ಕಲ್ಪನಾ ಮೃತಪಟ್ಟಿದ್ದ ಐಬಿಯಲ್ಲಿ ರಾತ್ರಿ ಭಯನಾಕ ಅನುಭವ; ಕಿಲಕಿಲ ನಗುವಿಗೆ ಬೆಚ್ಚಿಬಿದ್ದ ಮುಖ್ಯಮಂತ್ರಿ ಚಂದ್ರು

ಮಿನುಗುತಾರೆ ಕಲ್ಪನಾ ಅವರ ಅಭಿಮಾನಿ ಆಗಿದ್ದರು ಮುಖ್ಯಮಂತ್ರಿ ಚಂದ್ರು. ಆದರೆ, ಅವರ ಜೊತೆ ಸಿನಿಮಾ ಮಾಡೋಕೆ ಸಾಧ್ಯವಾಗಿರಲಿಲ್ಲ. ಆದಾಗ್ಯೂ ಮಿನುಗುತಾರೆ ಕಲ್ಪನಾ ಅವರನ್ನು ಕಾಡಿದ್ದರು. ಈ ರೀತಿಯ ಅನುಭವದ ಬಗ್ಗೆ ಅವರು ಈಗ ಹೇಳಿಕೊಂಡಿದ್ದಾರೆ.

ಕಲ್ಪನಾ ಮೃತಪಟ್ಟಿದ್ದ ಐಬಿಯಲ್ಲಿ ರಾತ್ರಿ ಭಯನಾಕ ಅನುಭವ; ಕಿಲಕಿಲ ನಗುವಿಗೆ ಬೆಚ್ಚಿಬಿದ್ದ ಮುಖ್ಯಮಂತ್ರಿ ಚಂದ್ರು
ಕಲ್ಪನಾ ಮೃತಪಟ್ಟಿದ್ದ ಐಬಿಯಲ್ಲಿ ರಾತ್ರಿ ಭಯನಾಕ ಅನುಭವ; ಕಿಲಕಿಲ ಧ್ವನಿಗೆ ಬೆಚ್ಚಿಬಿದ್ದ ಮುಖ್ಯಮಂತ್ರಿ ಚಂದ್ರು
Follow us
|

Updated on:Sep 14, 2024 | 11:55 AM

ನಟಿ ಮಿನುಗುತಾರೆ ಕಲ್ಪನಾ ಅವರು ಗೋಟೂರ್ ಬಂಗಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಳಗಾವಿಯ ಗೋಟೂರ್ ಪ್ರವಾಸ ಮಂದಿರದಲ್ಲಿ ಅವರು ಮೃತಪಟ್ಟಿದ್ದರು. ಆಗ ಅವರಿಗೆ ಕೇವಲ 36 ವರ್ಷ ವಯಸ್ಸು. ಹಾಗಾದರೆ ಕಲ್ಪನಾ ಅವರು ಮೃತಪಟ್ಟ ಬಂಗಲೆಯಲ್ಲಿ ಭೂತದ ಕಾಟ ಇತ್ತೇ? ಈ ರೀತಿಯ ಅನುಭವದ ಬಗ್ಗೆ ಮುಖ್ಯಮಂತ್ರಿ ಚಂದ್ರು ಮಾತನಾಡಿದ್ದಾರೆ. ‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್​ಗೆ ನೀಡಿದ್ದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಮಿನುಗುತಾರೆ ಕಲ್ಪನಾ ಅವರ ಅಭಿಮಾನಿ ಆಗಿದ್ದರು ಮುಖ್ಯಮಂತ್ರಿ ಚಂದ್ರು. ಆದರೆ, ಅವರ ಜೊತೆ ಸಿನಿಮಾ ಮಾಡೋಕೆ ಸಾಧ್ಯವಾಗಿರಲಿಲ್ಲ. ‘ಜನತಾ ಪಾರ್ಟಿಯಲ್ಲಿ ನಾನಿದ್ದೆ. ನಾನು ನಾಗಾರಾಜ್​ಮೂರ್ತಿ ಜೊತೆ ಕಾರು ತೆಗೆದುಕೊಂಡು ಬೆಳಗಾವಿಗೆ ಹೋಗಿದ್ದೆವು. ಬರುವಾಗ ಈ ಐಬಿ ತಲುಪಿದೆವು. ರಾತ್ರಿ 11.30 ಆಗಿತ್ತು. ಅಲ್ಲಿ ಹೆಚ್ಚು ಜನ ಬರುತ್ತಿರಲಿಲ್ಲ’ ಎಂದು ಕಥೆ ಆರಂಭಿಸಿದ್ದರು ಮುಖ್ಯಮಂತ್ರಿ ಚಂದ್ರು.

‘ಅಲ್ಲಿ ದೂರದಲ್ಲಿ ಓರ್ವ ಬೀಡಿ ಸೇದುತ್ತಾ ಇದ್ದ. ನಾಗರಾಜ್ ಮೂರ್ತಿ ಅವರನ್ನು ಕರೆದ. ಅವನು ಬಂದು ನಮಸ್ಕಾರ ಮಾಡಿದ. ಬೀಗ ತೆಗಿ ಎಂದು ನಾಗಾರಾಜ ಮೂರ್ತಿ ಹೇಳಿದರು. ಅವನು ಒಂದಲ್ಲಾ ಒಂದು ಕಾರಣ ಕೊಡುತ್ತಾ ಇದ್ದಾ. 30 ಕಿ.ಮೀ ದೂರದಲ್ಲಿ ಬೇರೊಂದು ಐಬಿ ಅಲ್ಲಿಗೆ ಹೋಗಿ ಎಂದ. ಆದರೂ ಕೇಳದೆ ನಾವು ಹೋಗಿ ಅದೇ ಐಬಿಯಲ್ಲಿ ಮಲಗಿದೆವು’ ಎಂದಿದ್ದಾರೆ ಅವರು.

‘ಮಲಗಿ 20 ನಿಮಿಷ ಆಗಿರಬಹುದು. ಕಿಲ ಕಿಲ ನಗು. ನನ್ನ ಸುತ್ತವೇ ಯಾರೋ ನಕ್ಕಂತೆ ಆಗುತ್ತಿದೆ. ಕೆಟ್ಟ ನಗು ಅದು. ನಾನು ಎದ್ದೆ. ನಾಗಾರಾಜ ಮೂರ್ತಿ ಎದ್ದುಕೋ ಎಂದೆ. ಇಲ್ಲಿ ಬೇಡ ಎಂದೆ. ಆದರೆ ನಾಗರಾಜಮೂರ್ತಿ ಒಪ್ಪಿಲ್ಲ. 10 ನಿಮಿಷ ಬಿಟ್ಟು ನಾಗಾರಾಜ ಮೂರ್ತಿಗೆ ಗೆಜ್ಜೆ ಶಬ್ದ ಕೇಳಿತು. ಇಬ್ಬರಿಗೂ ಭಯ ಆಯಿತು. ನಂತರ ಅಲ್ಲಿಂದ ಓಡಿದೆವು’ ಎಂದಿದ್ದಾರೆ ಮುಖ್ಯಮಂತ್ರಿ ಚಂದ್ರು.

ಇದನ್ನೂ ಓದಿ: ‘ಕಲ್ಪನಾ ಮತ್ತು ಮಂಜುಳಾಗೆ ಇಂಥ ಸಾವು ಬೇಕಿತ್ತಾ?’; ಮಿಂಚಿ ಮರೆಯಾದ ನಟಿಯರ ಬಗ್ಗೆ ರಾಜೇಶ್​ ವಿಷಾದದ ಮಾತು

‘ಅವರು ಸತ್ತಾಗಿನಿಂದ ಇಲ್ಲಿ ಸಮಸ್ಯೆ ಆಗ್ತಿದೆ. ಹೇಗೆ ಹೇಳಬೇಕು ಅನ್ನೋದು ಗೊತ್ತಾಗಿಲ್ಲ. ದಯವಿಟ್ಟು ಇಲ್ಲಿಂದ ಹೊರಟುಬಿಡಿ. ನಾನು ಹೋಗ್ತೀನಿ’ ಎಂದು ಅಲ್ಲಿ ಕೆಲಸಕ್ಕೆ ಇದ್ದ ವ್ಯಕ್ತಿ ಹೇಳಿದ್ದರು. ‘ಅದು ಭ್ರಮೆಯಲ್ಲಿ ಆಯ್ತೋ, ನಿಜವಾಗಿ ಆಯ್ತೋ ಗೊತ್ತಿಲ್ಲ. ನಮಗೆ ಆ ಅನುಭವ ಆಗಿದ್ದಂತೂ ಹೌದು’ ಎಂದಿದ್ದಾರೆ ಚಂದ್ರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Sat, 14 September 24

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ