್ನು ಹುಡುಕಿ ಬಂದಿವೆ. ಈಗ ಅವರ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಇತ್ತೀಚೆಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯ (Bangalore City University) ಅವರಿಗೆ ಗೌರವ ಡಾಕ್ಟರೇಟ್​ ನೀಡುವ ಘೋಷಣೆ ಮಾಡಿತ್ತು. ಇಂದು (ಏಪ್ರಿಲ್​ 11) ಕ್ರೇಜಿಸ್ಟಾರ್​ಗೆ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗಿದೆ.

ರವಿಚಂದ್ರನ್​ ಅವರು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಲು ಆರಂಭಿಸಿ 4 ದಶಕ ಕಳೆದಿದೆ. ಈ ಅವಧಿಯಲ್ಲಿ ಅವರು ಹಲವು ಉತ್ತಮ ಸಿನಿಮಾಗಳನ್ನು ನೀಡಿದ್ದಾರೆ. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಸಂಪೂರ್ಣವಾಗಿ ಅವರು ನಟನೆಯಲ್ಲೇ ತೊಡಗಿಕೊಂಡಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅವರ ಅಭಿನಯದ ‘ದೃಶ್ಯ 2’ ಸಿನಿಮಾ ಗಮನ ಸೆಳೆಯಿತು. ಇತ್ತೀಚೆಗೆ ಅವರಿಗೆ ಗೌರವ ಡಾಕ್ಟರೇಟ್​ ಕೊಡುವ ಬಗ್ಗೆ ಘೋಷಣೆ ಆದಾಗ ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದರು.

ಸೆಂಟ್ರಲ್ ಕಾಲೇಜ್​ನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಬೆಂಗಳೂರು ನಗರ ವಿವಿ ವಾರ್ಷಿಕ ಘಟಿಕೋತ್ಸವದಲ್ಲಿ ವಿ. ರವಿಚಂದ್ರನ್​ಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರವಿಚಂದ್ರನ್​ ಅವರನ್ನು ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್ ಸೇರಿ ಮೂರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. 2019ರಲ್ಲಿ ರವಿಚಂದ್ರನ್​ ಅವರಿಗೆ ಸಿಎಂಆರ್​ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

2016ರಲ್ಲಿ ತೆರೆಗೆ ಬಂದ ‘ಅಪೂರ್ವ’ ಅವರ ನಿರ್ದೇಶನದ ಕೊನೆಯ ಸಿನಿಮಾ. ಈ ಚಿತ್ರಕ್ಕೆ ಅವರೇ ಬಂಡವಾಳ ಕೂಡ ಹಾಕಿದ್ದರು. ಆ ಬಳಿಕ ಅವರು ನಟನೆಯತ್ತ ಸಂಪೂರ್ಣ ಗಮನವನ್ನು ಹರಿಸಿದರು. 1987ರಲ್ಲಿ ತೆರೆಗೆ ಬಂದ ‘ಪ್ರೇಮಲೋಕ’ ಚಿತ್ರವನ್ನು ಈಗಲೂ ಜನರು ನೆನಪು ಮಾಡಿಕೊಳ್ಳುತ್ತಾರೆ. ರವಿಚಂದ್ರನ್ ಅವರು ಈ ಚಿತ್ರವನ್ನು ನಿರ್ದೇಶನ, ನಿರ್ಮಾಣ ಮಾಡಿ ನಟಿಸಿದ್ದರು. ಈ ಸಿನಿಮಾ ಸೂಪರ್​ ಡೂಪರ್​ ಹಿಟ್ ಆಯಿತು. ಈ ಚಿತ್ರ ತಮಿಳಲ್ಲೂ ತೆರೆಕಂಡಿತ್ತು.

ಇದನ್ನೂ ಓದಿ: ‘ಅಮ್ಮ ಇಲ್ಲದಿದ್ದರೆ ಎಷ್ಟು ಕಷ್ಟ ಅಂತ ನಮಗೆ ಗೊತ್ತು’: ರವಿಚಂದ್ರನ್​ ತಾಯಿಯ ಅಂತಿಮ ದರ್ಶನ ಪಡೆದ ರಾಘಣ್ಣ

ರವಿಚಂದ್ರನ್​ ಬಳಿಕ ರಚಿತಾ ರಾಮ್​ ಕಿಡ್ನಾಪ್​; ಈ ಡ್ರಾಮಾದ ಹೊಣೆ ಹೊತ್ತುಕೊಂಡ ಹಿರಿಯ ನಟಿ ಲಕ್ಷ್ಮೀ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!