AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಮೊದಲ ಸಲ ರೀಲ್ಸ್​ ಮಾಡಿದ ಅಮೂಲ್ಯ; ಲಂಗ ದಾವಣಿ ಧರಿಸಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ ನಟಿ

Ane Madi Helutini song: ‘ಆಣೆ ಮಾಡಿ ಹೇಳುತೀನಿ..’ ಹಾಡು ಯೂಟ್ಯೂಬ್​ನಲ್ಲಿ 25 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ಹಾಡನ್ನು ಆಯ್ಕೆ ಮಾಡಿಕೊಂಡು ನಟಿ ಅಮೂಲ್ಯ ರೀಲ್ಸ್​ ಮಾಡಿದ್ದಾರೆ.

Amulya: ಮೊದಲ ಸಲ ರೀಲ್ಸ್​ ಮಾಡಿದ ಅಮೂಲ್ಯ; ಲಂಗ ದಾವಣಿ ಧರಿಸಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ ನಟಿ
ಅಮೂಲ್ಯ
TV9 Web
| Edited By: |

Updated on:Jul 17, 2022 | 6:37 PM

Share

ಎಲ್ಲ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯವಾಗಿ ಇರುತ್ತಾರೆ. ತಮ್ಮ ದಿನಚರಿಯ ಬಗ್ಗೆ ಮಾಹಿತಿ ನೀಡಲು, ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ಹಂಚಿಕೊಳ್ಳಲು, ನೆಚ್ಚಿನ ವ್ಯಕ್ತಿಗಳಿಗೆ ಶುಭಾಶಯ ಕೋರಲು ಸಾಮಾಜಿಕ ಜಾಲತಾಣವನ್ನು ನಟ-ನಟಿಯರು ಬಳಸುತ್ತಾರೆ. ನಟಿಯರು ಪ್ರತಿ ದಿನ ರೀಲ್ಸ್​ (Instagram Reels) ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಆದರೆ ಅಮೂಲ್ಯ (Amulya) ಅವರು ರೀಲ್ಸ್​ ವಿಚಾರದಲ್ಲಿ ಕೊಂಚ ಹಿಂದುಳಿದುಕೊಂಡಿದ್ದರು. ಈಗ ಅವರು ಮೊದಲ ಬಾರಿಗೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಮಾಡಿದ್ದಾರೆ. ಅದನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಗುರು ಶಿಷ್ಯರು’ ಸಿನಿಮಾದ ‘ಆಣೆ ಮಾಡಿ ಹೇಳುತೀನಿ..’ (Ane Madi Helutini song) ಹಾಡಿಗೆ ಅಮೂಲ್ಯ ಅವರು ರೀಲ್ಸ್​ ಮಾಡಿದ್ದಾರೆ. ಆ ಮೂಲಕ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಲಂಗ ದಾವಣಿ ಧರಿಸಿ ಅವರು ಮನಮೋಹಕವಾಗಿ ಡ್ಯಾನ್ಸ್​ ಮಾಡಿದ್ದಾರೆ. ‘ಮೊದಲ ರೀಲ್ಸ್​ಗಾಗಿ ನನ್ನ ಫೇವರಿಟ್​ ಹಾಡು. ನಿರ್ಮಾಪಕ ತರುಣ್​ ಸುಧೀರ್​ ಹಾಗೂ ಇಡೀ ‘ಗುರು ಶಿಷ್ಯರು’ ಚಿತ್ರತಂಡಕ್ಕೆ ದೊಡ್ಡ ಯಶಸ್ಸು ಸಿಗಲು ಅಂತ ಹಾರೈಸುತ್ತೇನೆ’ ಎಂದು ಅಮೂಲ್ಯ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Amulya: ನಟಿ ಅಮೂಲ್ಯ ಅವರ ಕ್ಯೂಟ್ ಫೋಟೋಗಳ ಗ್ಯಾಲರಿ
Image
‘ಆಣೆ ಮಾಡಿ ಹೇಳುತೀನಿ..’ ಎಂದು ಲಂಗ ದಾವಣಿ ಚಾಲೆಂಜ್ ಸ್ವೀಕರಿಸಿದ ರಂಜನಿ ರಾಘವನ್
Image
ಮಗುವಿನ ಜತೆ ಮೊದಲ ಬಾರಿ ಫೋಟೋ ಹಂಚಿಕೊಂಡ ನಟಿ ಅಮೂಲ್ಯ; ಆದ್ರೂ ಫ್ಯಾನ್ಸ್ ಬೇಸರ
Image
ಅಮ್ಮ ಮತ್ತು ಅಜ್ಜಿ ಜತೆ ನಿವೇದಿತಾ ಗೌಡ ರೀಲ್ಸ್​; ಕಮೆಂಟ್​ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಫ್ಯಾನ್ಸ್​

‘ಗುರು ಶಿಷ್ಯರು’ ಸಿನಿಮಾದಲ್ಲಿ ಶರಣ್​ ಹಾಗೂ ನಿಶ್ವಿಕಾ ನಾಯ್ಡು ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾ ‘ಆಣೆ ಮಾಡಿ ಹೇಳುತೀನಿ ನಾನು ನಿನ್ನವಳು..’ ಹಾಡು ಜನಮನ ಗೆದ್ದಿದೆ. ಯೂಟ್ಯೂಬ್​ನಲ್ಲಿ ಈ ಹಾಡು ಈವರೆಗೂ 25 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆ ಸೂಪರ್​ ಹಿಟ್​ ಆಗಿದೆ. ಅದೇ ಹಾಡನ್ನು ಆಯ್ಕೆ ಮಾಡಿಕೊಂಡು ಅಮೂಲ್ಯ ರೀಲ್ಸ್​ ಮಾಡಿದ್ದಾರೆ.

View this post on Instagram

A post shared by Amulya (@nimmaamulya)

ಈ ವರ್ಷ ಮಾರ್ಚ್​ ತಿಂಗಳಲ್ಲಿ ಅಮೂಲ್ಯ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದರು. ತಾಯಿ ಆದ ಬಳಿಕ ಅವರು ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸಿದರು. ಈಗ ಅವರನ್ನು ನೋಡಿ ಫ್ಯಾನ್ಸ್​ ಅಚ್ಚರಿಪಟ್ಟಿದ್ದಾರೆ. ‘ನೀವು ಎರಡು ಮಕ್ಕಳ ತಾಯಿ ಅಂತ ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಮದುವೆ ಬಳಿಕ ಅಮೂಲ್ಯ ಅವರು ನಟನೆಯಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಆದಷ್ಟು ಬೇಗ ಅವರು ಕಮ್​ಬ್ಯಾಕ್​ ಮಾಡಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

Published On - 6:36 pm, Sun, 17 July 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ