AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ: ಹಸೆಮಣೆ ಏರಲಿರುವ ಹರ್ಷಿಕಾ-ಭುವನ್ ಪೊನ್ನಣ್ಣ

Harshika-Bhuvan: ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಇದೇ ತಿಂಗಳು ಕೊಡಗಿನಲ್ಲಿ ವಿವಾಹವಾಗಲಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ: ಹಸೆಮಣೆ ಏರಲಿರುವ ಹರ್ಷಿಕಾ-ಭುವನ್ ಪೊನ್ನಣ್ಣ
ಹರ್ಷಿಕಾ-ಭುವನ್
ಮಂಜುನಾಥ ಸಿ.
|

Updated on: Aug 02, 2023 | 8:20 PM

Share

ಕೆಲವು ತಿಂಗಳ ಹಿಂದಷ್ಟೆ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ವಿವಾಹವಾಗಿದ್ದರು. ಅದಾದ ಬಳಿಕ ನಟ ಅಭಿಷೇಕ್ ಅಂಬರೀಶ್ ಅದ್ಧೂರಿ ವಿವಾಹ ಸದ್ದಾಯಿತು. ಈಗ ಸ್ಯಾಂಡಲ್​ವುಡ್​ನ ತಾರೆಯರು ತಾರಾ ಜೋಡಿಯಾಗಲು ಸಿದ್ಧರಾಗಿದ್ದಾರೆ. ಬಹು ಕಾಲದ ಗೆಳೆಯರಾದ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಭುವನ್ ಪೊನ್ನಣ್ಣ (Bhuvan Ponnanna) ತಮ್ಮ ಪ್ರೀತಿಗೆ ದಾಂಪತ್ಯದ ಮುದ್ರೆ ಒತ್ತಲು ತಯಾರಾಗಿದ್ದಾರೆ. ನಟಿ ಹರ್ಷಿಕಾ ತಮ್ಮ ಹಾಗೂ ಭುವನ್​ರ ಮದುವೆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ತಾಯ್ತ ಸಿನಿಮಾದ ಆಡಿಯೋ ಲಾಂಚ್​ನಲ್ಲಿ ಭಾಗವಹಿಸಿದ್ದ ನಟಿ ಹರ್ಷಿಕಾ ಪೂಣಚ್ಚ ತಾವು ಹಾಗೂ ಭುವನ್ ವಿವಾಹವಾಗಲು ನಿಶ್ಚಯಿಸಿರುವುದಾಗಿ ಹೇಳಿದ್ದಾರೆ. ಆಗಸ್ಟ್ 23 ಹಾಗೂ 24 ಕೊಡಗಿನ ಅಂಬತ್ತಿ ಕೊಡವ ಸಮಾಜದಲ್ಲಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೊಡವ ಸಂಪ್ರದಾಯದಂತೇ ಹರ್ಷಿಕಾ-ಭುವನ್ ವಿವಾಹ ನಡೆಯಲಿದೆ.

ನಟ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಕಳೆದ ಆರು ವರ್ಷಗಳಿಂದಲೂ ಪ್ರೀತಿಸುತ್ತಿದ್ದರು. ಆದರೆ ತಮ್ಮ ಪ್ರೀತಿಯನ್ನು ಗೌಪ್ಯವಾಗಿಟ್ಟಿದ್ದರು. ಕೋವಿಡ್ ಸಮಯದಲ್ಲಿ ಈ ಇಬ್ಬರೂ ಸೇರಿ ಸಮಾಜ ಮುಖಿ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದರು. ಈಗ ಆರು ವರ್ಷದ ತರುವಾಯ ಪ್ರೀತಿಯನ್ನು ವಿವಾಹಕ್ಕೆ ಬಡ್ತಿ ಮಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ವಿವಾಹದ ಕುರಿತು ಈ ಹಿಂದೆಯೇ ಸುದ್ದಿಯಾಗಿತ್ತು, ಆದರೆ ಈಗ ಖಾತ್ರಿಯಾಗಿದೆ.

ಇದನ್ನೂ ಓದಿ:Harshika Poonacha: ನೀಲಿ ಸಮುದ್ರದ ತಟದಲ್ಲಿ ಶ್ವೇತ ಸುಂದರಿ ಹರ್ಷಿಕಾ ಪೂಣಚ್ಚ

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಇಬ್ಬರೂ ಕೊಡವರಾಗಿದ್ದಾರೆ. ಹರ್ಷಿಕಾ ಪೂಣಚ್ಚ 2008 ರಲ್ಲಿ ‘ಪಿಯುಸಿ’ ಹೆಸರಿನ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟರು. ಆ ನಂತರ ಕೆಲವು ಕೊಡವ ಸಿನಿಮಾಗಳು, ಕೆಲವು ಸಿನಿಮಾಗಳಲ್ಲಿ ಪೋಷಕ ನಟಿ, ಮುಖ್ಯ ನಟಿಯಾಗಿಯೂ ನಟಿಸಿದರು. ತೆಲುಗು, ಭೋಜ್​ಪುರಿ ಸಿನಿಮಾಗಳಲ್ಲಿಯೂ ಹರ್ಷಿಕಾ ನಟಿಸಿದ್ದು, ಕೆಲವು ನೆನಪುಳಿಯುವ ಪಾತ್ರಗಳಲ್ಲಿಯೂ ಕಾಣಸಿಕೊಂಡಿದ್ದಾರೆ.

ಇನ್ನು ಭುವನ್ ಪೊನ್ನಣ್ಣ, ಸುದೀಪ್ ನಿರ್ದೇಶನದ ‘ಜಸ್ಟ್ ಮಾತ್ ಮಾತಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟರು. ಆ ಬಳಿಕ ‘ಕೂಲ್’, ‘ಮಂಜುನಾಥ ಬಿಎ, ಎಲ್​ಎಲ್​ಬಿ’, ‘ಕುಚಿಕು-ಕುಚಿಕು’, ‘ರಾಂಧವ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ತಮಿಳು ಸಿನಿಮಾ ಹಾಗೂ ಒಂದು ಕನ್ನಡ ಧಾರಾವಾಹಿಯಲ್ಲಿಯೂ ಭುವನ್ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ