AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯ್ತು ಚೈತ್ರಾ ಕೋಟೂರ್​ ಹೆಸರು; ಮಾ ಪ್ರಗ್ಯಾ ಭಾರತಿ ಆಗಿ ಅಧ್ಯಾತ್ಮಕ್ಕೆ ಜಾರಿದ ನಟಿ

ಎಲ್ಲ ಕಹಿ ಘಟನೆಗಳಿಂದ ಈಗ ಚೈತ್ರಾ ಹೊರಬಂದಿದ್ದಾರೆ. ಸಿನಿಮಾ, ಸಂವಾದ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ನಡುವೆ ಅಧ್ಯಾತ್ಮಕದ ಕಡೆಗೆ ಅವರಿಗೆ ಒಲವು ಮೂಡಿರುವುದು ವಿಶೇಷ.

ಬದಲಾಯ್ತು ಚೈತ್ರಾ ಕೋಟೂರ್​ ಹೆಸರು; ಮಾ ಪ್ರಗ್ಯಾ ಭಾರತಿ ಆಗಿ ಅಧ್ಯಾತ್ಮಕ್ಕೆ ಜಾರಿದ ನಟಿ
ಬದಲಾಯ್ತು ಚೈತ್ರಾ ಕೋಟೂರ್​ ಹೆಸರು; ಮಾ ಪ್ರಗ್ಯಾ ಭಾರತಿ ಆಗಿ ಅಧ್ಯಾತ್ಮಕ್ಕೆ ಜಾರಿದ ನಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 22, 2021 | 1:10 PM

ಬಿಗ್​ ಬಾಸ್​ಗೆ (Bigg Boss) ಕಾಲಿಟ್ಟ ಬಳಿಕ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡವರು ನಟಿ ಚೈತ್ರಾ ಕೋಟೂರ್​. ಸಿನಿಮಾ, ಸಾಹಿತ್ಯ, ರಂಗಭೂಮಿ, ಜಾಹೀರಾತು, ರಿಯಾಲಿಟಿ ಶೋ ಸೇರಿದಂತೆ ಹಲವು ಕಡೆಗಳಲ್ಲಿ ತೊಡಗಿಕೊಂಡಿರುವ ಚೈತ್ರಾ (Chaithra Kotoor) ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತಾರೆ. ಮ್ಯೂಸಿಕ್​ ವಿಡಿಯೋ ಮೂಲಕವೂ ಅವರು ಗುರುತಿಸಿಕೊಂಡಿದ್ದರು. ಅವರ ವೈಯಕ್ತಿಕ ಜೀವನದಲ್ಲಿ ವಿವಾದ ಕೂಡ ಆಗಿತ್ತು. ಆದರೆ ಎಲ್ಲದರ ನಡುವೆ ಅವರೀಗ ಹೆಸರು ಬದಲಾಯಿಸಿಕೊಂಡು ಅಧ್ಯಾತ್ಮದ ಸೆಳೆತಕ್ಕೆ ಸಿಲುಕಿದ್ದಾರೆ. ಇದು ಗಾಸಿಪ್​ ಅಲ್ಲ. ಈ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಚೈತ್ರಾ ಕೋಟೂರ್​ ಅವರು ಸದ್ಯ ಓಶೋ ಧ್ಯಾನ ಶಿಬಿರ ಸೇರಿಕೊಂಡಿದ್ದಾರೆ. ಅಧ್ಯಾತ್ಮಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಆ ಕ್ಷಣಗಳ ಹಲವು ಫೋಟೋ ಮತ್ತು ವಿಡಿಯೋಗಳನ್ನು ಕೂಡ ಚೈತ್ರಾ ಹಂಚಿಕೊಳ್ಳುತ್ತಿದ್ದಾರೆ. ಅಚ್ಚರಿ ಎಂದರೆ ಅವರ ಹೆಸರು ಕೂಡ ಬದಲಾಗಿದೆ. ಮಾ ಪ್ರಗ್ಯಾ ಭಾರತಿ ಎಂದು ಅವರು ತಮ್ಮನ್ನು ತಾವು ಕರೆದುಕೊಂಡಿದ್ದಾರೆ. ತಮ್ಮ ಫೋಟೋವೊಂದಕ್ಕೆ ಕ್ಯಾಪ್ಷನ್​ ನೀಡಿರುವ ಅವರು, ‘ಪ್ರೀತಿಯ ಗುರುಗಳಾದ ಸ್ವಾಮಿ ಗೋಪಾಲ ಭಾರತಿ ಅವರೊಂದಿಗೆ ಮಾ ಪ್ರಗ್ಯಾ ಭಾರತಿ’ ಎಂದು ಬರೆದುಕೊಂಡಿದ್ದಾರೆ.

ಇದೇ ವರ್ಷ ಮಾರ್ಚ್​ ತಿಂಗಳಲ್ಲಿ ಚೈತ್ರಾ ಕೋಟೂರ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಗೆಳೆಯ ನಾಗಾರ್ಜುನ್​ ಎಂಬುವವರ ಜೊತೆ ಅವರ ಮದುವೆ ನಡೆದಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಎರಡೂ ಕುಟುಂಬದವರ ನಡುವೆ ದೊಡ್ಡ ಜಟಾಪಟಿ ಶುರುವಾಗಿತ್ತು. ಬಲವಂತದಿಂದ ಈ ಮದುವೆ ಮಾಡಿಸಲಾಗಿದೆ ಎಂದು ನಾಗಾರ್ಜುನ್​ ಆರೋಪ ಮಾಡಿದರು. ಮದುವೆ ಮುರಿದು ಬಿದ್ದ ಬಳಿಕ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಬಳಿಕ ಕಣ್ಣೀರಿಟ್ಟು ವಿಡಿಯೋ ಮಾಡಿದ್ದ ಅವರು ತಮಗಾದ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿದ್ದರು.

ಆ ಎಲ್ಲ ಕಹಿ ಘಟನೆಗಳಿಂದ ಈಗ ಚೈತ್ರಾ ಹೊರಬಂದಿದ್ದಾರೆ. ಸಿನಿಮಾ, ಸಂವಾದ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ನಡುವೆ ಅಧ್ಯಾತ್ಮಕದ ಕಡೆಗೆ ಅವರಿಗೆ ಒಲವು ಮೂಡಿರುವುದು ವಿಶೇಷ. ಮಾ ಪ್ರಗ್ಯಾ ಭಾರತಿ ಎಂದು ತಮ್ಮನ್ನು ತಾವು ಕರೆದುಕೊಂಡಿರುವ ಅವರ ಮಂದಿನ ಪಯಣ ಹೇಗಿರಲಿದೆ ಎಂಬ ಕೌತುಕ ಜನರಲ್ಲಿ ಮೂಡಿದೆ.

ಇದನ್ನೂ ಓದಿ:

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!

ಚೈತ್ರಾ ಕೋಟೂರ್​-ನಾಗಾರ್ಜುನ್​ ಮದುವೆ ವಿವಾದ! ಏನು ಹೇಳುತ್ತಿವೆ ಈ ಫೋಟೋಗಳು?

ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್