AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಹಿಗಳಲ್ಲಿ ನಟಿಸುತ್ತಿದ್ದ ಸಮೀರ ಮತ್ತು ಅನುಪಮಾ ಆತ್ಮಹತ್ಯೆ

ನಟ-ನಟಿಯರಲ್ಲಿ ಆತ್ಮಹತ್ಯೆಗೆ ಶರಣಾಗುವ ಪ್ರವೃತ್ತಿ ಇತ್ತೀಚಿಗೆ ಜಾಸ್ತಿಯಾಗಿರುವಂತಿದೆ. ಖ್ಯಾತ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮೂಲಕ ಸಾವು ಕಂಡುಕೊಂಡ ನಂತರ ಮತ್ತಷ್ಟು ಜನ ಹಾಗೆ ಸತ್ತಿದ್ದಾರೆ ಇಲ್ಲವೆ ಸಾಯುವ ಪ್ರಯತ್ನ ಮಾಡಿದ್ದಾರೆ. ಈ ಪಟ್ಟಿಗೀಗ, ಖ್ಯಾತ ಟಿವಿ ನಟ ಸಮೀರ ಶರ್ಮ ಮತ್ತು ಭೋಜಪುರಿ ನಟಿ ಅನುಪಮಾ ಪಾಠಕ್ ಸೇರಿದ್ದಾರೆ. ಅತ್ಯಂತ ಜನಪ್ರಿಯ, “ಕ್ಯೂಂಕೀ ಸಾಸ್ ಭೀ ಕಭಿ ಬಹು ಥೀ” ಮತ್ತು “ಯೆ ರಿಶ್ತಾ ಹೈ ಪ್ಯಾರ್ ಕಾ” ಟೆಲಿ ಸೀರಿಯಲ್​ಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ […]

ಧಾರವಾಹಿಗಳಲ್ಲಿ ನಟಿಸುತ್ತಿದ್ದ ಸಮೀರ ಮತ್ತು ಅನುಪಮಾ ಆತ್ಮಹತ್ಯೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 07, 2020 | 4:11 PM

Share

ನಟ-ನಟಿಯರಲ್ಲಿ ಆತ್ಮಹತ್ಯೆಗೆ ಶರಣಾಗುವ ಪ್ರವೃತ್ತಿ ಇತ್ತೀಚಿಗೆ ಜಾಸ್ತಿಯಾಗಿರುವಂತಿದೆ. ಖ್ಯಾತ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮೂಲಕ ಸಾವು ಕಂಡುಕೊಂಡ ನಂತರ ಮತ್ತಷ್ಟು ಜನ ಹಾಗೆ ಸತ್ತಿದ್ದಾರೆ ಇಲ್ಲವೆ ಸಾಯುವ ಪ್ರಯತ್ನ ಮಾಡಿದ್ದಾರೆ. ಈ ಪಟ್ಟಿಗೀಗ, ಖ್ಯಾತ ಟಿವಿ ನಟ ಸಮೀರ ಶರ್ಮ ಮತ್ತು ಭೋಜಪುರಿ ನಟಿ ಅನುಪಮಾ ಪಾಠಕ್ ಸೇರಿದ್ದಾರೆ.

ಅತ್ಯಂತ ಜನಪ್ರಿಯ, “ಕ್ಯೂಂಕೀ ಸಾಸ್ ಭೀ ಕಭಿ ಬಹು ಥೀ” ಮತ್ತು “ಯೆ ರಿಶ್ತಾ ಹೈ ಪ್ಯಾರ್ ಕಾ” ಟೆಲಿ ಸೀರಿಯಲ್​ಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ನಂತರ “ಹಸೀ ತೊ ಫಸೀ” ಶೀರ್ಷಿಕೆಯ ಬಾಲಿವುಡ್ ಚಿತ್ರದಲ್ಲಿಯೂ ನಟಿಸಿದ್ದ 44 ವರ್ಷ ವಯಸ್ಸಿನ ಸಮೀರ, ಬುಧವಾರದಂದು ಮುಂಬೈನಲ್ಲಿ ತಾವು ಒಂಟಿಯಾಗಿ ವಾಸಿಸುತ್ತಿದ್ದ ಬಾಡಿಗೆ ಅಪಾರ್ಟ್ಮಮೆಂಟೊಂದರ ಅಡುಗೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಇನ್ಸ್​ಟಾಗ್ರಾಮ್​ನಲ್ಲಿ ಒಂದು ಸುದೀರ್ಘವಾದ ಪೋಸ್ಟ್ ಹಾಕಿದ್ದ ಸಮೀರ, “ಸುಶಾಂತ್ ಸಿಂಗ್ ರಜಪೂತ ಸಾವಿನ ಬಗ್ಗೆ ನಿಮಗೆ ಕಾಳಜಿಯಿದ್ದರೆ ಇದನ್ನು ದಯವಿಟ್ಟು ಓದಿರಿ,” ಅಂತ ಬರೆದಿದ್ದರು.

ಸಮೀರ ಕೂಡ ಖಿನ್ನತೆಯಿಂದ ಬಳಲುತ್ತಿದ್ದಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಖಿನ್ನತೆ ಬಗ್ಗೆ ಅವರು ಬರೆದಿರುವ ಒಂದಷ್ಟು ಪೇಪರ್​ಗಳು ಅವರಿಗೆ ಸಿಕ್ಕಿವೆಯಂತೆ.

ಅನುಪಮಾ ಬಿಹಾರದವರು

ಭೋಜಪುರಿ ನಟಿ ಅನುಪಮಾ ಮುಂಬೈನ ಮೀರಾ ರಸ್ತೆಯಲ್ಲಿ ತಾವು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ಆಗಸ್ಟ 2ರಂದು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ. 40ರ ಪ್ರಾಯದವರಾಗಿದ್ದ ಅನಪಮಾ, ಭೋಜಪುರಿ ಸಿನಿಮಾ ಮತ್ತು ಹಿಂದಿ ಟೆಲಿ ಸೀರಿಯಲ್​ಗಳಲ್ಲಿ ನಟಿಸಿದ್ದರು.

ಅನುಪಮಾ, ಮೂಲತಃ ಬಿಹಾರದವರಾದರೂ ಹಲವಾರು ವರ್ಷಗಳಿಂದ ಮುಂಬೈನಲ್ಲಿ ನೆಲೆಸಿದ್ದರು. ಪ್ರಾಥಮಿಕ ತನಿಖೆಯ ನಂತರ ಆವರು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ