AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನಿಮ್ಮೂರಿನವಳೇ, ಸುಧಾಕರ್​ಗೆ ವೋಟ್ ಮಾಡಿ! ಹರಿಪ್ರಿಯಾ ರೋಡ್ ಶೋ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರ ನಟಿ ಹರಿಪ್ರಿಯಾ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ನಗರದ 5ನೇ ವಾರ್ಡನಲ್ಲಿ ಮನೆ ಮನೆಗೆ ತೆರಳಿ ಬಿಜೆಪಿಗೆ ನಿಮ್ಮ ಮತವನ್ನು ಹಾಕಬೇಕು ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಜನಗಳ ಜೊತೆ ಮಾತನಾಡುತ್ತ ಅವರೊಡನೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇವರ ಜೊತೆ ಬಿಜೆಪಿಯ ಅನೇಕ ಕರ್ಯಕರ್ತರು ಸಾಥ್ ನೀಡಿದ್ದಾರೆ. ಜೊತೆಗೆ ಮೂಲತಃ ಚಿಕ್ಕಬಳ್ಳಾಪುರ ನಗರದವರಾಗಿರುವ ಹರಿಪ್ರಿಯಾ, ತವರೂರಿನಲ್ಲಿ ತಮ್ಮ ಬಾಲ್ಯದ ತುಂಟಾಟವನ್ನೆಲ್ಲ ನೆನಪಿಸಿಕೊಂಡಿದ್ದಾರೆ. […]

ನಾನು ನಿಮ್ಮೂರಿನವಳೇ, ಸುಧಾಕರ್​ಗೆ ವೋಟ್ ಮಾಡಿ! ಹರಿಪ್ರಿಯಾ ರೋಡ್ ಶೋ
ಸಾಧು ಶ್ರೀನಾಥ್​
|

Updated on:Nov 27, 2019 | 12:41 PM

Share

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರ ನಟಿ ಹರಿಪ್ರಿಯಾ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ನಗರದ 5ನೇ ವಾರ್ಡನಲ್ಲಿ ಮನೆ ಮನೆಗೆ ತೆರಳಿ ಬಿಜೆಪಿಗೆ ನಿಮ್ಮ ಮತವನ್ನು ಹಾಕಬೇಕು ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಜನಗಳ ಜೊತೆ ಮಾತನಾಡುತ್ತ ಅವರೊಡನೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇವರ ಜೊತೆ ಬಿಜೆಪಿಯ ಅನೇಕ ಕರ್ಯಕರ್ತರು ಸಾಥ್ ನೀಡಿದ್ದಾರೆ.

ಜೊತೆಗೆ ಮೂಲತಃ ಚಿಕ್ಕಬಳ್ಳಾಪುರ ನಗರದವರಾಗಿರುವ ಹರಿಪ್ರಿಯಾ, ತವರೂರಿನಲ್ಲಿ ತಮ್ಮ ಬಾಲ್ಯದ ತುಂಟಾಟವನ್ನೆಲ್ಲ ನೆನಪಿಸಿಕೊಂಡಿದ್ದಾರೆ. ಚುನಾವಣಾ ಪ್ರಚಾರ ನನಗೆ ಫಸ್ಟ್ ಎಕ್ಸ್​ಪೀರಿಯನ್ಸ್. ಇದುವರೆಗೂ ಸಿನಿಮಾಗಳ ಮೂಲಕ ಜನರನ್ನು ತಲುಪಿದ್ದೇನೆ. ಈಗ ಸುಧಾಕರ್ ಅತಂಹ ಒಳ್ಳೆಯ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದೇನೆ. ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸುಧಾಕರ್ ಸಹ ಒಳ್ಳೆ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ ಎಂದು ಹರಿಪ್ರಿಯಾ ಹೇಳಿದರು.

ನಾನು ಇಲ್ಲಿನವಳೇ ಇದೇ ಬೀದಿಗಳಲ್ಲಿ ಓಡಾಡಿದ್ದೇನೆ, ಎಲ್ಲರೂ ಪರಿಚಯ ಇದ್ದಾರೆ. 15 ವರ್ಷಗಳಾಯ್ತು ನಾನು ಬೆಂಗಳೂರಿಗೆ ಹೋಗಿ, ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಇನ್ನೂ ಸಾಕಷ್ಟು ಬದಲಾವಣೆಗೆ ಅವಕಾಶಗಳಿವೆ. ಅದನ್ನು ನಿಮ್ಮ ಸುಧಾಕರ್ ಪೂರೈಸುತ್ತಾರೆ. ಅದಕ್ಕೇ.. ನೀವು ಅವರಿಗೆ ವೋಟ್ ಮಾಡಿ ಎಂದು ಹರಿಪ್ರಿಯ ಮನೆ ಮನೆಗೆ ಭೇಟಿ ನೀಡುತ್ತಾ ಸುಧಾಕರ್ ಪರ ಮತಯಾಚಿಸಿದರು.

Published On - 12:35 pm, Wed, 27 November 19

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!