AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ನಿಧನ; ಅಂತಿಮ ದರ್ಶನ ಪಡೆದ ವಿನೋದ್ ರಾಜ್

ಕ್ಯಾನ್ಸರ್​ಗೆ ಒಳಗಾಗಿದ್ದ ಬಂಗಾರಮ್ಮ ಅವರನ್ನು ವಿನೋದ್ ರಾಜ್ ಅವರು ನೋಡಿಕೊಳ್ಳುತ್ತಿದ್ದರು. ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ, ಆರೈಕೆ ಮಾಡುತ್ತಿದ್ದರು. ಮೈಲನಹಳ್ಳಿ ತೋಟದಲ್ಲಿ ಸುಮಾರು 25 ವರ್ಷಗಳಿಂದ ಲೀಲಾವತಿ ಅವರ ಜೊತೆಗಿದ್ದ ಬಂಗಾರಮ್ಮ ಅವರು ಈಗ ಕೊನೆಯುಸಿರು ಎಳೆದಿದ್ದಾರೆ.

ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ನಿಧನ; ಅಂತಿಮ ದರ್ಶನ ಪಡೆದ ವಿನೋದ್ ರಾಜ್
ವಿನೋದ್​ ರಾಜ್​, ಲೀಲಾವತಿ, ಬಂಗಾರಮ್ಮ
Follow us
Mangala RR
| Updated By: ಮದನ್​ ಕುಮಾರ್​

Updated on:Dec 13, 2023 | 3:22 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ (Leelavathi) ಅವರ ನಿಧನದ ನೋವು ಹಸಿಯಾಗಿರುವಾಗಲೇ ಮತ್ತೊಂದು ಕಹಿ ಸುದ್ದಿ ಕೇಳಿಬಂದಿದೆ. ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ಕೂಡ ಈಗ ಇಹಲೋಕ ತ್ಯಜಿಸಿದ್ದಾರೆ. ಇದು ವಿನೋದ್​ ರಾಜ್​ (Vinod Raj) ಅವರ ಕುಟುಂಬಕ್ಕೆ ಇನ್ನಷ್ಟು ನೋವು ಉಂಟುಮಾಡಿದೆ. ಮೃತ ಮಹಿಳೆಯ ಹೆಸರು ಬಂಗಾರಮ್ಮ (Bangaramma). ಚಿಕ್ಕ ವಯಸ್ಸಿನಿಂದಲೂ ಅವರು ಲೀಲಾವತಿ ಜೊತೆ ಇದ್ದರು. ಈಗ ಅವರು ಕೊನೆಯುಸಿರು ಎಳೆದಿದ್ದಾರೆ.

ಬಂಗಾರಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು. ಲೀಲಾವತಿ ಅವರು ಚೆನೈನಲ್ಲಿ ವಾಸವಾಗಿದ್ದಾಗಿನಿಂದಲೂ ಅವರ ಜೊತೆ ಬಂಗಾರಮ್ಮ ಇದ್ದರು. ಲೀಲಾವತಿ ಎಲ್ಲಿಗೇ ಹೋದರೂ ಕೂಡ ಅವರ ಜೊತೆ ಬಂಗಾರಮ್ಮ ಇರುತ್ತಿದ್ದರು. ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಬಂಗಾರಮ್ಮ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎಂಬ ಮಾಹಿತಿ ಇದೆ.

ಇದನ್ನೂ ಓದಿ: ಹಾಲು-ತುಪ್ಪ ಕಾರ್ಯ ನೆರವೇರಿಸಿದ ಲೀಲಾವತಿ ಕುಟುಂಬ

ಕ್ಯಾನ್ಸರ್​ಗೆ ಒಳಗಾಗಿದ್ದ ಬಂಗಾರಮ್ಮ ಅವರನ್ನು ವಿನೋದ್ ರಾಜ್ ಅವರು ನೋಡಿಕೊಳ್ಳುತ್ತಿದ್ದರು. ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ, ಆರೈಕೆ ಮಾಡುತ್ತಿದ್ದರು. ಮೈಲನಹಳ್ಳಿ ತೋಟದಲ್ಲಿ ಸುಮಾರು 25 ವರ್ಷಗಳಿಂದ ಲೀಲಾವತಿ ಅವರ ಜೊತೆಗಿದ್ದ ಬಂಗಾರಮ್ಮ ಅವರು ಮಂಗಳವಾರ (ಡಿಸೆಂಬರ್​ 12) ರಾತ್ರಿ ನಾಗರಭಾವಿ ಸಮೀಪ ಇರುವ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಸೋಲದೇವನಹಳ್ಳಿ ತೋಟದಲ್ಲಿ ವಿನೋದ್ ರಾಜ್ ಅಂತಿಮ ದರ್ಶನ ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Wed, 13 December 23

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!