AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಕಂದಮ್ಮನ ಮೇಲೆ ಆಶೀರ್ವಾದ ಇರಲಿ’; ಮೊದಲ ಬಾರಿಗೆ ಮಕ್ಕಳ ಮುಖ ರಿವೀಲ್ ಮಾಡಿದ ಅಮೂಲ್ಯ

ಮಗು ಜನಿಸಿದ ನಂತರ ಅವರು ಸಾಮಾಜಿಕ ಜಾಲತಾಣದಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

‘ನಮ್ಮ ಕಂದಮ್ಮನ ಮೇಲೆ ಆಶೀರ್ವಾದ ಇರಲಿ’; ಮೊದಲ ಬಾರಿಗೆ ಮಕ್ಕಳ ಮುಖ ರಿವೀಲ್ ಮಾಡಿದ ಅಮೂಲ್ಯ
ಅಮೂಲ್ಯ ಚಿತ್ರ ಕೃಪೆ: ಇನ್​ಸ್ಟಾಗ್ರಾಮ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 19, 2022 | 6:38 PM

ನಟಿ ಅಮೂಲ್ಯ (Amulya) ಅವರಿಗೆ ಕಳೆದ ಕೆಲ ತಿಂಗಳ ಹಿಂದೆ ಅವಳಿ ಮಕ್ಕಳು ಜನಿಸಿದ್ದವು. ಮಗುವಿನ ಮುಖ ತೋರಿಸಿ ಎಂಬ ಒತ್ತಾಯ ಅಭಿಮಾನಿಗಳ ಕಡೆಯಿಂದ ಬಂದಿತ್ತು. ಆದರೆ, ನಟಿ ಅಮೂಲ್ಯ ಅವರು ಮಕ್ಕಳ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವಳಿ ಮಕ್ಕಳ ಮುಖವನ್ನು ರಿವೀಲ್ ಮಾಡಿದ್ದಾರೆ. ರೀಲ್ಸ್ ಮೂಲಕ ಮಕ್ಕಳ ಮುಖವನ್ನು ಫ್ಯಾನ್ಸ್​ಗೆ ತೋರಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಪ್ರೀತಿಯ ಕಮೆಂಟ್​ಗಳು ಬರುತ್ತಿವೆ.

ಅಮೂಲ್ಯ ಅವರು ಮೊದಲಿನಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪ್ರೆಗ್ನೆಂಟ್ ಆಗಿದ್ದ ಸಂದರ್ಭದ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಮಗು ಜನಿಸಿದ ನಂತರ ಅವರು ಸಾಮಾಜಿಕ ಜಾಲತಾಣದಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಹೊಸಹೊಸ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಮಗುವಿನ ಫೋಟೋ ತೋರಿಸಿದ್ದಾರೆ.

ಇದನ್ನೂ ಓದಿ
Image
Amulya: ನಟಿ ಅಮೂಲ್ಯ ಜೀವನ ಬದಲಿಸಿದ ‘ಚೆಲುವಿನ ಚಿತ್ತಾರ’ ಸಿನಿಮಾಗೆ 15 ವರ್ಷ; ನೆನಪಿನ ಪುಟ ತೆರೆದ ಐಸೂ
Image
ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್
Image
ಮಗುವಿನ ಜತೆ ಮೊದಲ ಬಾರಿ ಫೋಟೋ ಹಂಚಿಕೊಂಡ ನಟಿ ಅಮೂಲ್ಯ; ಆದ್ರೂ ಫ್ಯಾನ್ಸ್ ಬೇಸರ
Image
Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್

ಅಮೂಲ್ಯ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಜಿಮ್ ಹಾಗೂ ಯೋಗ ಮಾಡುತ್ತಾರೆ. ಮಗು ಜನಿಸಿದ ಕೆಲವೇ ತಿಂಗಳ ಬಳಿಕ ಅವರು ಫಿಟ್ ಆಗಿ ಕಾಣಿಸಿಕೊಂಡಿದ್ದರು. ಅಮೂಲ್ಯ ಫೋಟೋ ನೋಡಿ ಅವರ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದರು.

ಅಮೂಲ್ಯ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಇನ್ನು ಕೆಲ ವರ್ಷ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಲಿದ್ದಾರೆ.

‘ಗುರು ಶಿಷ್ಯರು’ ಸಿನಿಮಾದಲ್ಲಿ ಶರಣ್​ ಹಾಗೂ ನಿಶ್ವಿಕಾ ನಾಯ್ಡು ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾ ‘ಆಣೆ ಮಾಡಿ ಹೇಳುತೀನಿ ನಾನು ನಿನ್ನವಳು..’ ಹಾಡು ಜನಮನ ಗೆದ್ದಿದೆ. ಯೂಟ್ಯೂಬ್​ನಲ್ಲಿ ಈ ಹಾಡು ಈವರೆಗೂ 25 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆ ಸೂಪರ್​ ಹಿಟ್​ ಆಗಿದೆ. ಅದೇ ಹಾಡನ್ನು ಆಯ್ಕೆ ಮಾಡಿಕೊಂಡು ಅಮೂಲ್ಯ ಇತ್ತೀಚೆಗೆ ರೀಲ್ಸ್ ಮಾಡಿದ್ದರು.

Published On - 6:30 pm, Fri, 19 August 22

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?