AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ: ಹಸೆಮಣೆ ಏರಲಿರುವ ಹರ್ಷಿಕಾ-ಭುವನ್ ಪೊನ್ನಣ್ಣ

Harshika-Bhuvan: ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಇದೇ ತಿಂಗಳು ಕೊಡಗಿನಲ್ಲಿ ವಿವಾಹವಾಗಲಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ: ಹಸೆಮಣೆ ಏರಲಿರುವ ಹರ್ಷಿಕಾ-ಭುವನ್ ಪೊನ್ನಣ್ಣ
ಹರ್ಷಿಕಾ-ಭುವನ್
ಮಂಜುನಾಥ ಸಿ.
|

Updated on: Aug 02, 2023 | 8:20 PM

Share

ಕೆಲವು ತಿಂಗಳ ಹಿಂದಷ್ಟೆ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ವಿವಾಹವಾಗಿದ್ದರು. ಅದಾದ ಬಳಿಕ ನಟ ಅಭಿಷೇಕ್ ಅಂಬರೀಶ್ ಅದ್ಧೂರಿ ವಿವಾಹ ಸದ್ದಾಯಿತು. ಈಗ ಸ್ಯಾಂಡಲ್​ವುಡ್​ನ ತಾರೆಯರು ತಾರಾ ಜೋಡಿಯಾಗಲು ಸಿದ್ಧರಾಗಿದ್ದಾರೆ. ಬಹು ಕಾಲದ ಗೆಳೆಯರಾದ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಭುವನ್ ಪೊನ್ನಣ್ಣ (Bhuvan Ponnanna) ತಮ್ಮ ಪ್ರೀತಿಗೆ ದಾಂಪತ್ಯದ ಮುದ್ರೆ ಒತ್ತಲು ತಯಾರಾಗಿದ್ದಾರೆ. ನಟಿ ಹರ್ಷಿಕಾ ತಮ್ಮ ಹಾಗೂ ಭುವನ್​ರ ಮದುವೆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ತಾಯ್ತ ಸಿನಿಮಾದ ಆಡಿಯೋ ಲಾಂಚ್​ನಲ್ಲಿ ಭಾಗವಹಿಸಿದ್ದ ನಟಿ ಹರ್ಷಿಕಾ ಪೂಣಚ್ಚ ತಾವು ಹಾಗೂ ಭುವನ್ ವಿವಾಹವಾಗಲು ನಿಶ್ಚಯಿಸಿರುವುದಾಗಿ ಹೇಳಿದ್ದಾರೆ. ಆಗಸ್ಟ್ 23 ಹಾಗೂ 24 ಕೊಡಗಿನ ಅಂಬತ್ತಿ ಕೊಡವ ಸಮಾಜದಲ್ಲಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೊಡವ ಸಂಪ್ರದಾಯದಂತೇ ಹರ್ಷಿಕಾ-ಭುವನ್ ವಿವಾಹ ನಡೆಯಲಿದೆ.

ನಟ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಕಳೆದ ಆರು ವರ್ಷಗಳಿಂದಲೂ ಪ್ರೀತಿಸುತ್ತಿದ್ದರು. ಆದರೆ ತಮ್ಮ ಪ್ರೀತಿಯನ್ನು ಗೌಪ್ಯವಾಗಿಟ್ಟಿದ್ದರು. ಕೋವಿಡ್ ಸಮಯದಲ್ಲಿ ಈ ಇಬ್ಬರೂ ಸೇರಿ ಸಮಾಜ ಮುಖಿ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದರು. ಈಗ ಆರು ವರ್ಷದ ತರುವಾಯ ಪ್ರೀತಿಯನ್ನು ವಿವಾಹಕ್ಕೆ ಬಡ್ತಿ ಮಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ವಿವಾಹದ ಕುರಿತು ಈ ಹಿಂದೆಯೇ ಸುದ್ದಿಯಾಗಿತ್ತು, ಆದರೆ ಈಗ ಖಾತ್ರಿಯಾಗಿದೆ.

ಇದನ್ನೂ ಓದಿ:Harshika Poonacha: ನೀಲಿ ಸಮುದ್ರದ ತಟದಲ್ಲಿ ಶ್ವೇತ ಸುಂದರಿ ಹರ್ಷಿಕಾ ಪೂಣಚ್ಚ

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಇಬ್ಬರೂ ಕೊಡವರಾಗಿದ್ದಾರೆ. ಹರ್ಷಿಕಾ ಪೂಣಚ್ಚ 2008 ರಲ್ಲಿ ‘ಪಿಯುಸಿ’ ಹೆಸರಿನ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟರು. ಆ ನಂತರ ಕೆಲವು ಕೊಡವ ಸಿನಿಮಾಗಳು, ಕೆಲವು ಸಿನಿಮಾಗಳಲ್ಲಿ ಪೋಷಕ ನಟಿ, ಮುಖ್ಯ ನಟಿಯಾಗಿಯೂ ನಟಿಸಿದರು. ತೆಲುಗು, ಭೋಜ್​ಪುರಿ ಸಿನಿಮಾಗಳಲ್ಲಿಯೂ ಹರ್ಷಿಕಾ ನಟಿಸಿದ್ದು, ಕೆಲವು ನೆನಪುಳಿಯುವ ಪಾತ್ರಗಳಲ್ಲಿಯೂ ಕಾಣಸಿಕೊಂಡಿದ್ದಾರೆ.

ಇನ್ನು ಭುವನ್ ಪೊನ್ನಣ್ಣ, ಸುದೀಪ್ ನಿರ್ದೇಶನದ ‘ಜಸ್ಟ್ ಮಾತ್ ಮಾತಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟರು. ಆ ಬಳಿಕ ‘ಕೂಲ್’, ‘ಮಂಜುನಾಥ ಬಿಎ, ಎಲ್​ಎಲ್​ಬಿ’, ‘ಕುಚಿಕು-ಕುಚಿಕು’, ‘ರಾಂಧವ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ತಮಿಳು ಸಿನಿಮಾ ಹಾಗೂ ಒಂದು ಕನ್ನಡ ಧಾರಾವಾಹಿಯಲ್ಲಿಯೂ ಭುವನ್ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!