AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾಗಾಗಿ ಬಂದ ನಯನತಾರಾ; ಬೆಂಗಳೂರಲ್ಲಿ ‘GOAT’ ನೋಡಿದ ತಮಿಳು ನಟಿ

ನಟಿ ನಯನತಾರಾ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್​ಗಾಗಿ ಬೆಂಗಳೂರಿಗೆ ಬಂದಿದ್ದಾರೆ. ಅವರು ದಳಪತಿ ವಿಜಯ್ ಫ್ಯಾನ್​. ಹೀಗಾಗಿ ಬೆಂಗಳೂರಿನಲ್ಲೇ ದಳಪತಿ ವಿಜಯ್ ನಟನೆಯ ‘ಗ್ರೇಟೆಸ್ಟ್​ ಆಫ್ ಆಲ್ ಟೈಮ್’ (GOAT) ಸಿನಿಮಾ ನೋಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

‘ಟಾಕ್ಸಿಕ್’ ಸಿನಿಮಾಗಾಗಿ ಬಂದ ನಯನತಾರಾ; ಬೆಂಗಳೂರಲ್ಲಿ ‘GOAT’ ನೋಡಿದ ತಮಿಳು ನಟಿ
Mangala RR
| Edited By: |

Updated on:Sep 06, 2024 | 1:46 PM

Share

ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿದೆ. ಯಶ್ ಅವರು ಈ ಚಿತ್ರದ ಪ್ರಮುಖ ಪಾತ್ರ ಮಾಡಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ನಯನತಾರಾ ನಟಿಸುತ್ತಿದ್ದಾರೆ ಎನ್ನುವ ವಿಚಾರ ಇತ್ತೀಚೆಗೆ ಹರಿದಾಡಿತ್ತು. ಸದ್ಯ ಅವರು ಬೆಂಗಳೂರಿನಲ್ಲಿ ಇದ್ದಾರೆ. ಅವರು ಬೆಂಗಳೂರಿನಲ್ಲೇ ದಳಪತಿ ವಿಜಯ್ ನಟನೆಯ ‘ಗ್ರೇಟೆಸ್ಟ್​ ಆಫ್ ಆಲ್ ಟೈಮ್’ (GOAT) ಸಿನಿಮಾ ನೋಡಿದ್ದಾರೆ.

ಬೆಂಗಳೂರಿನ ನೆಲಮಂಗಲದ ಸಮೀಪ ‘ಟಾಕ್ಸಿಕ್’ ಸಿನಿಮಾದ ಸೆಟ್ ಹಾಕಲಾಗಿದೆ. ಯಶ್ ಅವರಿಗೆ ಜೊತೆಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದು, ನಯನತಾರಾ ಯಶ್ ಸಹೋದರಿ ಪಾತ್ರ ಮಾಡುತ್ತಿದ್ದಾರಂತೆ. ಸದ್ಯ ನಯನತಾರಾ ಅವರು ನಾಲ್ಕು ದಿನಗಳ ಶೂಟಿಂಗ್ ಮಾಡಿದ್ದಾರೆ. ಪ್ರಮುಖ ದೃಶ್ಯಗಳ ಶೂಟ್ ಪೂರ್ಣಗೊಂಡಿದೆ ಎನ್ನಲಾಗಿದೆ.

ದಳಪತಿ ವಿಜಯ್ ನಟನೆಯ ‘GOAT’ ಸಿನಿಮಾ ಸೆಪ್ಟೆಂಬರ್ 5ರಂದು ರಿಲೀಸ್ ಆಗಿದೆ. ಈ ಸಿನಿಮಾ ಬೆಂಗಳೂರಿನ ಎಂಜಿ ರೋಡ್​ನಲ್ಲಿರೋ ಸ್ವಾಗತ್​ ಶಂಕರ್​ನಾಗ್ ಥಿಯೇಟರ್​ನಲ್ಲಿ ವೀಕ್ಷಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡಿದ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಎರಡನೇ ಹಂತದ ಚಿತ್ರೀಕರಣಕ್ಕೆ ಬೆಂಗಳೂರಿಗೆ ಮರಳಿದ ನಯನತಾರಾ 

ಕಳೆದ ವರ್ಷ ನಯನತಾರಾಗೆ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ಅವರ ನಟನೆಯ ‘ಜವಾನ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಈ ಚಿತ್ರದಿಂದ ಅವರು ಗೆದ್ದು ಬೀಗಿದ್ದಾರೆ. ಅವರು ಈ ಮೊದಲು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ಈಗ ಮತ್ತೊಮ್ಮೆ ಅವರು ಕನ್ನಡತ್ತ ಮುಖ ಮಾಡಿದ್ದಾರೆ. ಈ ಸಿನಿಮಾ 2025ರ ಏಪ್ರಿಲ್​ನಲ್ಲಿ ತೆರೆಮೇಲೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿಕ್ಲಿಕ್​ ಮಾಡಿ.

Published On - 1:18 pm, Fri, 6 September 24

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ