‘ಇದು ನಮ್ಮ ಬಾಸ್ ತಾಕತ್ತು’; ಯಶ್ ಮನೆ ಮುಂದೆ ಅಭಿಮಾನಿಗಳ ಕಿಲೋಮೀಟರ್ ಉದ್ದದ ಸಾಲು

Yash: ಯಶ್ ಅವರು ಬೆಂಗಳೂರಿನ ಗಾಲ್ಫ್​ ರಸ್ತೆಯಲ್ಲಿ ಮನೆ ಹೊಂದಿದ್ದಾರೆ. ತಮ್ಮ ನಿವಾಸದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಹೇಳಿದ್ದರು. ಅವರನ್ನು ನೋಡಲು ಜನಸಾಗರವೇ ನೆರೆದಿತ್ತು.

‘ಇದು ನಮ್ಮ ಬಾಸ್ ತಾಕತ್ತು’; ಯಶ್ ಮನೆ ಮುಂದೆ ಅಭಿಮಾನಿಗಳ ಕಿಲೋಮೀಟರ್ ಉದ್ದದ ಸಾಲು
ಅಭಿಮಾನಿಗಳ ಜತೆ ಯಶ್
Follow us
|

Updated on: Feb 02, 2023 | 11:47 AM

ಯಶ್ (Yash) ಅವರು ಈ ವರ್ಷ ತಮ್ಮ ಬರ್ತ್​ಡೇನ ವಿದೇಶದಲ್ಲಿ ಆಚರಿಸಿಕೊಂಡಿದ್ದರು. ಹೀಗಾಗಿ ಅಭಿಮಾನಿಗಳನ್ನು ಭೇಟಿ ಮಾಡೋಕೆ ಸಾಧ್ಯವಾಗಿರಲಿಲ್ಲ. ಆದರೆ, ದುಬೈಗೆ ತೆರಳುವುದಕ್ಕೂ ಮುನ್ನ ಅಭಿಮಾನಿಗಳ ಜತೆ ಸಮಯ ಕಳೆದಿದ್ದರು. ಅವರನ್ನು ಭೇಟಿ ಮಾಡಿ ಫೋಟೋಗೆ ಪೋಸ್ ನೀಡಿದ್ದರು. ಆಗ ಅವರ ಮನೆಯ ಮುಂದೆ ಸಾವಿರಾರು ಫ್ಯಾನ್ಸ್ ನೆರೆದಿದ್ದರು. ಇಂದು (ಫೆಬ್ರವರಿ 2) ಕೂಡ ರಾಕಿಂಗ್ ಸ್ಟಾರ್ ಯಶ್ ಮನೆ ಮುಂದೆ ಅಭಿಮಾನಿಗಳ ಸಾಲು ಕಿಲೋಮೀಟರ್ ಉದ್ದ ಇತ್ತು. ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಯಶ್ ಹೇಳಿದ್ದರು. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ಮನೆ ಎದುರು ಆಗಮಿಸಿದ್ದರು. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಯಶ್ ಅವರು ಬೆಂಗಳೂರಿನ ಗಾಲ್ಫ್​ ರಸ್ತೆಯಲ್ಲಿ ಮನೆ ಹೊಂದಿದ್ದಾರೆ. ತಮ್ಮ ನಿವಾಸದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಹೇಳಿದ್ದರು. ಅವರನ್ನು ನೋಡಲು ಜನಸಾಗರವೇ ನೆರೆದಿತ್ತು. ನೆಚ್ಚಿನ ಹೀರೋ ಜತೆ ಫೋಟೋ ತೆಗಿಸಿಕೊಂಡು ಫ್ಯಾನ್ಸ್ ಸಂಭ್ರಮಿಸಿದ್ದಾರೆ. ಈ ವಿಡಿಯೋ ನೋಡಿ ಯಶ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅನೇಕರು ಯಶ್​ ಅವರ ಭಾವಚಿತ್ರವನ್ನು ಪೇಂಟ್ ಮಾಡಿ ತಂದಿದ್ದಾರೆ. ಯಶ್​ಗೆ ಗಿಫ್ಟ್​ ಕೊಡಬೇಕು ಅನ್ನೋದು ಅವರ ಆಸೆ. ಯಶ್ ಅವರನ್ನು ನೋಡಲು ಕಿಲೋಮೀಟರ್ ಉದ್ದದ ಕ್ಯೂ ನೆರೆದಿತ್ತು. ‘ಇದು ನಮ್ಮ ಬಾಸ್ ತಾಕತ್ತು’ ಎಂದು ಯಶ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಬಾಲಿವುಡ್​ಗೆ ಅಪರಿಚಿತನಾಗಿದ್ದ ಯಶ್ 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್​ ಯಶಸ್ಸು ಯಾವ ಲೆಕ್ಕ?’ ಆರ್​ಜಿವಿ

ಯಶ್ ಮುಂದಿನ ಸಿನಿಮಾ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ವರ್ಷ ಕಳೆಯುತ್ತಾ ಬಂದಿದೆ. ಅಲ್ಲಿಂದ ಇಲ್ಲಿಯವರೆಗೆ ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಇದ್ದೇ ಇದೆ. ಆದರೆ, ಇದಕ್ಕೆ ಉತ್ತರ ಸಿಕ್ಕಿಲ್ಲ. ಯಶ್ 19ನೇ ಚಿತ್ರಕ್ಕೆ ಬಂಡವಾಳ ಕೆವಿಎನ್ ಪ್ರೊಡಕ್ಷನ್​​ ಹೂಡಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ