AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿ ತಂಜಾವೂರಿನ ಸರ್ಕಾರಿ ಆಸ್ಪತ್ರೆಗೆ ದೇಣಿಗೆ ನೀಡಿದ್ದು ಯಾಕೆ ಗೊತ್ತಾ?

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಕಾಲಿವುಡ್‌ ಸೂಪರ್‌ ಸ್ಟಾರ್‌ ಸೂರ್ಯ ಪತ್ನಿ ಜ್ಯೋತಿಕಾ ತಂಜಾವೂರು ಸರ್ಕಾರಿ ಆಸ್ಪತ್ರೆಗೆ ಆರ್ಥಿಕವಾಗಿ ಸಹಾಯ ಹಸ್ತ ಚಾಚಿದ್ದಾರೆ. ಜ್ಯೋತಿಕಾ ಕೆಲ ದಿನಗಳ ಹಿಂದೆ ಸಿನಿಮಾವೊಂದರ ಚಿತ್ರೀಕರಣಕ್ಕೆಂದು ತಮಿಳುನಾಡಿನ ತಂಜಾವೂರು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಆಗ ಅಲ್ಲಿನ ಪರಿಸ್ಥಿತಿ ಕಂಡು ದಂಗಾಗಿದ್ದ ಜ್ಯೋತಿಕಾ, ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಆಡಳಿತದ ವಿರುದ್ದ ಹರಿಹಾಯ್ದಿದ್ದರು. ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ಸ್ವಚ್ಛತೆ ಇಲ್ಲ, ಮಕ್ಕಳ ವಾರ್ಡ್‌ ಅಂತೂ ಗಬ್ಬು ನಾರುತ್ತಿದೆ ಎಂದು […]

ಖ್ಯಾತ ನಟಿ ತಂಜಾವೂರಿನ ಸರ್ಕಾರಿ ಆಸ್ಪತ್ರೆಗೆ ದೇಣಿಗೆ ನೀಡಿದ್ದು ಯಾಕೆ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on: Aug 08, 2020 | 5:23 PM

Share

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಕಾಲಿವುಡ್‌ ಸೂಪರ್‌ ಸ್ಟಾರ್‌ ಸೂರ್ಯ ಪತ್ನಿ ಜ್ಯೋತಿಕಾ ತಂಜಾವೂರು ಸರ್ಕಾರಿ ಆಸ್ಪತ್ರೆಗೆ ಆರ್ಥಿಕವಾಗಿ ಸಹಾಯ ಹಸ್ತ ಚಾಚಿದ್ದಾರೆ.

ಜ್ಯೋತಿಕಾ ಕೆಲ ದಿನಗಳ ಹಿಂದೆ ಸಿನಿಮಾವೊಂದರ ಚಿತ್ರೀಕರಣಕ್ಕೆಂದು ತಮಿಳುನಾಡಿನ ತಂಜಾವೂರು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಆಗ ಅಲ್ಲಿನ ಪರಿಸ್ಥಿತಿ ಕಂಡು ದಂಗಾಗಿದ್ದ ಜ್ಯೋತಿಕಾ, ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಆಡಳಿತದ ವಿರುದ್ದ ಹರಿಹಾಯ್ದಿದ್ದರು. ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ಸ್ವಚ್ಛತೆ ಇಲ್ಲ, ಮಕ್ಕಳ ವಾರ್ಡ್‌ ಅಂತೂ ಗಬ್ಬು ನಾರುತ್ತಿದೆ ಎಂದು ಟೀಕಿಸಿದ್ದರು.

ಜ್ಯೋತಿಕಾ ಟೀಕೆಗೆ ಪ್ರತಿಯಾಗಿ ಕೆಲ ಸ್ಥಳೀಯರು ಟೀಕೆ ಮಾಡೋದು ಸುಲಭ, ಆಸ್ಪತ್ರೆ ನಡೆಸೋದು ಕಷ್ಟ ಅಂತಾ ಪ್ರತಿಟೀಕೆ ಮಾಡಿದ್ದರು. ಇದನ್ನೇ ಸವಾಲಾಗಿ ತೆಗೆದುಕೊಂಡ ನಟಿ, ತಂಜಾವೂರಿನ ಸರ್ಕಾರಿ ಆಸ್ಪತ್ರೆಯ ನೆರವಿಗೆ ಧಾವಿಸಿದ್ದಾರೆ. ಆಸ್ಪತ್ರೆಗೆ ತಮ್ಮ ಖಾತೆಯಿಂದ 25 ಲಕ್ಷ ರೂ. ದೇಣಿಗೆಯಾಗಿ ನೀಡಿದ್ದಾರೆ.

ಇಷ್ಟೇ ಅಲ್ಲ ಕೆಲ ಅವಶ್ಯ ವೈದ್ಯಕೀಯ ಉಪಕರಣಗಳು ಸೇರಿದಂತೆ ಆಸ್ಪತ್ರೆಯ ದುರಸ್ತಿ, ಆಧುನಿಕರಣ ಮತ್ತು ಅಲ್ಲಿನ ಮಕ್ಕಳ ವಾರ್ಡ್‌ ಅನ್ನು ಕೂಡಾ ದುರಸ್ತಿ ಮಾಡಿ ಬಣ್ಣ ಬಳಿಸುತ್ತಿದ್ದಾರೆ. ತಮಿಳು, ತೆಲುಗು, ಕನ್ನಡ, ಮಲಯಾಳಮ್‌ ಹಾಗೂ ಹಿಂದಿ ಸೇರಿದಂತೆ ಭಾರತೀಯ ಹಲವಾರು ಬಾಷೆಗಳಲ್ಲಿ ನಟಿಸಿರುವ ಜ್ಯೋತಿಕಾ, ಸಮಾಜಕ್ಕೆ ತನ್ನಿಂದಾದಷ್ಟು ಸಹಾಯದ ಹಸ್ತ ಚಾಚುತ್ತಿರೋದು ಶ್ಲಾಘನೀಯ.

Follow Us
ಮಂಕಾಳು ವೈದ್ಯ ಬದಲು ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಸ್ಥಾನ
ಮಂಕಾಳು ವೈದ್ಯ ಬದಲು ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಸ್ಥಾನ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ