ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ನಿಧನ; ಅಂತಿಮ ದರ್ಶನ ಪಡೆದ ವಿನೋದ್ ರಾಜ್

ಕ್ಯಾನ್ಸರ್​ಗೆ ಒಳಗಾಗಿದ್ದ ಬಂಗಾರಮ್ಮ ಅವರನ್ನು ವಿನೋದ್ ರಾಜ್ ಅವರು ನೋಡಿಕೊಳ್ಳುತ್ತಿದ್ದರು. ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ, ಆರೈಕೆ ಮಾಡುತ್ತಿದ್ದರು. ಮೈಲನಹಳ್ಳಿ ತೋಟದಲ್ಲಿ ಸುಮಾರು 25 ವರ್ಷಗಳಿಂದ ಲೀಲಾವತಿ ಅವರ ಜೊತೆಗಿದ್ದ ಬಂಗಾರಮ್ಮ ಅವರು ಈಗ ಕೊನೆಯುಸಿರು ಎಳೆದಿದ್ದಾರೆ.

ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ನಿಧನ; ಅಂತಿಮ ದರ್ಶನ ಪಡೆದ ವಿನೋದ್ ರಾಜ್
ವಿನೋದ್​ ರಾಜ್​, ಲೀಲಾವತಿ, ಬಂಗಾರಮ್ಮ
Follow us
| Updated By: ಮದನ್​ ಕುಮಾರ್​

Updated on:Dec 13, 2023 | 3:22 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ (Leelavathi) ಅವರ ನಿಧನದ ನೋವು ಹಸಿಯಾಗಿರುವಾಗಲೇ ಮತ್ತೊಂದು ಕಹಿ ಸುದ್ದಿ ಕೇಳಿಬಂದಿದೆ. ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ಕೂಡ ಈಗ ಇಹಲೋಕ ತ್ಯಜಿಸಿದ್ದಾರೆ. ಇದು ವಿನೋದ್​ ರಾಜ್​ (Vinod Raj) ಅವರ ಕುಟುಂಬಕ್ಕೆ ಇನ್ನಷ್ಟು ನೋವು ಉಂಟುಮಾಡಿದೆ. ಮೃತ ಮಹಿಳೆಯ ಹೆಸರು ಬಂಗಾರಮ್ಮ (Bangaramma). ಚಿಕ್ಕ ವಯಸ್ಸಿನಿಂದಲೂ ಅವರು ಲೀಲಾವತಿ ಜೊತೆ ಇದ್ದರು. ಈಗ ಅವರು ಕೊನೆಯುಸಿರು ಎಳೆದಿದ್ದಾರೆ.

ಬಂಗಾರಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು. ಲೀಲಾವತಿ ಅವರು ಚೆನೈನಲ್ಲಿ ವಾಸವಾಗಿದ್ದಾಗಿನಿಂದಲೂ ಅವರ ಜೊತೆ ಬಂಗಾರಮ್ಮ ಇದ್ದರು. ಲೀಲಾವತಿ ಎಲ್ಲಿಗೇ ಹೋದರೂ ಕೂಡ ಅವರ ಜೊತೆ ಬಂಗಾರಮ್ಮ ಇರುತ್ತಿದ್ದರು. ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಬಂಗಾರಮ್ಮ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎಂಬ ಮಾಹಿತಿ ಇದೆ.

ಇದನ್ನೂ ಓದಿ: ಹಾಲು-ತುಪ್ಪ ಕಾರ್ಯ ನೆರವೇರಿಸಿದ ಲೀಲಾವತಿ ಕುಟುಂಬ

ಕ್ಯಾನ್ಸರ್​ಗೆ ಒಳಗಾಗಿದ್ದ ಬಂಗಾರಮ್ಮ ಅವರನ್ನು ವಿನೋದ್ ರಾಜ್ ಅವರು ನೋಡಿಕೊಳ್ಳುತ್ತಿದ್ದರು. ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ, ಆರೈಕೆ ಮಾಡುತ್ತಿದ್ದರು. ಮೈಲನಹಳ್ಳಿ ತೋಟದಲ್ಲಿ ಸುಮಾರು 25 ವರ್ಷಗಳಿಂದ ಲೀಲಾವತಿ ಅವರ ಜೊತೆಗಿದ್ದ ಬಂಗಾರಮ್ಮ ಅವರು ಮಂಗಳವಾರ (ಡಿಸೆಂಬರ್​ 12) ರಾತ್ರಿ ನಾಗರಭಾವಿ ಸಮೀಪ ಇರುವ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಸೋಲದೇವನಹಳ್ಳಿ ತೋಟದಲ್ಲಿ ವಿನೋದ್ ರಾಜ್ ಅಂತಿಮ ದರ್ಶನ ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Wed, 13 December 23

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ