AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಮ್ಮ ಬಾಸ್ ತಾಕತ್ತು’; ಯಶ್ ಮನೆ ಮುಂದೆ ಅಭಿಮಾನಿಗಳ ಕಿಲೋಮೀಟರ್ ಉದ್ದದ ಸಾಲು

Yash: ಯಶ್ ಅವರು ಬೆಂಗಳೂರಿನ ಗಾಲ್ಫ್​ ರಸ್ತೆಯಲ್ಲಿ ಮನೆ ಹೊಂದಿದ್ದಾರೆ. ತಮ್ಮ ನಿವಾಸದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಹೇಳಿದ್ದರು. ಅವರನ್ನು ನೋಡಲು ಜನಸಾಗರವೇ ನೆರೆದಿತ್ತು.

‘ಇದು ನಮ್ಮ ಬಾಸ್ ತಾಕತ್ತು’; ಯಶ್ ಮನೆ ಮುಂದೆ ಅಭಿಮಾನಿಗಳ ಕಿಲೋಮೀಟರ್ ಉದ್ದದ ಸಾಲು
ಅಭಿಮಾನಿಗಳ ಜತೆ ಯಶ್
ರಾಜೇಶ್ ದುಗ್ಗುಮನೆ
|

Updated on: Feb 02, 2023 | 11:47 AM

Share

ಯಶ್ (Yash) ಅವರು ಈ ವರ್ಷ ತಮ್ಮ ಬರ್ತ್​ಡೇನ ವಿದೇಶದಲ್ಲಿ ಆಚರಿಸಿಕೊಂಡಿದ್ದರು. ಹೀಗಾಗಿ ಅಭಿಮಾನಿಗಳನ್ನು ಭೇಟಿ ಮಾಡೋಕೆ ಸಾಧ್ಯವಾಗಿರಲಿಲ್ಲ. ಆದರೆ, ದುಬೈಗೆ ತೆರಳುವುದಕ್ಕೂ ಮುನ್ನ ಅಭಿಮಾನಿಗಳ ಜತೆ ಸಮಯ ಕಳೆದಿದ್ದರು. ಅವರನ್ನು ಭೇಟಿ ಮಾಡಿ ಫೋಟೋಗೆ ಪೋಸ್ ನೀಡಿದ್ದರು. ಆಗ ಅವರ ಮನೆಯ ಮುಂದೆ ಸಾವಿರಾರು ಫ್ಯಾನ್ಸ್ ನೆರೆದಿದ್ದರು. ಇಂದು (ಫೆಬ್ರವರಿ 2) ಕೂಡ ರಾಕಿಂಗ್ ಸ್ಟಾರ್ ಯಶ್ ಮನೆ ಮುಂದೆ ಅಭಿಮಾನಿಗಳ ಸಾಲು ಕಿಲೋಮೀಟರ್ ಉದ್ದ ಇತ್ತು. ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಯಶ್ ಹೇಳಿದ್ದರು. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ಮನೆ ಎದುರು ಆಗಮಿಸಿದ್ದರು. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಯಶ್ ಅವರು ಬೆಂಗಳೂರಿನ ಗಾಲ್ಫ್​ ರಸ್ತೆಯಲ್ಲಿ ಮನೆ ಹೊಂದಿದ್ದಾರೆ. ತಮ್ಮ ನಿವಾಸದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಹೇಳಿದ್ದರು. ಅವರನ್ನು ನೋಡಲು ಜನಸಾಗರವೇ ನೆರೆದಿತ್ತು. ನೆಚ್ಚಿನ ಹೀರೋ ಜತೆ ಫೋಟೋ ತೆಗಿಸಿಕೊಂಡು ಫ್ಯಾನ್ಸ್ ಸಂಭ್ರಮಿಸಿದ್ದಾರೆ. ಈ ವಿಡಿಯೋ ನೋಡಿ ಯಶ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅನೇಕರು ಯಶ್​ ಅವರ ಭಾವಚಿತ್ರವನ್ನು ಪೇಂಟ್ ಮಾಡಿ ತಂದಿದ್ದಾರೆ. ಯಶ್​ಗೆ ಗಿಫ್ಟ್​ ಕೊಡಬೇಕು ಅನ್ನೋದು ಅವರ ಆಸೆ. ಯಶ್ ಅವರನ್ನು ನೋಡಲು ಕಿಲೋಮೀಟರ್ ಉದ್ದದ ಕ್ಯೂ ನೆರೆದಿತ್ತು. ‘ಇದು ನಮ್ಮ ಬಾಸ್ ತಾಕತ್ತು’ ಎಂದು ಯಶ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಬಾಲಿವುಡ್​ಗೆ ಅಪರಿಚಿತನಾಗಿದ್ದ ಯಶ್ 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್​ ಯಶಸ್ಸು ಯಾವ ಲೆಕ್ಕ?’ ಆರ್​ಜಿವಿ

ಯಶ್ ಮುಂದಿನ ಸಿನಿಮಾ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ವರ್ಷ ಕಳೆಯುತ್ತಾ ಬಂದಿದೆ. ಅಲ್ಲಿಂದ ಇಲ್ಲಿಯವರೆಗೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಇದ್ದೇ ಇದೆ. ಆದರೆ, ಇದಕ್ಕೆ ಉತ್ತರ ಸಿಕ್ಕಿಲ್ಲ. ಯಶ್ 19ನೇ ಚಿತ್ರಕ್ಕೆ ಬಂಡವಾಳ ಕೆವಿಎನ್ ಪ್ರೊಡಕ್ಷನ್​​ ಹೂಡಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ