AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಎಲ್ಲಾ ಗೇಲಿಗೂ ಹೊಡಿ ಗೋಲಿ’; ಖಡಕ್ ಡೈಲಾಗ್​ನೊಂದಿಗೆ ಬಂದ ಯಶ್

ಯಶ್​ಗೆ ಖ್ಯಾತಿ ತಂದುಕೊಟ್ಟಿದ್ದು ‘ಕೆಜಿಎಫ್​’ ಸರಣಿ. ಈ ಚಿತ್ರದಲ್ಲಿ ಬರುವ ಖಡಕ್ ಡೈಲಾಗ್​ಗಳು ಎಲ್ಲರ ಗಮನ ಸೆಳೆದಿತ್ತು. ಈಗ ಯಶ್ ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ.

Yash: ‘ಎಲ್ಲಾ ಗೇಲಿಗೂ ಹೊಡಿ ಗೋಲಿ’; ಖಡಕ್ ಡೈಲಾಗ್​ನೊಂದಿಗೆ ಬಂದ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on: Mar 23, 2023 | 2:29 PM

Share

ಮುಖ್ಯಾಂಶಗಳು

  • ಪಾನೀಯ ಜಾಹೀರಾತಿನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್
  • ವೈರಲ್ ಆಯ್ತು ಹೊಸ ಜಾಹೀರಾತು
  • ಯಶ್ ಮುಂದಿನ ಸಿನಿಮಾ ಬಗ್ಗೆ ಮೂಡಿದೆ ಕುತೂಹಲ

ನಟ ಯಶ್ (Yash) ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಸಾಕಷ್ಟು ಕುತೂಹಲ ಇದೆ. ಆದರೆ, ಸದ್ಯಕ್ಕಂತೂ ಈ ಕುತೂಹಲ ತಣ್ಣಗಾಗುವ ಸೂಚನೆ ಸಿಕ್ಕಿಲ್ಲ. ಯುಗಾದಿ ದಿನ ಯಶ್ ಹೊಸ ಸಿನಿಮಾ ಘೋಷಣೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದು ನಿಜವಾಗಿಲ್ಲ. ಯಶ್ ಹೊಸ ಸಿನಿಮಾ ಬೇಗ ಅನೌನ್ಸ್ ಆಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಯಶ್ ಅನೇಕ ಬ್ರ್ಯಾಂಡ್​ಗಳ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಹಂಚಿಕೊಂಡಿರೋ ಹೊಸ ವಿಡಿಯೋ ವೈರಲ್ ಆಗಿದೆ. ಖಡಕ್ ಡೈಲಾಗ್ ಮೂಲಕ ಯಶ್ ಮಿಂಚಿದ್ದಾರೆ.

ಯಶ್ ಪಾನೀಯ ಸಂಸ್ಥೆ ಪೆಪ್ಸಿಗೆ ರಾಯಭಾರಿ ಆಗಿದ್ದಾರೆ. ಇದರ ಪ್ರಚಾರದಲ್ಲಿ ಅವರು ಭಾಗಿ ಆಗುತ್ತಿದ್ದಾರೆ. ಬಾಲಿವುಡ್​ನಿಂದ ರಣವೀರ್ ಸಿಂಗ್ ಅವರನ್ನು ಈ ಸಂಸ್ಥೆ ಆಯ್ಕೆ ಮಾಡಿಕೊಂಡರೆ ಕನ್ನಡದಿಂದ ಯಶ್ ಇದ್ದಾರೆ. ಕನ್ನಡದ ಹೀರೋ ಒಬ್ಬರು ಈ ಬ್ರ್ಯಾಂಡ್​ಗೆ ಅಂಬಾಸಿಡರ್ ಆಗಿದ್ದು ಇದೇ ಮೊದಲು. ಈಗ ಅವರ ಹೊಸ ಜಾಹೀರಾತು ಗಮನ ಸೆಳೆದಿದೆ.

ಯಶ್​ಗೆ ಖ್ಯಾತಿ ತಂದುಕೊಟ್ಟಿದ್ದು ‘ಕೆಜಿಎಫ್​’ ಸರಣಿ. ಈ ಚಿತ್ರದಲ್ಲಿ ಬರುವ ಖಡಕ್ ಡೈಲಾಗ್​ಗಳು ಎಲ್ಲರ ಗಮನ ಸೆಳೆದಿತ್ತು. ‘ಕೆಜಿಎಫ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಹಣ ಬಾಚಿತ್ತು. ಈ ಚಿತ್ರದಿಂದ ಯಶ್ ಖ್ಯಾತಿಯೂ ಹೆಚ್ಚಿತು. ಈ ಕಾರಣಕ್ಕೆ ಯಶ್ ಅವರನ್ನು ಪೆಪ್ಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿಕೊಂಡಿದೆ. ಈಗ ಪೆಪ್ಸಿ ಜಾಹೀರಾತಿಗೆ ‘ಕೆಜಿಎಫ್ 2’ ಚಿತ್ರದಲ್ಲಿ ಬರೋ ರೀತಿಯಲ್ಲೇ ಯಶ್ ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ಯಶ್ ಬಾಯಲ್ಲಿ ಡೈಲಾಗ್ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Ugadi 2023: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ

View this post on Instagram

A post shared by Yash (@thenameisyash)

‘ಜನ ಪ್ರತಿ ಹಂತದಲ್ಲೂ ಗೇಲಿ ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಹೇಳಿ ಮಾತಿನ ದಾಳಿ ಮಾಡ್ತಾರೆ. ಇದು ಮಾಡು, ಅದು ಬೇಡ ಅಂತಾರೆ. ಹೇಳಿದ್ದು ಕೇಳ್ತೀವಿ ಅಂತ ಗೊತ್ತಾದ್ರೆ ಮಾತ್ ಮಾತಲ್ಲೇ ಜಡ್ಜ್​ ಮಾಡ್ತಾರೆ, ಕಂಟ್ರೋಲ್ ಮಾಡ್ತಾರೆ, ಮಾತಲ್ಲೇ ಮುಳುಗಿಸಿ ಬಿಡ್ತಾರೆ. ಎಲ್ಲಾ ಗೇಲಿಗೂ ಹೊಡಿ ಗೋಲಿ. ನೀನು ನೀನಾಗಿರು’ ಎಂದು ಯಶ್ ಹೇಳಿದ್ದಾರೆ. ಸದ್ಯ ಈ ಜಾಹೀರಾತು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಯಶ್​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ವಯಸ್ಸಿನ ಅಂತರದ ಮಾಹಿತಿ

ಯಶ್ ಮುಂದಿನ ಪ್ರಾಜೆಕ್ಟ್ ಯಾವುದು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇದೆ. ‘ಕೆಜಿಎಫ್ 2’ ರಿಲೀಸ್ ಆಗಿ ವರ್ಷ ಕಳೆಯುತ್ತಾ ಬಂದರೂ ಈ ಬಗ್ಗೆ ಅಪ್​ಡೇಟ್ ಸಿಕ್ಕಿಲ್ಲ. ‘ನನಗೆ ಸಮಯ ಕೊಡಿ’ ಎಂದು ಯಶ್ ಈ ವರ್ಷದ ಆರಂಭದಲ್ಲಿ ಹೇಳಿದ್ದರು. ಯಶ್ ದೊಡ್ಡ ನಿರ್ಮಾಣ ಸಂಸ್ಥೆ ಹಾಗೂ ನಿರ್ದೇಶಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಯಶ್ ಅವರಿಂದಲೇ ಉತ್ತರ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್