AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ತಾವರೆಕೆರೆಯಲ್ಲಿ ನಡೆದಿದೆ. ಜಾಹೀರಾತು, ಕಿರುತೆರೆಯಲ್ಲಿ ಹಾಗೂ ಕೆಲ ಸಿನಿಮಾದಲ್ಲಿ ಸಹ ನಟಿಯಾಗಿ ಅಭಿನಯಿಸಿದ್ದ ಚಂದನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕನ ಮೋಸಕ್ಕೆ ಬಲಿಯಾಗಿ ನಟಿ ಚಂದನಾ ವಿಷ ಸೇವಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್​ನಲ್ಲಿ 3 ದಿನಗಳ ಹಿಂದೆ ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟು ನಟಿ ಚಂದನಾ ವಿಷ ಕುಡಿದು ಸಾವಿಗೀಡಾಗಿದ್ದಾರೆ. ಮೇ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ […]

ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ
ಸಾಧು ಶ್ರೀನಾಥ್​
| Edited By: |

Updated on:Jun 07, 2020 | 8:28 AM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ತಾವರೆಕೆರೆಯಲ್ಲಿ ನಡೆದಿದೆ. ಜಾಹೀರಾತು, ಕಿರುತೆರೆಯಲ್ಲಿ ಹಾಗೂ ಕೆಲ ಸಿನಿಮಾದಲ್ಲಿ ಸಹ ನಟಿಯಾಗಿ ಅಭಿನಯಿಸಿದ್ದ ಚಂದನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವಕನ ಮೋಸಕ್ಕೆ ಬಲಿಯಾಗಿ ನಟಿ ಚಂದನಾ ವಿಷ ಸೇವಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್​ನಲ್ಲಿ 3 ದಿನಗಳ ಹಿಂದೆ ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟು ನಟಿ ಚಂದನಾ ವಿಷ ಕುಡಿದು ಸಾವಿಗೀಡಾಗಿದ್ದಾರೆ. ಮೇ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಂದನಾ ಹಾಗೂ ಆರೋಪಿ ಪ್ರಿಯಕರ ದಿನೇಶ್ 5 ವರ್ಷಗಳಿಂದ ಪ್ರೀತಿಸುತ್ತಿದ್ರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದಿನೇಶ್ 5 ಲಕ್ಷ ರೂಪಾಯಿ ಪಡೆದಿದ್ದ. ಅಲ್ಲದೆ, ಚಂದನಾರನ್ನು ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಚಂದನಾಳ ಗರ್ಭಪಾತ ಕೂಡ ಮಾಡಿಸಿದ್ದಾನೆ ಎನ್ನಲಾಗಿದೆ.

ಕೊನೆಗೆ ಮದುವೆಯಾಗಲು ನಿರಾಕರಿಸಿ ಮಾನಸಿಕ ಹಿಂಸೆ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಚಂದನಾ ವಿಷ ಸೇವಿಸಿದ್ದಾರೆ. ಅಸ್ವಸ್ಥ ಚಂದನಾರನ್ನು ಪ್ರಿಯಕರನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಂದನಾ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ದಿನೇಶ್ ನಾಪತ್ತೆಯಾಗಿದ್ದಾನೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಿಯಕರ ದಿನೇಶ್ ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ದಿನೇಶ್​ಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.

Published On - 3:10 pm, Mon, 1 June 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ