AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಕಾಂಡ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಐಶ್ವರ್ಯಾ ರಾಜೇಶ್

‘ಉತ್ತರಕಾಂಡ’ ಚಿತ್ರದಲ್ಲಿ ದೊಡ್ಡ ತಾರಾಗಣ ಇದೆ. ಶಿವರಾಜ್​ಕುಮಾರ್​, ಡಾಲಿ ಧನಂಜಯ್​ ಜೊತೆ ನಟಿ ಐಶ್ವರ್ಯಾ ರಾಜೇಶ್​ ಕೂಡ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅವರ ಪೋಸ್ಟರ್​ ಸಹ ಅನಾವರಣ ಆಗಿದೆ. ಉತ್ತರ ಕರ್ನಾಟಕದಲ್ಲಿ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ರೋಹಿತ್​ ಪದಕಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆಡಿಷನ್​ ಮೂಲಕ ಅನೇಕ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

‘ಉತ್ತರಕಾಂಡ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಐಶ್ವರ್ಯಾ ರಾಜೇಶ್
ಐಶ್ವರ್ಯಾ ರಾಜೇಶ್, ಡಾಲಿ ಧನಂಜಯ್​
ಮದನ್​ ಕುಮಾರ್​
|

Updated on: Apr 23, 2024 | 7:55 PM

Share

ಬಹುನಿರೀಕ್ಷಿತ ‘ಉತ್ತರಕಾಂಡ’ (Uttarakaanda) ಸಿನಿಮಾದ ಪಾತ್ರವರ್ಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಈಗ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ (Aishwarya Rajesh) ಅವರು ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಇದು ಅವರ ಮೊದಲ ಕನ್ನಡ ಸಿನಿಮಾ. ಈ ಚಿತ್ರದಲ್ಲಿ ನಟ ಡಾಲಿ ಧನಂಜಯ್​ (Daali Dhananjay) ಹಾಗೂ ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಚಿತ್ರತಂಡದಿಂದ ಹೊಸ ಹೊಸ ಅಪ್​ಡೇಟ್​ಗಳು ಸಿಗುತ್ತಿವೆ.

‘ಉತ್ತರಕಾಂಡ’ ಸಿನಿಮಾದಲ್ಲಿ ನಟಿ ಐಶ್ವರ್ಯಾ ರಾಜೇಶ್​ ಅವರು ಡಾಲಿ ಧನಂಜಯ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಅವರ ಪಾತ್ರದ ಹೆಸರು ದುರ್ಗಿ. ಆ ಪಾತ್ರದ ಪೋಸ್ಟರ್​ ಕೂಡ ಬಿಡುಗಡೆ ಆಗಲಿದೆ. ಅಲ್ಲದೇ ಶೂಟಿಂಗ್​ ಸೆಟ್​ನಿಂದ ಒಂದು ಫೋಟೋ ಕೂಡ ಲಭ್ಯವಾಗಿದೆ. ವಿಜಯಪುರದಲ್ಲಿ ಈ ಸಿನಿಮಾಗೆ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ. ಬಾಲಿವುಡ್​ನ ಅಮಿತ್ ತ್ರಿವೇದಿ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಅದ್ವೈತ್​ ಗುರುಮೂರ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರೊಡಕ್ಷನ್ ವಿನ್ಯಾಸ ವಿಶ್ವಾಸ್‌ ಕಶ್ಯಪ್ ಅವರದ್ದು.

ಐಶ್ವರ್ಯಾ ರಾಜೇಶ್​ ಅವರು ಈಗಾಗಲೇ ಅನೇಕ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ‘ದಿ ಗ್ರೇಟ್ ಇಂಡಿಯನ್ ಕಿಚನ್’, ‘ವಡಾ‌ ಚೆನ್ನೈ’, ‘ದಿ ವರ್ಲ್ಡ್ ಫೇಮಸ್ ಲವರ್’, ‘ಟಕ್ ಜಗದೀಶ್’ ಮುಂತಾದ ಸಿನಿಮಾಗಳಿಂದ ಅವರ ಖ್ಯಾತಿ ಹೆಚ್ಚಾಗಿದೆ. ಐಶ್ವರ್ಯಾ ರಾಜೇಶ್​ ಅವರು ಈಗ ‘ಉತ್ತರಕಾಂಡ’ ಸಿನಿಮಾದ ಮೂಲಕ ಕನ್ನಡದ ಪ್ರೇಕ್ಷಕರಿಗೂ ಪರಿಚಯಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ

ಆ್ಯಕ್ಷನ್ ಡ್ರಾಮಾ ಶೈಲಿಯ ‘ಉತ್ತರಕಾಂಡ’ ಸಿನಿಮಾಗೆ ರೋಹಿತ್ ಪದಕಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ‌ ಜಿ. ರಾಜ್ ಅವರು ‘ಕೆಆರ್​ಜಿ ಸ್ಟೂಡಿಯೋಸ್‌’ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚೈತ್ರಾ ಜೆ. ಆಚಾರ್, ರಂಗಾಯಣ ರಘು, ಯೋಗರಾಜ್ ಭಟ್, ಉಮಾಶ್ರೀ, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ, ಮಲಯಾಳಂ ನಟ ವಿಜಯ್ ಬಾಬು ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ