AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ'ಯ ಪ್ರಸಂಗವನ್ನು ಆಧರಿಸಿ ‘ಅಮೃತಮತಿ' ಚಿತ್ರ ಸಿದ್ಧವಾಗಿದೆ. ಬರಗೂರು ಅವರ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.

Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ
ಹರಿಪ್ರಿಯಾ
ರಾಜೇಶ್ ದುಗ್ಗುಮನೆ
|

Updated on:Jul 06, 2021 | 9:25 PM

Share

ನಟಿ ಹರಿಪ್ರಿಯಾ ತಮ್ಮ ನಟನೆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಗ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರ ‘ಹಾಲಿವುಡ್ ಅಂತರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ಹರಿಪ್ರಿಯಾಗೆ ಶ್ರೇಷ್ಠನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ.  

‘ಅಮೃತಮತಿ’ ಚಿತ್ರ ಈ ಮೊದಲು ‘ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಶ್ರೇಷ್ಠ ವಿದೇಶಿ ಭಾಷೆಯ ಚಿತ್ರವೆಂಬ ಪ್ರಶಸ್ತಿ ಗಳಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕತೆ ಪ್ರಶಸ್ತಿ ಲಭಿಸಿತ್ತು. ಈಗ ಈ ಚಿತ್ರಕ್ಕೆ ಮತ್ತೊಂದು ಪ್ರಶಸ್ತಿ ಸಿಕ್ಕಂತಾಗಿದೆ. ಇಲ್ಲಿವರಗೆ ಈ ಚಿತ್ರವು ಹತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿರೋದು ವಿಶೇಷ.

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗವನ್ನು ಆಧರಿಸಿ ‘ಅಮೃತಮತಿ’ ಚಿತ್ರ ಸಿದ್ಧವಾಗಿದೆ. ಬರಗೂರು ಅವರ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.  ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಶೀಘ್ರವೇ ಈ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಲಿದೆ.

ನಟಿ ಹರಿಪ್ರಿಯಾ ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ‘ಪೆಟ್ರೋಮ್ಯಾಕ್ಸ್’ ಚಿತ್ರಕ್ಕೆ ಹರಿಪ್ರಿಯಾ ನಾಯಕಿ. ಬೆಲ್​ ಬಾಟಂ 2 ಸೇರಿ 7-8 ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಇದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲsಗಳು ಅರ್ಧಕ್ಕೆ ನಿಂತಿದ್ದವು. ಈಗ ಕೊವಿಡ್​ ಕಡಿಮೆ ಆಗಿದ್ದು, ಹರಿಪ್ರಿಯಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ

Published On - 7:38 pm, Tue, 6 July 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ