ಬದಲಾಯ್ತು ಚೈತ್ರಾ ಕೋಟೂರ್​ ಹೆಸರು; ಮಾ ಪ್ರಗ್ಯಾ ಭಾರತಿ ಆಗಿ ಅಧ್ಯಾತ್ಮಕ್ಕೆ ಜಾರಿದ ನಟಿ

ಎಲ್ಲ ಕಹಿ ಘಟನೆಗಳಿಂದ ಈಗ ಚೈತ್ರಾ ಹೊರಬಂದಿದ್ದಾರೆ. ಸಿನಿಮಾ, ಸಂವಾದ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ನಡುವೆ ಅಧ್ಯಾತ್ಮಕದ ಕಡೆಗೆ ಅವರಿಗೆ ಒಲವು ಮೂಡಿರುವುದು ವಿಶೇಷ.

ಬದಲಾಯ್ತು ಚೈತ್ರಾ ಕೋಟೂರ್​ ಹೆಸರು; ಮಾ ಪ್ರಗ್ಯಾ ಭಾರತಿ ಆಗಿ ಅಧ್ಯಾತ್ಮಕ್ಕೆ ಜಾರಿದ ನಟಿ
ಬದಲಾಯ್ತು ಚೈತ್ರಾ ಕೋಟೂರ್​ ಹೆಸರು; ಮಾ ಪ್ರಗ್ಯಾ ಭಾರತಿ ಆಗಿ ಅಧ್ಯಾತ್ಮಕ್ಕೆ ಜಾರಿದ ನಟಿ
Follow us
| Updated By: ಮದನ್​ ಕುಮಾರ್​

Updated on: Jul 22, 2021 | 1:10 PM

ಬಿಗ್​ ಬಾಸ್​ಗೆ (Bigg Boss) ಕಾಲಿಟ್ಟ ಬಳಿಕ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡವರು ನಟಿ ಚೈತ್ರಾ ಕೋಟೂರ್​. ಸಿನಿಮಾ, ಸಾಹಿತ್ಯ, ರಂಗಭೂಮಿ, ಜಾಹೀರಾತು, ರಿಯಾಲಿಟಿ ಶೋ ಸೇರಿದಂತೆ ಹಲವು ಕಡೆಗಳಲ್ಲಿ ತೊಡಗಿಕೊಂಡಿರುವ ಚೈತ್ರಾ (Chaithra Kotoor) ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತಾರೆ. ಮ್ಯೂಸಿಕ್​ ವಿಡಿಯೋ ಮೂಲಕವೂ ಅವರು ಗುರುತಿಸಿಕೊಂಡಿದ್ದರು. ಅವರ ವೈಯಕ್ತಿಕ ಜೀವನದಲ್ಲಿ ವಿವಾದ ಕೂಡ ಆಗಿತ್ತು. ಆದರೆ ಎಲ್ಲದರ ನಡುವೆ ಅವರೀಗ ಹೆಸರು ಬದಲಾಯಿಸಿಕೊಂಡು ಅಧ್ಯಾತ್ಮದ ಸೆಳೆತಕ್ಕೆ ಸಿಲುಕಿದ್ದಾರೆ. ಇದು ಗಾಸಿಪ್​ ಅಲ್ಲ. ಈ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಚೈತ್ರಾ ಕೋಟೂರ್​ ಅವರು ಸದ್ಯ ಓಶೋ ಧ್ಯಾನ ಶಿಬಿರ ಸೇರಿಕೊಂಡಿದ್ದಾರೆ. ಅಧ್ಯಾತ್ಮಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಆ ಕ್ಷಣಗಳ ಹಲವು ಫೋಟೋ ಮತ್ತು ವಿಡಿಯೋಗಳನ್ನು ಕೂಡ ಚೈತ್ರಾ ಹಂಚಿಕೊಳ್ಳುತ್ತಿದ್ದಾರೆ. ಅಚ್ಚರಿ ಎಂದರೆ ಅವರ ಹೆಸರು ಕೂಡ ಬದಲಾಗಿದೆ. ಮಾ ಪ್ರಗ್ಯಾ ಭಾರತಿ ಎಂದು ಅವರು ತಮ್ಮನ್ನು ತಾವು ಕರೆದುಕೊಂಡಿದ್ದಾರೆ. ತಮ್ಮ ಫೋಟೋವೊಂದಕ್ಕೆ ಕ್ಯಾಪ್ಷನ್​ ನೀಡಿರುವ ಅವರು, ‘ಪ್ರೀತಿಯ ಗುರುಗಳಾದ ಸ್ವಾಮಿ ಗೋಪಾಲ ಭಾರತಿ ಅವರೊಂದಿಗೆ ಮಾ ಪ್ರಗ್ಯಾ ಭಾರತಿ’ ಎಂದು ಬರೆದುಕೊಂಡಿದ್ದಾರೆ.

ಇದೇ ವರ್ಷ ಮಾರ್ಚ್​ ತಿಂಗಳಲ್ಲಿ ಚೈತ್ರಾ ಕೋಟೂರ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಗೆಳೆಯ ನಾಗಾರ್ಜುನ್​ ಎಂಬುವವರ ಜೊತೆ ಅವರ ಮದುವೆ ನಡೆದಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಎರಡೂ ಕುಟುಂಬದವರ ನಡುವೆ ದೊಡ್ಡ ಜಟಾಪಟಿ ಶುರುವಾಗಿತ್ತು. ಬಲವಂತದಿಂದ ಈ ಮದುವೆ ಮಾಡಿಸಲಾಗಿದೆ ಎಂದು ನಾಗಾರ್ಜುನ್​ ಆರೋಪ ಮಾಡಿದರು. ಮದುವೆ ಮುರಿದು ಬಿದ್ದ ಬಳಿಕ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಬಳಿಕ ಕಣ್ಣೀರಿಟ್ಟು ವಿಡಿಯೋ ಮಾಡಿದ್ದ ಅವರು ತಮಗಾದ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿದ್ದರು.

ಆ ಎಲ್ಲ ಕಹಿ ಘಟನೆಗಳಿಂದ ಈಗ ಚೈತ್ರಾ ಹೊರಬಂದಿದ್ದಾರೆ. ಸಿನಿಮಾ, ಸಂವಾದ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ನಡುವೆ ಅಧ್ಯಾತ್ಮಕದ ಕಡೆಗೆ ಅವರಿಗೆ ಒಲವು ಮೂಡಿರುವುದು ವಿಶೇಷ. ಮಾ ಪ್ರಗ್ಯಾ ಭಾರತಿ ಎಂದು ತಮ್ಮನ್ನು ತಾವು ಕರೆದುಕೊಂಡಿರುವ ಅವರ ಮಂದಿನ ಪಯಣ ಹೇಗಿರಲಿದೆ ಎಂಬ ಕೌತುಕ ಜನರಲ್ಲಿ ಮೂಡಿದೆ.

ಇದನ್ನೂ ಓದಿ:

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!

ಚೈತ್ರಾ ಕೋಟೂರ್​-ನಾಗಾರ್ಜುನ್​ ಮದುವೆ ವಿವಾದ! ಏನು ಹೇಳುತ್ತಿವೆ ಈ ಫೋಟೋಗಳು?

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ