AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ಅಮೂಲ್ಯ; ‘ಪೀಕಬೂ’ ಟೀಸರ್ ರಿಲೀಸ್

ಇಷ್ಟು ದಿನ ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಿದ್ದ ನಟಿ ಅಮೂಲ್ಯ ಅವರು ಈಗ ಸಿನಿಮಾಗೆ ಮರಳಿದ್ದಾರೆ. ಅವರ ಹುಟ್ಟುಹಬ್ಬದ ದಿನವೇ ಹೊಸ ಸಿನಿಮಾ ‘ಪೀಕಬೂ’ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅಮೂಲ್ಯ ಅವರ ಟೀಸರ್ ಬಿಡುಗಡೆ ಆಗಿದೆ.

8 ವರ್ಷ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ಅಮೂಲ್ಯ; ‘ಪೀಕಬೂ’ ಟೀಸರ್ ರಿಲೀಸ್
Amulya
ಮದನ್​ ಕುಮಾರ್​
|

Updated on: Sep 14, 2025 | 2:02 PM

Share

ನಟಿ ಅಮೂಲ್ಯ (Amulya) ಅವರು ಕನ್ನಡ ಚಿತ್ರರಂಗದಲ್ಲಿ ಹೀರೋಯಿನ್ ಆಗಿ ಮಿಂಚಿದವರು. ಸಖತ್ ಬೇಡಿಕೆ ಇರುವಾಗಲೇ ಅವರು ಮದುವೆ ಮಾಡಿಕೊಂಡರು. ಮದುವೆ ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದ್ದರು. ಆದಷ್ಟು ಬೇಗ ಅವರು ನಟನೆಗೆ ಮರಳಲಿ ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಕಮ್​​ಬ್ಯಾಕ್ ಮಾಡಲು ಒಂದು ಒಳ್ಳೆಯ ಕಥೆ ಮತ್ತು ಪಾತ್ರ ಬೇಕು ಎಂದು ಇಷ್ಟು ದಿನ ಅಮೂಲ್ಯ ಅವರು ಕಾದಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಪೀಕಬೂ’ (Peekaboo) ಎಂದು ಶೀರ್ಷಿಕೆ ಇಡಲಾಗಿದೆ.

ಬರೋಬ್ಬರಿ 8 ವರ್ಷಗಳ ಬಳಿಕ ನಾಯಕಿಯಾಗಿ ನಟಿಸಲು ಅಮೂಲ್ಯ ಅವರು ಸಜ್ಜಾಗಿದ್ದಾರೆ. ‘ಶ್ರಾವಣಿ ಸುಬ್ರಮಣ್ಯ’ ಸಿನಿಮಾ ಖ್ಯಾತಿಯ ನಿರ್ದೇಶಕ ಮಂಜು ಸ್ವರಾಜ್ ಅವರ ಜೊತೆ ಅಮೂಲ್ಯ ಸಿನಿಮಾ ಮಾಡುತ್ತಿದ್ದಾರೆ. ಹೊಸ ಸಿನಿಮಾಗೆ ಅವರು ಸಹಿ ಹಾಕಿದ್ದಾರೆ. ವಿಶೇಷ ಏನೆಂದರೆ, ಇಂದು (ಸೆಪ್ಟೆಂಬರ್ 14) ಅಮೂಲ್ಯ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಹೊಸ ಸಿನಿಮಾ ‘ಪೀಕಬೂ’ ಸಿನಿಮಾ ಅನೌನ್ಸ್‌ ಆಗಿದೆ.

ಚಿಕ್ಕದಾದ ಟೀಸರ್‌ ಮೂಲಕ ಅಮೂಲ್ಯ ಅವರ ರೀ ಎಂಟ್ರಿಗೆ ಸಿನಿಮಾ ತಂಡ ಸ್ವಾಗತ ಕೋರಿದೆ. ಕಮ್‌ ಬ್ಯಾಕ್‌ ಸಿನಿಮಾ ಸಲುವಾಗಿ ಅಮೂಲ್ಯ ಅವರು ಸಂಪೂರ್ಣ ತಯಾರಾಗಿದ್ದಾರೆ. ಮೊದಲಿನಂತೆ ಅವರು ಕಾಣುತ್ತಿದ್ದಾರೆ. ಡ್ಯಾನ್ಸ್‌ ಮಾಡುತ್ತಾ, ಟೀಸರ್​​ನಲ್ಲಿ ಎನರ್ಜಿ ತೋರಿಸಿದ್ದಾರೆ. ವಿ. ನಾಗೇಂದ್ರ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಅಮೂಲ್ಯ ಅವರ ಹೊಸ ಚಿತ್ರದ ಬಗ್ಗೆ ಕುತೂಹಲ ಮೂಡಿದೆ.

ನಿರ್ದೇಶಕ ಮಂಜು ಸ್ವರಾಜ್‌ ಅವರು ‘ಪೀಕಬೂ’ ಎಂಬ ಶೀರ್ಷಿಕೆ ಮೂಲಕ ಕುತೂಹಲ ಹುಟ್ಟಿಸಲು ಪ್ರಯತ್ನಿಸಿದ್ದಾರೆ. ಪೀಕಬೂ ಎಂದರೆ ಮಕ್ಕಳನ್ನ ನಗಿಸಲು ಬಳಸುವ ಪದ ಎಂದು ಚಿತ್ರತಂಡ ಹೇಳಿದೆ. ಒಂದೊಳ್ಳೆ ಮೆಸೇಜ್‌ ಹಾಗೂ ಕಮರ್ಷಿಯಲ್‌ ಅಂಶಗಳು ಈ ಸಿನಿಮಾದಲ್ಲಿ ಇರಲಿವೆಯಂತೆ. ಈಗ ಹೀರೋಯಿನ್‌ ಎಂಟ್ರಿ ಸಲುವಾಗಿ ಟೀಸರ್‌ ಬಿಡುಗಡೆ ಮಾಡಿರುವ ಚಿತ್ರತಂಡದವರು ಶೀಘ್ರದಲ್ಲೇ ಚಿತ್ರೀಕರಣ ಆರಂಭ ಮಾಡಲಿದ್ದಾರೆ.

ಇದನ್ನೂ ಓದಿ: ಮಕ್ಕಳೊಂದಿಗೆ ನಲಿಯುತ್ತಾ ಗಣೇಶ ಚತುರ್ಥಿ ಆಚರಿಸಿದ ನಟಿ ಅಮೂಲ್ಯ

ಗಣೇಶ್‌ ಕೆಂಚಾಂಬಾ ಅವರು ‘ಶ್ರೀ ಕೆಂಚಾಂಬಾ ಫಿಲ್ಮ್ಸ್’ ಮೂಲಕ ‘ಪೀಕಬೂ’ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಮೂಲ್ಯ ನಾಯಕಿ ಎಂಬುದು ಗೊತ್ತಾಗಿದೆ. ಆದರೆ ಹೀರೋ ಯಾರು ಎಂಬುದನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ತಿಳಿಯಲಿದೆ. ಸುರೇಶ್‌ ಬಾಬು ಅವರು ಛಾಯಾಗ್ರಹಣ ಮಾಡಲಿದ್ದಾರೆ. ವೀರ್‌ ಸಮರ್ಥ್‌ ಅವರ ಸಂಗೀತ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?