AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavana Ramanna: ನನ್ನ ಮಕ್ಕಳಿಗೆ ತಂದೆ ಇಲ್ಲದೇ ಇರಬಹುದು, ಆದರೆ..: ಪ್ರೆಗ್ನೆನ್ಸಿ ಬಗ್ಗೆ ನಟಿ ಭಾವನಾ ಪ್ರತಿಕ್ರಿಯೆ

ಹಲವು ಗಮನಾರ್ಹ ಸಿನಿಮಾಗಳಲ್ಲಿ ನಟಿಸಿರುವ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳ ತಾಯಿಯಾಗುತ್ತಿದ್ದಾರೆ. ಆದರೆ ಅವರು ಮದುವೆ ಆಗಿಲ್ಲ. ತಮ್ಮ ಈ ನಿರ್ಧಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭಾವನಾ ರಾಮಣ್ಣ ಅವರ ನಿರ್ಧಾರವನ್ನು ಅವರ ಕುಟುಂಬದವರು ಹಾಗೂ ಚಿತ್ರರಂಗದ ಹಲವರು ಬೆಂಬಲಿಸಿದ್ದಾರೆ.

Bhavana Ramanna: ನನ್ನ ಮಕ್ಕಳಿಗೆ ತಂದೆ ಇಲ್ಲದೇ ಇರಬಹುದು, ಆದರೆ..: ಪ್ರೆಗ್ನೆನ್ಸಿ ಬಗ್ಗೆ ನಟಿ ಭಾವನಾ ಪ್ರತಿಕ್ರಿಯೆ
Bhavana Ramanna
ಮದನ್​ ಕುಮಾರ್​
| Edited By: |

Updated on:Jul 04, 2025 | 4:00 PM

Share

ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾವನಾ ರಾಮಣ್ಣ (Bhavana Ramanna) ಅವರು ಮದುವೆ ಆಗಿಲ್ಲ. ಆದರೆ ಮಕ್ಕಳನ್ನು ಪಡೆಯುವ ದಿಟ್ಟ ನಿರ್ಧಾರ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಉಂಟು ಮಾಡಿದೆ. ಈಗ ಅವರು 6 ತಿಂಗಳ ಗರ್ಭಿಣಿ! ಅವಳಿ ಮಕ್ಕಳಿಗೆ ಅವರು ತಾಯಿ ಆಗುತ್ತಿದ್ದಾರೆ. 40 ವರ್ಷ ದಾಟಿದ ಬಳಿಕ ಅವರು ತಾಯಿ ಆಗುತ್ತಿದ್ದಾರೆ. ಐವಿಎಫ್ (IVF) ತಂತ್ರಜ್ಞಾನದ ಮೂಲಕ ಇದು ಸಾಧ್ಯವಾಗುತ್ತಿದೆ. ಅವರು ಈ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾಗಿರಲಿಲ್ಲ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ತಾಯಿ ಆಗುತ್ತಿರುವುದರ ಬಗ್ಗೆ ಭಾವನಾ ರಾಮಣ್ಣ ಅವರು ಪೋಸ್ಟ್ ಮಾಡಿದ್ದಾರೆ.

‘ಒಂದು ಹೊಸ ಅಧ್ಯಾಯ, ಒಂದು ಹೊಸ ಲಯ’ ಎನ್ನುವ ಮೂಲಕ ಅವರು ಬರಹ ಆರಂಭಿಸಿದ್ದಾರೆ. ‘ಇದನ್ನು ನಾನು ಹೇಳುತ್ತೇನೆ ಅಂತ ಊಹಿಸಿಯೇ ಇರಲಿಲ್ಲ. ಆದರೆ ನಾನು ಈಗ 6 ತಿಂಗಳ ಗರ್ಣಿಣಿ. ಅವಳಿ ಮಕ್ಕಳ ತಾಯಿ ಆಗುತ್ತಿದ್ದೇನೆ. ಧನ್ಯತಾ ಭಾವ ಆವರಿಸಿದೆ’ ಎಂದು ಭಾವನಾ ರಾಮಣ್ಣ ಅವರು ಹೇಳಿದ್ದಾರೆ. ಜೊತೆಗೆ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ.

‘20ರ ವಯಸ್ಸಿನಲ್ಲಿ ಮತ್ತು 30ರ ವಯಸ್ಸಿನಲ್ಲಿ ನಾನು ತಾಯಿ ಆಗುವ ಬಗ್ಗೆ ಆಲೋಚಿಸಿರಲಿಲ್ಲ. ಆದರೆ 40ನೇ ವಯಸ್ಸು ಆದಾಗ ತಾಯಿಯಾಗುವ ಬಯಕೆ ತೀವ್ರವಾಗಿತ್ತು. ಒಂಟಿ ಮಹಿಳೆಯಾಗಿ ಈ ದಾರಿ ಸುಲಭದ್ದಾಗಿರಲಿಲ್ಲ. ಸಾಕಷ್ಟು ಐವಿಎಫ್ ಕ್ಲಿನಿಕ್​​ಗಳು ನನ್ನನ್ನು ಕೂಡಲೇ ತಿರಸ್ಕರಿಸಿದವು. ಆದರೆ ಡಾಕ್ಟರ್ ಸುಷ್ಮಾ ಅವರನ್ನು ರೇನ್​ ಬೋ ಆಸ್ಪತ್ರೆಯಲ್ಲಿ ಭೇಟಿಯಾದಾಗ ಅವರು ನನ್ನನ್ನು ಯಾವುದೇ ಜಡ್ಜ್​ಮೆಂಟ್ ಇಲ್ಲದೇ ಸ್ವಾಗತಿಸಿದರು. ಅವರ ಬೆಂಬಲದಿಂದ ನಾನು ಮೊದಲ ಪ್ರಯತ್ನದಲ್ಲೇ ಗರ್ಭಿಣಿ ಆದೆ’ ಎಂದಿದ್ದಾರೆ ಭಾವನಾ ರಾವಣ್ಣ. ಭಾವನಾ ರಾಮಣ್ಣ ಅವರ ಇಡೀ ಕುಟುಂಬದವರು ನಟಿಯ ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ. ‘ನನ್ನ ತಂದೆ, ಒಡಹುಟ್ಟಿದವರು, ಪ್ರೀತಿಪಾತ್ರರು ಬಹಳ ಹೆಮ್ಮೆ ಮತ್ತು ಪ್ರೀತಿಯಿಂದ ನನ್ನ ಪರವಾಗಿ ನಿಂತುಕೊಂಡರು. ಕೆಲವರು ನನ್ನ ನಿರ್ಧಾರವನ್ನು ಪ್ರಶ್ನಿಸಿದರು. ಆದರೆ ನಾನು ಇದಕ್ಕೆ ಸಿದ್ಧವಾಗಿದ್ದೇನೆ ಎಂಬುದು ನನ್ನ ಮನಸ್ಸಿಗೆ ತಿಳಿದಿತ್ತು’ ಎಂದು ಭಾವನಾ ರಾಮಣ್ಣ ಪೋಸ್ಟ್ ಮಾಡಿದ್ದಾರೆ.

ನಟಿ ಭಾವನಾ ರಾಮಣ್ಣ ಫೇಸ್​ಬುಕ್​ ಪೋಸ್ಟ್​

‘ನನ್ನ ಮಕ್ಕಳಿಗೆ ತಂದೆ ಇಲ್ಲದೇ ಇರಬಹುದು. ಆದರೆ ಅವರು ಕಲೆ, ಸಂಗೀತ, ಸಂಸ್ಕೃತಿ ಮತ್ತು ಅಪರಿಮಿತ ಪ್ರೀತಿ ತುಂಬಿದ ಮನೆಯಲ್ಲಿ ಬೆಳೆಯುತ್ತಾರೆ. ತಮ್ಮ ಬಗ್ಗೆ ಹೆಮ್ಮೆ ಆತ್ಮವಿಶ್ವಾಸ ಆಗುವ ರೀತಿಯಲ್ಲಿ ಅವರನ್ನು ಬೆಳೆಸಲಾಗುವುದು. ಬಂಡಾಯದ ಕಾರಣಕ್ಕೆ ನಾನು ಈ ದಾರಿ ಆಯ್ಕೆ ಮಾಡಿಕೊಂಡಿಲ್ಲ. ನನ್ನ ಸತ್ಯವನ್ನು ಗೌರವಿಸುವ ಸಲುವಾಗಿ ಆಯ್ಕೆ ಮಾಡಿಕೊಂಡೆ’ ಎಂದಿದ್ದಾರೆ ಭಾವನಾ.

ಇದನ್ನೂ ಓದಿ: ಒಂದೊಂಡೆ 2 ವರ್ಷದ ಮಗು, ಇನ್ನೊಂದೆಡೆ ಗರ್ಭಿಣಿ, ಮತ್ತೊಂದೆಡೆ ಕಾರ್ಗಿಲ್‌ ಯುದ್ಧ; ಇದು ಮಹಿಳಾ ಸೇನಾಧಿಕಾರಿಯ ಕಥೆ

‘ನನ್ನ ಈ ಕಥೆಯು ಕೇವಲ ಓರ್ವ ಮಹಿಳೆಗೆ ಸ್ಪೂರ್ತಿ ತುಂಬಿದರೂ ಸಾಕು’ ಎಂದು ಅವರು ಹೇಳಿದ್ದಾರೆ. ‘ಶೀಘ್ರದಲ್ಲೇ ಎರಡು ಪುಟ್ಟ ಜೀವಗಳು ನನ್ನನ್ನು ಅಮ್ಮ ಎಂದು ಕರೆಯುತ್ತವೆ. ಅದೇ ಸರ್ವಸ್ವ. ನನ್ನ ಜೊತೆ ಇದ್ದಿದ್ದಕ್ಕಾಗಿ ರೇನ್​ ಬೋ ಆಸ್ಪತ್ರೆಯ ಡಾಕ್ಟರ್ ಸುಷ್ಮಾ ಅವರಿಗೆ ಧನ್ಯವಾದಗಳು’ ಎನ್ನುವ ಮೂಲಕ ಭಾವನಾ ರಾಮಣ್ಣ ಅವರು ಬಹರ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:49 pm, Fri, 4 July 25

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್