AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಆಗುತ್ತಿದ್ದಾರೆ ನಟಿ ಅಮೂಲ್ಯ; ವಿಶೇಷ ಫೋಟೋ ಮೂಲಕವೇ ಗುಡ್​ ನ್ಯೂಸ್​ ನೀಡಿದ ದಂಪತಿ

ನಟಿ ಅಮೂಲ್ಯ ಮತ್ತು ಜಗದೀಶ್​ ದಂಪತಿ ಫೋಟೋ ಸಮೇತ ಗುಡ್​ ನ್ಯೂಸ್​ ನೀಡಿದ್ದಾರೆ. ತಾವು ಮೊದಲ ಮಗವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.

ತಾಯಿ ಆಗುತ್ತಿದ್ದಾರೆ ನಟಿ ಅಮೂಲ್ಯ; ವಿಶೇಷ ಫೋಟೋ ಮೂಲಕವೇ ಗುಡ್​ ನ್ಯೂಸ್​ ನೀಡಿದ ದಂಪತಿ
ಅಮೂಲ್ಯ-ಜಗದೀಶ್
TV9 Web
| Edited By: |

Updated on:Dec 02, 2021 | 10:42 AM

Share

ಕನ್ನಡದ ಖ್ಯಾತ ನಟಿ ಅಮೂಲ್ಯ ( Amulya,) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್​ (Amulya Pregnan) ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್​ (Amulya husband Jagadish) ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ಸೋಶಿಯಲ್​ ಮೀಡಿಯಾ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅಮೂಲ್ಯ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸದ್ಯ ಅವರ ಹೊಸ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟವರು ಅಮೂಲ್ಯ. ನಂತರ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್​ ಆಗಿ ಬಡ್ತಿ ಪಡೆದುಕೊಂಡರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್​ ಹೀರೋಯಿನ್​ ಆಗಿ ಮಿಂಚಿದರು. ಗಣೇಶ್​, ಯಶ್​, ಲವ್ಲೀ ಸ್ಟಾರ್​ ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ಜತೆ ತೆರೆಹಂಚಿಕೊಂಡು ಮೆಚ್ಚುಗೆ ಗಳಿಸಿದರು. ಹೀಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್​ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್​ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ಗುಡ್​ ನ್ಯೂಸ್​ ನೀಡಲು ಅವರು ಮಾಡಿಸಿರುವ ಫೋಟೋಶೂಟ್​ ಗಮನ ಸೆಳೆಯುತ್ತಿದೆ.

2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್​ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’. 2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು.

ಇದನ್ನೂ ಓದಿ:

Kavya Gowda: ಮದುವೆ ಪೂರ್ವ ಶಾಸ್ತ್ರಗಳಲ್ಲಿ ಮಿಂಚಿದ ನಟಿ ಕಾವ್ಯಾ ಗೌಡ

4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ

Published On - 10:22 am, Thu, 2 December 21

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?