AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯವಂಶ’ ಚಿತ್ರದ ನಟಿಯ 14 ವರ್ಷ ದಾಂಪತ್ಯ ಅಂತ್ಯ; ಡಿವೋರ್ಸ್​ ನೀಡಿದ ಇಶಾ ಕೊಪ್ಪಿಕರ್​

2009ರಲ್ಲಿ ಉದ್ಯಮಿ ಟಿಮ್ಮಿ ನಾರಂಗ್​ ಜೊತೆ ಇಶಾ ಕೊಪ್ಪಿಕರ್​ ಅವರ ವಿವಾಹ ನೆರವೇರಿತ್ತು. ಪರಸ್ಪರ ಪ್ರೀತಿಸಿ ಅವರು ಮದುವೆ ಆಗಿದ್ದರು. ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. 14 ವರ್ಷಗಳ ಕಾಲ ಒಟ್ಟಾಗಿ ಸಂಸಾರ ಮಾಡಿದ ಈ ಜೋಡಿಯ ಬದುಕಿನಲ್ಲಿ ಈಗ ಬಿರುಕು ಉಂಟಾಗಿದ್ದು, ವಿಚ್ಛೇದನ ಪಡೆದುಕೊಂಡಿದ್ದಾರೆ.

‘ಸೂರ್ಯವಂಶ’ ಚಿತ್ರದ ನಟಿಯ 14 ವರ್ಷ ದಾಂಪತ್ಯ ಅಂತ್ಯ; ಡಿವೋರ್ಸ್​ ನೀಡಿದ ಇಶಾ ಕೊಪ್ಪಿಕರ್​
ಇಶಾ ಕೊಪ್ಪಿಕರ್​
ಮದನ್​ ಕುಮಾರ್​
|

Updated on: Dec 28, 2023 | 5:30 PM

Share

ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿರುವ ಇಶಾ ಕೊಪ್ಪಿಕರ್​ (Isha Koppikar) ಅವರ ಖಾಸಗಿ ಬದುಕಿನ ಬಗ್ಗೆ ಒಂದು ಕಹಿ ಸುದ್ದಿ ಕೇಳಿಬಂದಿದೆ. ಪತಿ ಟಿಮ್ಮಿ ನಾರಂಗ್​ (Timmy Narang) ಜೊತೆಗಿನ 14 ವರ್ಷಗಳ ದಾಂಪತ್ಯವನ್ನು ಅವರು ಅಂತ್ಯಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಶಾ ಕೊಪ್ಪಿಕರ್ವಿಚ್ಛೇದನ (Divorce) ಪಡೆದಿದ್ದು, ಗಂಡನ ಮನೆಯಿಂದ ಹೊರಗೆ ಬಂದಿದ್ದಾರೆ ಎಂದು ಸುದ್ದಿ ಆಗಿದೆ. ಈ ವಿಷಯ ಕೇಳಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಕನ್ನಡದ ‘ಸೂರ್ಯವಂಶ’, ‘ಓ ನನ್ನ ನಲ್ಲೆ’ ಸಿನಿಮಾಗಳಲ್ಲಿ ನಟಿಸುವ ಮೂಲಕ ಸ್ಯಾಂಡಲ್​​ವುಡ್​ ಪ್ರೇಕ್ಷಕರಿಗೂ ಇಶಾ ಕೊಪ್ಪಿಕರ್​ ಪರಿಚಿತರಾಗಿದ್ದಾರೆ.

2009ರಲ್ಲಿ ಉದ್ಯಮಿ ಟಿಮ್ಮಿ ನಾರಂಗ್​ ಜೊತೆ ಇಶಾ ಕೊಪ್ಪಿಕರ್​ ಅವರ ವಿವಾಹ ನೆರವೇರಿತ್ತು. ಪರಸ್ಪರ ಪ್ರೀತಿಸಿ ಅವರು ಮದುವೆ ಆಗಿದ್ದರು. ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. 14 ವರ್ಷಗಳ ಕಾಲ ಒಟ್ಟಾಗಿ ಸಂಸಾರ ಮಾಡಿದ ಈ ಜೋಡಿಯ ಬದುಕಿನಲ್ಲಿ ಈಗ ಬಿರುಕು ಉಂಟಾಗಿದೆ. ಇಬ್ಬರೂ ವಿಚ್ಛೇದನ ಪಡೆದು ದೂರ ಆಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರ ಆಗಿದೆ.

ಇದನ್ನೂ ಓದಿ: ವಿಚ್ಛೇದನಕ್ಕೆ ನಿರ್ಧಾರ: ನ್ಯಾಯಾಲಯದಲ್ಲಿ 12 ಲಕ್ಷ ರೂ. ಜೀವನಾಂಶಕ್ಕೆ ಒಪ್ಪದವಳು 11 ಸಾವಿರಕ್ಕೆ ಒಪ್ಪಿದ್ಹೇಗೆ?

ವಿಚ್ಛೇದನದ ಸುದ್ದಿ ಬಗ್ಗೆ ಇಶಾ ಕೊಪ್ಪಿಕರ್​ ಅವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಹೊಂದಾಣಿಕೆ ಸಮಸ್ಯೆಯಿಂದಾಗಿ ಈ ದಂಪತಿ ಬೇರೆ ಆಗಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಕೂಡ ಸಾಮರಸ್ಯ ಮೂಡದ ಕಾರಣ ಅವರು ಡಿಪೋರ್ಸ್​ ಪಡೆದುಕೊಂಡಿದ್ದಾರೆ. 9 ವರ್ಷ ವಯಸ್ಸಿನ ಮಗಳ ಜೊತೆಯಲ್ಲಿ ಇಶಾ ಕೊಪ್ಪಿಕರ್​ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ವಿಚ್ಛೇದನ: ಸಣ್ಣ ಪುಟ್ಟ ವಿವಾದಗಳು, ಕೆಲವು ಘಟನೆಗಳನ್ನು ಕ್ರೌರ್ಯ ಎನ್ನಲಾಗದು: ಅಲಹಾಬಾದ್ ಹೈಕೋರ್ಟ್​

ಇಶಾ ಕೊಪ್ಪಿಕರ್​ ಅವರು 1997ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮರಾಠಿ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲೊಂದು ಇಲ್ಲೊಂದು ಪ್ರಾಜೆಕ್ಟ್​ ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ರಾಜಕೀಯದಲ್ಲಿ ಅವರಿಗೆ ಆಸಕ್ತಿ ಮೂಡಿದೆ. 2019ರಲ್ಲಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!