AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಕಾಂಡ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಐಶ್ವರ್ಯಾ ರಾಜೇಶ್

‘ಉತ್ತರಕಾಂಡ’ ಚಿತ್ರದಲ್ಲಿ ದೊಡ್ಡ ತಾರಾಗಣ ಇದೆ. ಶಿವರಾಜ್​ಕುಮಾರ್​, ಡಾಲಿ ಧನಂಜಯ್​ ಜೊತೆ ನಟಿ ಐಶ್ವರ್ಯಾ ರಾಜೇಶ್​ ಕೂಡ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅವರ ಪೋಸ್ಟರ್​ ಸಹ ಅನಾವರಣ ಆಗಿದೆ. ಉತ್ತರ ಕರ್ನಾಟಕದಲ್ಲಿ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ರೋಹಿತ್​ ಪದಕಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆಡಿಷನ್​ ಮೂಲಕ ಅನೇಕ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

‘ಉತ್ತರಕಾಂಡ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಐಶ್ವರ್ಯಾ ರಾಜೇಶ್
ಐಶ್ವರ್ಯಾ ರಾಜೇಶ್, ಡಾಲಿ ಧನಂಜಯ್​
Follow us
ಮದನ್​ ಕುಮಾರ್​
|

Updated on: Apr 23, 2024 | 7:55 PM

ಬಹುನಿರೀಕ್ಷಿತ ‘ಉತ್ತರಕಾಂಡ’ (Uttarakaanda) ಸಿನಿಮಾದ ಪಾತ್ರವರ್ಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಈಗ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ (Aishwarya Rajesh) ಅವರು ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಇದು ಅವರ ಮೊದಲ ಕನ್ನಡ ಸಿನಿಮಾ. ಈ ಚಿತ್ರದಲ್ಲಿ ನಟ ಡಾಲಿ ಧನಂಜಯ್​ (Daali Dhananjay) ಹಾಗೂ ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಚಿತ್ರತಂಡದಿಂದ ಹೊಸ ಹೊಸ ಅಪ್​ಡೇಟ್​ಗಳು ಸಿಗುತ್ತಿವೆ.

‘ಉತ್ತರಕಾಂಡ’ ಸಿನಿಮಾದಲ್ಲಿ ನಟಿ ಐಶ್ವರ್ಯಾ ರಾಜೇಶ್​ ಅವರು ಡಾಲಿ ಧನಂಜಯ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಅವರ ಪಾತ್ರದ ಹೆಸರು ದುರ್ಗಿ. ಆ ಪಾತ್ರದ ಪೋಸ್ಟರ್​ ಕೂಡ ಬಿಡುಗಡೆ ಆಗಲಿದೆ. ಅಲ್ಲದೇ ಶೂಟಿಂಗ್​ ಸೆಟ್​ನಿಂದ ಒಂದು ಫೋಟೋ ಕೂಡ ಲಭ್ಯವಾಗಿದೆ. ವಿಜಯಪುರದಲ್ಲಿ ಈ ಸಿನಿಮಾಗೆ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ. ಬಾಲಿವುಡ್​ನ ಅಮಿತ್ ತ್ರಿವೇದಿ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಅದ್ವೈತ್​ ಗುರುಮೂರ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರೊಡಕ್ಷನ್ ವಿನ್ಯಾಸ ವಿಶ್ವಾಸ್‌ ಕಶ್ಯಪ್ ಅವರದ್ದು.

ಐಶ್ವರ್ಯಾ ರಾಜೇಶ್​ ಅವರು ಈಗಾಗಲೇ ಅನೇಕ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ‘ದಿ ಗ್ರೇಟ್ ಇಂಡಿಯನ್ ಕಿಚನ್’, ‘ವಡಾ‌ ಚೆನ್ನೈ’, ‘ದಿ ವರ್ಲ್ಡ್ ಫೇಮಸ್ ಲವರ್’, ‘ಟಕ್ ಜಗದೀಶ್’ ಮುಂತಾದ ಸಿನಿಮಾಗಳಿಂದ ಅವರ ಖ್ಯಾತಿ ಹೆಚ್ಚಾಗಿದೆ. ಐಶ್ವರ್ಯಾ ರಾಜೇಶ್​ ಅವರು ಈಗ ‘ಉತ್ತರಕಾಂಡ’ ಸಿನಿಮಾದ ಮೂಲಕ ಕನ್ನಡದ ಪ್ರೇಕ್ಷಕರಿಗೂ ಪರಿಚಯಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ

ಆ್ಯಕ್ಷನ್ ಡ್ರಾಮಾ ಶೈಲಿಯ ‘ಉತ್ತರಕಾಂಡ’ ಸಿನಿಮಾಗೆ ರೋಹಿತ್ ಪದಕಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ‌ ಜಿ. ರಾಜ್ ಅವರು ‘ಕೆಆರ್​ಜಿ ಸ್ಟೂಡಿಯೋಸ್‌’ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚೈತ್ರಾ ಜೆ. ಆಚಾರ್, ರಂಗಾಯಣ ರಘು, ಯೋಗರಾಜ್ ಭಟ್, ಉಮಾಶ್ರೀ, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ, ಮಲಯಾಳಂ ನಟ ವಿಜಯ್ ಬಾಬು ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ