AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ'ಯ ಪ್ರಸಂಗವನ್ನು ಆಧರಿಸಿ ‘ಅಮೃತಮತಿ' ಚಿತ್ರ ಸಿದ್ಧವಾಗಿದೆ. ಬರಗೂರು ಅವರ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.

Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ
ಹರಿಪ್ರಿಯಾ
ರಾಜೇಶ್ ದುಗ್ಗುಮನೆ
|

Updated on:Jul 06, 2021 | 9:25 PM

Share

ನಟಿ ಹರಿಪ್ರಿಯಾ ತಮ್ಮ ನಟನೆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಗ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರ ‘ಹಾಲಿವುಡ್ ಅಂತರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ಹರಿಪ್ರಿಯಾಗೆ ಶ್ರೇಷ್ಠನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ.  

‘ಅಮೃತಮತಿ’ ಚಿತ್ರ ಈ ಮೊದಲು ‘ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಶ್ರೇಷ್ಠ ವಿದೇಶಿ ಭಾಷೆಯ ಚಿತ್ರವೆಂಬ ಪ್ರಶಸ್ತಿ ಗಳಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕತೆ ಪ್ರಶಸ್ತಿ ಲಭಿಸಿತ್ತು. ಈಗ ಈ ಚಿತ್ರಕ್ಕೆ ಮತ್ತೊಂದು ಪ್ರಶಸ್ತಿ ಸಿಕ್ಕಂತಾಗಿದೆ. ಇಲ್ಲಿವರಗೆ ಈ ಚಿತ್ರವು ಹತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿರೋದು ವಿಶೇಷ.

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗವನ್ನು ಆಧರಿಸಿ ‘ಅಮೃತಮತಿ’ ಚಿತ್ರ ಸಿದ್ಧವಾಗಿದೆ. ಬರಗೂರು ಅವರ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.  ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಶೀಘ್ರವೇ ಈ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಲಿದೆ.

ನಟಿ ಹರಿಪ್ರಿಯಾ ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ‘ಪೆಟ್ರೋಮ್ಯಾಕ್ಸ್’ ಚಿತ್ರಕ್ಕೆ ಹರಿಪ್ರಿಯಾ ನಾಯಕಿ. ಬೆಲ್​ ಬಾಟಂ 2 ಸೇರಿ 7-8 ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಇದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲsಗಳು ಅರ್ಧಕ್ಕೆ ನಿಂತಿದ್ದವು. ಈಗ ಕೊವಿಡ್​ ಕಡಿಮೆ ಆಗಿದ್ದು, ಹರಿಪ್ರಿಯಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ

Published On - 7:38 pm, Tue, 6 July 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More