AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿಯಾಗಿರುವುದನ್ನು ನಿಜಕ್ಕೂ ದ್ವೇಷಿಸುತ್ತೇನೆ ಎಂದ ಖುಷ್ಬೂ; ಅಂಥದ್ದೇನಾಯ್ತು?

ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್​ಗೂ ಈಗ ಕೊರೊನಾ ವೈರಸ್​ ಅಂಟಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಕ್ವಾರಂಟೈನ್​ ಆಗಿರುವುದರಿಂದ ಒಂಟಿಯಾಗಿರುವ ಪರಿಸ್ಥಿತಿ ಅವರಿಗೆ ಬಂದೊದಗಿದೆ.

ಒಂಟಿಯಾಗಿರುವುದನ್ನು ನಿಜಕ್ಕೂ ದ್ವೇಷಿಸುತ್ತೇನೆ ಎಂದ ಖುಷ್ಬೂ; ಅಂಥದ್ದೇನಾಯ್ತು?
ಖುಷ್ಬೂ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 10, 2022 | 6:03 PM

Share

ಕೊವಿಡ್​ ಮೂರನೇ ಅಲೆ (Corona 3rd Wave) ಕಾಣಿಸಿಕೊಂಡಿದೆ. ಕೊವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಈ ಮಧ್ಯೆ ಸಾಕಷ್ಟು ಸೆಲೆಬ್ರಿಟಿಗಳಿಗೆ, ರಾಜಕಾರಣಿಗಳಿಗೆ ಕೊವಿಡ್​ ಅಂಟುತ್ತಿದೆ. ಸಿನಿಮಾ ಕೆಲಸಗಳಿಗಾಗಿ ನಾನಾ ಕಡೆ ಸುತ್ತಾಟ ನಡೆಸುವ ಹಲವರು ಕೊವಿಡ್​ ಸೋಂಕಿಗೆ ತುತ್ತಾಗಿದ್ದಾರೆ. ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್​ಗೂ ಈಗ ಕೊರೊನಾ ವೈರಸ್​ ಅಂಟಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಕ್ವಾರಂಟೈನ್​ ಆಗಿರುವುದರಿಂದ ಒಂಟಿಯಾಗಿರುವ ಪರಿಸ್ಥಿತಿ ಅವರಿಗೆ ಬಂದೊದಗಿದೆ.

‘ಕೊವಿಡ್​ ಎರಡು ಅಲೆಯನ್ನು ತಪ್ಪಿಸಿಕೊಂಡೆ. ಆದರೆ, ಈಗ ಕೊವಿಡ್​ ಪಾಸಿಟಿವ್​ ಆಗಿದೆ. ನಿನ್ನೆ ಸಂಜೆಯವರೆಗೂ ನನಗೆ ಕೊವಿಡ್​ ನೆಗೆಟಿವ್​ ಆಗಿತ್ತು. ಆದರೆ, ಈಗ ಪಾಸಿಟಿವ್​ ವರದಿ ಬಂದಿದೆ. ನಾನು ಐಸೋಲೇಷನ್​ನಲ್ಲಿದ್ದೇನೆ. ಒಂಟಿಯಾಗಿರುವುದನ್ನು ನಿಜಕ್ಕೂ ದ್ವೇಷಿಸುತ್ತೇನೆ. ಮುಂದಿನ ಐದು ದಿನಗಳಕಾಲ ನನಗೆ ಮನರಂಜನೆ ನೀಡಿ. ಕೊವಿಡ್​ ಲಕ್ಷಣ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಖುಷ್ಬೂ ಟ್ವೀಟ್​ ಮಾಡಿದ್ದಾರೆ.

ನೂರಾರು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ಕಲಾವಿದೆ ಖುಷ್ಬೂ ಅವರು ಈಗ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರರಂಗದಲ್ಲಿ ಅವರು ಹೆಚ್ಚಾಗಿ ಸಕ್ರಿಯರಾಗಿಲ್ಲ. ಆದಾಗ್ಯೂ ಕನ್ನಡ ಚಿತ್ರರಂಗದ ಬಗ್ಗೆ ಹಾಗೂ ಇಲ್ಲಿನ ಕಲಾವಿದರ ಬಗ್ಗೆ ಇರುವ ಗೌರವ ಅವರಿಗೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಸಾಕಷ್ಟು ಕಡೆಗಳಲ್ಲಿ ಅವರು ಸ್ಯಾಂಡಲ್​ವುಡ್​ ಹಾಗೂ ಸ್ಯಾಂಡಲ್​ವುಡ್​ ಕಲಾವಿದರ ಬಗ್ಗೆ ಮಾತನಾಡಿದ್ದಿದೆ. ನವೆಂಬರ್​ 9ರಂದು ಖುಷ್ಬೂ ಬೆಂಗಳೂರಿನಲ್ಲಿರುವ ಪುನೀತ್​ ರಾಜ್​ಕುಮಾರ್​ ಮನೆಗೆ ಆಗಮಿಸಿದ್ದರು. ಈ ವೇಳೆ ಅಪ್ಪು ಪತ್ನಿ ಅಶ್ವಿನಿ ಪುನೀತ್​ ರಾಜ್​​ಕುಮಾರ್​ಗೆ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: ರವಿಚಂದ್ರನ್​ ತಂದೆ ಅಂದು ಮಾಡಿದ್ದ ಸಹಾಯವನ್ನು ಖುಷ್ಬೂ ಇನ್ನೂ ಮರೆತಿಲ್ಲ; ‘ಕ್ರೇಜಿ ಸ್ಟಾರ್’​ ಹೇಳ್ತಾರೆ ಕೇಳಿ..

ಹೇಗಿದ್ದ ಖುಷ್ಬೂ ಹೇಗಾದ್ರು ನೋಡಿ; ಅಚ್ಚರಿಯ ರೀತಿ ಸ್ಲಿಮ್​ ಆದ ‘ರಣಧೀರ’ ಚೆಲುವೆಯ ಸೀಕ್ರೆಟ್​ ಇಲ್ಲಿದೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ