ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ತಾವರೆಕೆರೆಯಲ್ಲಿ ನಡೆದಿದೆ. ಜಾಹೀರಾತು, ಕಿರುತೆರೆಯಲ್ಲಿ ಹಾಗೂ ಕೆಲ ಸಿನಿಮಾದಲ್ಲಿ ಸಹ ನಟಿಯಾಗಿ ಅಭಿನಯಿಸಿದ್ದ ಚಂದನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕನ ಮೋಸಕ್ಕೆ ಬಲಿಯಾಗಿ ನಟಿ ಚಂದನಾ ವಿಷ ಸೇವಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್​ನಲ್ಲಿ 3 ದಿನಗಳ ಹಿಂದೆ ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟು ನಟಿ ಚಂದನಾ ವಿಷ ಕುಡಿದು ಸಾವಿಗೀಡಾಗಿದ್ದಾರೆ. ಮೇ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ […]

ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 07, 2020 | 8:28 AM

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ತಾವರೆಕೆರೆಯಲ್ಲಿ ನಡೆದಿದೆ. ಜಾಹೀರಾತು, ಕಿರುತೆರೆಯಲ್ಲಿ ಹಾಗೂ ಕೆಲ ಸಿನಿಮಾದಲ್ಲಿ ಸಹ ನಟಿಯಾಗಿ ಅಭಿನಯಿಸಿದ್ದ ಚಂದನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವಕನ ಮೋಸಕ್ಕೆ ಬಲಿಯಾಗಿ ನಟಿ ಚಂದನಾ ವಿಷ ಸೇವಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್​ನಲ್ಲಿ 3 ದಿನಗಳ ಹಿಂದೆ ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟು ನಟಿ ಚಂದನಾ ವಿಷ ಕುಡಿದು ಸಾವಿಗೀಡಾಗಿದ್ದಾರೆ. ಮೇ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಂದನಾ ಹಾಗೂ ಆರೋಪಿ ಪ್ರಿಯಕರ ದಿನೇಶ್ 5 ವರ್ಷಗಳಿಂದ ಪ್ರೀತಿಸುತ್ತಿದ್ರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದಿನೇಶ್ 5 ಲಕ್ಷ ರೂಪಾಯಿ ಪಡೆದಿದ್ದ. ಅಲ್ಲದೆ, ಚಂದನಾರನ್ನು ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಚಂದನಾಳ ಗರ್ಭಪಾತ ಕೂಡ ಮಾಡಿಸಿದ್ದಾನೆ ಎನ್ನಲಾಗಿದೆ.

ಕೊನೆಗೆ ಮದುವೆಯಾಗಲು ನಿರಾಕರಿಸಿ ಮಾನಸಿಕ ಹಿಂಸೆ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಚಂದನಾ ವಿಷ ಸೇವಿಸಿದ್ದಾರೆ. ಅಸ್ವಸ್ಥ ಚಂದನಾರನ್ನು ಪ್ರಿಯಕರನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಂದನಾ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ದಿನೇಶ್ ನಾಪತ್ತೆಯಾಗಿದ್ದಾನೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಿಯಕರ ದಿನೇಶ್ ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ದಿನೇಶ್​ಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.

Published On - 3:10 pm, Mon, 1 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us