ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ: ಹಸೆಮಣೆ ಏರಲಿರುವ ಹರ್ಷಿಕಾ-ಭುವನ್ ಪೊನ್ನಣ್ಣ

Harshika-Bhuvan: ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಇದೇ ತಿಂಗಳು ಕೊಡಗಿನಲ್ಲಿ ವಿವಾಹವಾಗಲಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ: ಹಸೆಮಣೆ ಏರಲಿರುವ ಹರ್ಷಿಕಾ-ಭುವನ್ ಪೊನ್ನಣ್ಣ
ಹರ್ಷಿಕಾ-ಭುವನ್
Follow us
|

Updated on: Aug 02, 2023 | 8:20 PM

ಕೆಲವು ತಿಂಗಳ ಹಿಂದಷ್ಟೆ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ವಿವಾಹವಾಗಿದ್ದರು. ಅದಾದ ಬಳಿಕ ನಟ ಅಭಿಷೇಕ್ ಅಂಬರೀಶ್ ಅದ್ಧೂರಿ ವಿವಾಹ ಸದ್ದಾಯಿತು. ಈಗ ಸ್ಯಾಂಡಲ್​ವುಡ್​ನ ತಾರೆಯರು ತಾರಾ ಜೋಡಿಯಾಗಲು ಸಿದ್ಧರಾಗಿದ್ದಾರೆ. ಬಹು ಕಾಲದ ಗೆಳೆಯರಾದ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಭುವನ್ ಪೊನ್ನಣ್ಣ (Bhuvan Ponnanna) ತಮ್ಮ ಪ್ರೀತಿಗೆ ದಾಂಪತ್ಯದ ಮುದ್ರೆ ಒತ್ತಲು ತಯಾರಾಗಿದ್ದಾರೆ. ನಟಿ ಹರ್ಷಿಕಾ ತಮ್ಮ ಹಾಗೂ ಭುವನ್​ರ ಮದುವೆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ತಾಯ್ತ ಸಿನಿಮಾದ ಆಡಿಯೋ ಲಾಂಚ್​ನಲ್ಲಿ ಭಾಗವಹಿಸಿದ್ದ ನಟಿ ಹರ್ಷಿಕಾ ಪೂಣಚ್ಚ ತಾವು ಹಾಗೂ ಭುವನ್ ವಿವಾಹವಾಗಲು ನಿಶ್ಚಯಿಸಿರುವುದಾಗಿ ಹೇಳಿದ್ದಾರೆ. ಆಗಸ್ಟ್ 23 ಹಾಗೂ 24 ಕೊಡಗಿನ ಅಂಬತ್ತಿ ಕೊಡವ ಸಮಾಜದಲ್ಲಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೊಡವ ಸಂಪ್ರದಾಯದಂತೇ ಹರ್ಷಿಕಾ-ಭುವನ್ ವಿವಾಹ ನಡೆಯಲಿದೆ.

ನಟ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಕಳೆದ ಆರು ವರ್ಷಗಳಿಂದಲೂ ಪ್ರೀತಿಸುತ್ತಿದ್ದರು. ಆದರೆ ತಮ್ಮ ಪ್ರೀತಿಯನ್ನು ಗೌಪ್ಯವಾಗಿಟ್ಟಿದ್ದರು. ಕೋವಿಡ್ ಸಮಯದಲ್ಲಿ ಈ ಇಬ್ಬರೂ ಸೇರಿ ಸಮಾಜ ಮುಖಿ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದರು. ಈಗ ಆರು ವರ್ಷದ ತರುವಾಯ ಪ್ರೀತಿಯನ್ನು ವಿವಾಹಕ್ಕೆ ಬಡ್ತಿ ಮಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ವಿವಾಹದ ಕುರಿತು ಈ ಹಿಂದೆಯೇ ಸುದ್ದಿಯಾಗಿತ್ತು, ಆದರೆ ಈಗ ಖಾತ್ರಿಯಾಗಿದೆ.

ಇದನ್ನೂ ಓದಿ:Harshika Poonacha: ನೀಲಿ ಸಮುದ್ರದ ತಟದಲ್ಲಿ ಶ್ವೇತ ಸುಂದರಿ ಹರ್ಷಿಕಾ ಪೂಣಚ್ಚ

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಇಬ್ಬರೂ ಕೊಡವರಾಗಿದ್ದಾರೆ. ಹರ್ಷಿಕಾ ಪೂಣಚ್ಚ 2008 ರಲ್ಲಿ ‘ಪಿಯುಸಿ’ ಹೆಸರಿನ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟರು. ಆ ನಂತರ ಕೆಲವು ಕೊಡವ ಸಿನಿಮಾಗಳು, ಕೆಲವು ಸಿನಿಮಾಗಳಲ್ಲಿ ಪೋಷಕ ನಟಿ, ಮುಖ್ಯ ನಟಿಯಾಗಿಯೂ ನಟಿಸಿದರು. ತೆಲುಗು, ಭೋಜ್​ಪುರಿ ಸಿನಿಮಾಗಳಲ್ಲಿಯೂ ಹರ್ಷಿಕಾ ನಟಿಸಿದ್ದು, ಕೆಲವು ನೆನಪುಳಿಯುವ ಪಾತ್ರಗಳಲ್ಲಿಯೂ ಕಾಣಸಿಕೊಂಡಿದ್ದಾರೆ.

ಇನ್ನು ಭುವನ್ ಪೊನ್ನಣ್ಣ, ಸುದೀಪ್ ನಿರ್ದೇಶನದ ‘ಜಸ್ಟ್ ಮಾತ್ ಮಾತಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟರು. ಆ ಬಳಿಕ ‘ಕೂಲ್’, ‘ಮಂಜುನಾಥ ಬಿಎ, ಎಲ್​ಎಲ್​ಬಿ’, ‘ಕುಚಿಕು-ಕುಚಿಕು’, ‘ರಾಂಧವ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ತಮಿಳು ಸಿನಿಮಾ ಹಾಗೂ ಒಂದು ಕನ್ನಡ ಧಾರಾವಾಹಿಯಲ್ಲಿಯೂ ಭುವನ್ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್