AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಆಗುತ್ತಿದ್ದಾರೆ ನಟಿ ಅಮೂಲ್ಯ; ವಿಶೇಷ ಫೋಟೋ ಮೂಲಕವೇ ಗುಡ್​ ನ್ಯೂಸ್​ ನೀಡಿದ ದಂಪತಿ

ನಟಿ ಅಮೂಲ್ಯ ಮತ್ತು ಜಗದೀಶ್​ ದಂಪತಿ ಫೋಟೋ ಸಮೇತ ಗುಡ್​ ನ್ಯೂಸ್​ ನೀಡಿದ್ದಾರೆ. ತಾವು ಮೊದಲ ಮಗವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.

ತಾಯಿ ಆಗುತ್ತಿದ್ದಾರೆ ನಟಿ ಅಮೂಲ್ಯ; ವಿಶೇಷ ಫೋಟೋ ಮೂಲಕವೇ ಗುಡ್​ ನ್ಯೂಸ್​ ನೀಡಿದ ದಂಪತಿ
ಅಮೂಲ್ಯ-ಜಗದೀಶ್
TV9 Web
| Edited By: |

Updated on:Dec 02, 2021 | 10:42 AM

Share

ಕನ್ನಡದ ಖ್ಯಾತ ನಟಿ ಅಮೂಲ್ಯ ( Amulya,) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್​ (Amulya Pregnan) ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್​ (Amulya husband Jagadish) ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ಸೋಶಿಯಲ್​ ಮೀಡಿಯಾ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅಮೂಲ್ಯ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸದ್ಯ ಅವರ ಹೊಸ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟವರು ಅಮೂಲ್ಯ. ನಂತರ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್​ ಆಗಿ ಬಡ್ತಿ ಪಡೆದುಕೊಂಡರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್​ ಹೀರೋಯಿನ್​ ಆಗಿ ಮಿಂಚಿದರು. ಗಣೇಶ್​, ಯಶ್​, ಲವ್ಲೀ ಸ್ಟಾರ್​ ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ಜತೆ ತೆರೆಹಂಚಿಕೊಂಡು ಮೆಚ್ಚುಗೆ ಗಳಿಸಿದರು. ಹೀಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್​ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್​ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ಗುಡ್​ ನ್ಯೂಸ್​ ನೀಡಲು ಅವರು ಮಾಡಿಸಿರುವ ಫೋಟೋಶೂಟ್​ ಗಮನ ಸೆಳೆಯುತ್ತಿದೆ.

2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್​ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’. 2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು.

ಇದನ್ನೂ ಓದಿ:

Kavya Gowda: ಮದುವೆ ಪೂರ್ವ ಶಾಸ್ತ್ರಗಳಲ್ಲಿ ಮಿಂಚಿದ ನಟಿ ಕಾವ್ಯಾ ಗೌಡ

4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ

Published On - 10:22 am, Thu, 2 December 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ