AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಕ್‍ ಬೆಂಚರ್ಸ್’ ಸುಂದರಿ ಮಾನ್ಯ ಗೌಡ; ಇಂಜಿನಿಯರಿಂಗ್‍ ಮುಗಿಸಿ ನಟಿಯಾದ ಬೆಡಗಿ

‘ಬ್ಯಾಕ್‍ ಬೆಂಚರ್ಸ್’ ಮಾತ್ರವಲ್ಲದೇ ‘ಮಾನ್ಸೂನ್ ರಾಗ’, ‘ವೀರಂ’ ಸಿನಿಮಾದಲ್ಲಿ ಮಾನ್ಯ ನಟಿಸಿ ಅನುಭವ ಪಡೆದಿದ್ದಾರೆ. ಅಲ್ಲದೇ ತೆಲುಗಿನ ‘ಮಿಸಸ್ ಕರ್ನಲ್‍’ ಸಿನಿಮಾದಲ್ಲೂ ಅವರು ಅಭಿನಯಿಸಿದ್ದಾರೆ. ಈಗ ಅವರಿಗೆ ಅನೇಕ ಅವಕಾಶಗಳು ಸಿಗುತ್ತಿದೆ. ‘ಬ್ಯಾಕ್​ ಬೆಂಚರ್ಸ್​’ ಸಿನಿಮಾಗೆ ಸಿಗುವ ಪ್ರತಿಕ್ರಿಯೆ ನೋಡಿಕೊಂಡು ಹೊಸ ಅಫರ್​ಗಳನ್ನು ಒಪ್ಪಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

‘ಬ್ಯಾಕ್‍ ಬೆಂಚರ್ಸ್’ ಸುಂದರಿ ಮಾನ್ಯ ಗೌಡ; ಇಂಜಿನಿಯರಿಂಗ್‍ ಮುಗಿಸಿ ನಟಿಯಾದ ಬೆಡಗಿ
ಮಾನ್ಯ ಗೌಡ
ಮದನ್​ ಕುಮಾರ್​
|

Updated on: Jul 18, 2024 | 6:52 PM

Share

ಯುವ ಪ್ರತಿಭೆಗಳಿಂದ ತುಂಬಿರುವ ‘ಬ್ಯಾಕ್‍ ಬೆಂಚರ್ಸ್’ ಸಿನಿಮಾ ಈ ಶುಕ್ರವಾರ (ಜುಲೈ 19) ರಿಲೀಸ್​ ಆಗುತ್ತಿದೆ. ರಾಜ್ಯಾದ್ಯಂತ ತೆರೆ ಕಾಣುತ್ತಿರುವ ಈ ಸಿನಿಮಾವನ್ನು ರಾಜಶೇಖರ್ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. ‘ಬ್ಯಾಕ್‍ ಬೆಂಚರ್ಸ್’ ಸಿನಿಮಾ ಮೂಲಕ ರಂಜನ್, ಜತಿನ್ ಆರ್ಯನ್, ಶಶಾಂಕ್ ಸಿಂಹ, ಆಕಾಶ್ ಎಂ.ಪಿ, ಕುಂಕುಮ್‍, ವಿಯೋಮಿ ವನಿತಾ, ಅನುಷಾ ಸುರೇಶ್ ಮುಂತಾದವರು ನಟಿಸಿದ್ದಾರೆ. ಇವರೆಲ್ಲರೂ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹೊಸ ನಟಿ ಮಾನ್ಯ ಗೌಡ ಸಹ ಕೂಡ ‘ಬ್ಯಾಕ್​ ಬೆಂಚರ್ಸ್​’ ಸಿನಿಮಾದಲ್ಲಿ ಮಿಂಚಲಿದ್ದಾರೆ. ಇಂಜಿನಿಯರಿಂಗ್‍ ಮುಗಿಸಿ ಬಂದಿರುವ ಮಾನ್ಯ ಗೌಡ ಅವರು ಈ ಚಿತ್ರದ ನಾಯಕಿಯರಲ್ಲಿ ಒಬ್ಬರಾಗಿ ನಟಿಸಿದ್ದಾರೆ.

‘ಬ್ಯಾಕ್​ ಬೆಂಚರ್ಸ್​’ ಸಿನಿಮಾದಲ್ಲಿ ಮಾನ್ಯ ಗೌಡ ಅವರು ಮಾಯಾ ಎಂಬ ಪಾತ್ರವನ್ನು ಮಾಡಿದ್ದಾರೆ. ಈ ಸಿನಿಮಾ ಮೇಲೆ ಅವರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಡಿಷನ್​ ನೀಡುವ ಮೂಲಕ ಅವರು ಈ ಚಿತ್ರಕ್ಕೆ ಆಯ್ಕೆ ಆದರು. ಆ ಅನುಭವದ ಬಗ್ಗೆ ಅವರು ಮಾತನಾಡಿದ್ದಾರೆ. ‘3 ವರ್ಷಗಳ ಹಿಂದೆ ನಾನು ಇಂಜಿನಿಯರಿಂಗ್‍ ಮುಗಿಸಿದೆ. ಬಾಲ್ಯದಿಂದಲೂ ಅಭಿನಯದ ಬಗ್ಗೆ ನನಗೆ ಆಸಕ್ತಿ. ಶಾಸ್ತ್ರೀಯ ನೃತ್ಯವನ್ನೂ ಕಲಿತಿದ್ದೇನೆ. ಅಲ್ಲದೇ ರಂಗಭೂಮಿಯಲ್ಲೂ ಸಕ್ರಿಯವಾಗಿದ್ದೆ. ಹೀಗಿರುವಾಗಲೇ ಬ್ಯಾಕ್‍ ಬೆಂಚರ್ಸ್ ಸಿನಿಮಾಗೆ ಆಡಿಷನ್‍ ನಡೆಯುವ ವಿಷಯ ತಿಳಿಯಿತು. ಅದರಲ್ಲಿ ಪಾಲ್ಗೊಂಡೆ’ ಎಂದು ಮಾನ್ಯ ಗೌಡ ಹೇಳಿದ್ದಾರೆ.

‘ಈ ಆಡಿಷನ್​ನಲ್ಲಿ ಅಂದಾಜು 700 ಯುವಕ-ಯುವತಿಯರು ಪಾಲ್ಗೊಂಡಿದ್ದರು. ಡೈರೆಕ್ಟರ್​ ಕೊಟ್ಟ ಕೆಲವು ದೃಶ್ಯಗಳನ್ನು ನಾನು ನನ್ನದೇ ರೀತಿಯಲ್ಲಿ ನಟಿಸಿ ತೋರಿಸಿದೆ. ಅಷ್ಟು ಜನರ ನಡುವೆ ನಾನು ಆಯ್ಕೆ ಆಗುತ್ತೀನೋ ಅಥವಾ ಇಲ್ಲವೋ ಎಂಬ ಅನುಮಾನ ನನಗಿತ್ತು. ಕೊನೆಗೂ, ಚಿತ್ರತಂಡಕ್ಕೆ ಸೆಲೆಕ್ಟ್​ ಆದ 30 ಜನರಲ್ಲಿ ನಾನೂ ಒಬ್ಬಳಾಗಿದ್ದೆ’ ಎಂದಿದ್ದಾರೆ ಮಾನ್ಯ. ಆಡಿಷನ್‍ನಲ್ಲಿ ಆಯ್ಕೆ ಆದ ಬಳಿ ಸುಚೇಂದ್ರ ಪ್ರಸಾದ್‍ ಅವರು ಈ ಕಲಾವಿದರಿಗೆ ಒಂದು ಕಾರ್ಯಾಗಾರ ಮಾಡಿದ್ದಾರೆ. ಅದರಲ್ಲಿ ಅನೇಕ ವಿಷಯಗಳ ಬಗ್ಗೆ ತರಬೇತಿ ನೀಡಿದ್ದಾರೆ. ಬಳಿಕ, 6 ತಿಂಗಳ ಕಾಲ ರಿಹರ್ಸಲ್‍ ನಡೆಸಿದ ಬಳಿಕವೇ ಚಿತ್ರತಂಡ ಶೂಟಿಂಗ್ ಮಾಡಿದೆ. ಇದರಿಂದ ಮಾನ್ಯ ಅವರಿಗೆ ಅನುಕೂಲ ಆಗಿದೆ.

ಇದನ್ನೂ ಓದಿ: ರೌಡಿಸಂ ಕಥೆಗೆ ಹೊಸ ಬಣ್ಣ ನೀಡಿದ ‘ಕೆಂಡ’ ಸಿನಿಮಾ; ಟ್ರೇಲರ್​ನಲ್ಲಿದೆ ಝಲಕ್​

ಶೂಟಿಂಗ್​ ಅನುಭವ ಮತ್ತು ಪಾತ್ರದ ಬಗ್ಗೆಯೂ ಮಾನ್ಯ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ‘ನಾನು ಹೊಸಬಳಾದ ಕಾರಣ ಸಹಜವಾಗಿಯೇ ನರ್ವಸ್‍ ಆಗಿದ್ದೆ. ಆದರೆ, ನಮ್ಮ ಸಿನಿಮಾದ ಡೈರೆಕ್ಟರ್​ ರಾಜಶೇಖರ್ ಹಾಗೂ ಛಾಯಾಗ್ರಾಹಕ ಮನೋಹರ್ ಜೋಷಿ ಅವರು ನಮ್ಮೆಲ್ಲರಿಗೂ ಚೆನ್ನಾಗಿ ಗೈಡ್‍ ಮಾಡಿದರು. ಚೆನ್ನಾಗಿ ಹೇಳಿಕೊಟ್ಟಿರುವುದು ಮಾತ್ರವಲ್ಲದೇ ನನ್ನನ್ನು ತುಂಬ ಚೆನ್ನಾಗಿ ತೆರೆಮೇಲೆ ತೋರಿಸಿದ್ದಾರೆ. ನಟನೆ ಜೊತೆಗೆ ಪೋಸ್ಟ್ ಪ್ರೊಡಕ್ಷನ್‍ ಹಾಗೂ ಮಾರ್ಕೆಟಿಂಗ್‍ ವಿಭಾಗಗಳಲ್ಲೂ ನಾನು ತೊಡಗಿಸಿಕೊಂಡಿದ್ದೇನೆ. ಇದರಿಂದ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಯಿತು’ ಎಂದು ಮಾನ್ಯ ಹೇಳಿದ್ದಾರೆ.

‘ಈ ಸಿನಿಮಾದಲ್ಲಿ 4 ಪ್ರಮುಖ ನಾಯಕಿಯರ ಪಾತ್ರಗಳಿವೆ. ರಿಹರ್ಸಲ್‍ ವೇಳೆ ಈ ನಾಲ್ಕೂ ಪಾತ್ರಗಳನ್ನು ನಾನು ಮಾಡಿದ್ದೆ. ಅದರಲ್ಲಿ ನನಗೆ ಮಾಯಾ ಎಂಬ ಪಾತ್ರ ಬಹಳ ಇಷ್ಟವಾಯ್ತು. ಅದು ನನಗೆ ಸೂಟ್‍ ಆಗುತ್ತದೆ, ಅದನ್ನು ನಾನು ನಿಭಾಯಿಸಬಲ್ಲೆ ಎಂಬ ನಂಬಿಕೆಯಿಂದ ಈ ಪಾತ್ರವನ್ನು ಕೊಟ್ಟಿದ್ದಾರೆ. ನಾನು ಈ ಪಾತ್ರದಲ್ಲಿ ಬಜಾರಿಯಾಗಿ ಕಾಣಿಸಿಕೊಂಡಿದ್ದೇನೆ. ತುಂಬ ಬೋಲ್ಡ್ ಆದಂತಹ ಪಾತ್ರವಿದು. ನನಗೆ ಇಷ್ಟವಾದ ಪಾತ್ರ ಸಿಕ್ಕಿದೆ ಎಂಬ ಖುಷಿ ನನಗಿದೆ. ಜನರಿಗೂ ಇದು ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ’ ಎಂಬುದು ಮಾನ್ಯಾ ನಂಬಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ