AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

ಹೈದರಾಬಾದ್: ಕೊರೊನಾ ವೈರಸ್‌ ಹಾವಳಿಯಿಂದಾಗಿ ಚಿತ್ರಮಂದಿರಗಳೆಲ್ಲಾ ಬಂದ್ ಆಗಿವೆ. ಸಿನಿಮಾ ಶೂಟಿಂಗ್‌ಗಳು ಕೂಡ ಸ್ಥಗಿತಗೊಂಡಿವೆ. ಟಾಲಿವುಡ್‌ ಸಿನಿಮಾ ಕಲಾವಿದರು ಈ ಬಿಡುವಿನ ಅವಧಿಯಲ್ಲಿ ಗ್ರೀನ್‌ ಚಾಲೆಂಜ್‌.. ಕೊರೊನಾ ಜಾಗೃತಿ, ಇನ್ನಿತರ ಕಾರ್ಯಗಳಲ್ಲಿ ತೊಡಗಿದ್ದಾರೆ. ಈಗ ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಅದ್ಧೂರಿ ವೇದಿಕೆ.. ಸಡಗರ.. ಸಂಭ್ರಮ.. ಜಗಮಗಿಸುವ ಬೆಳಕಿನ ಚಿತ್ತಾರ… ಎಲ್ಲರ ಮೊಗದಲ್ಲೂ ಸಂತಸ.. ಸಡಗರ.. ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್‌ ಅಲ್ಲು ಅರ್ಜುನ್‌.. ಮೆಗಾ ಸ್ಟಾರ್ ಚಿರಂಜೀವ್‌ ಪುತ್ರ ರಾಮ್‌ಚರಣ್ ದಂಪತಿ.. […]

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌
ಆಯೇಷಾ ಬಾನು
ಆಯೇಷಾ ಬಾನು|

Updated on:Aug 14, 2020 | 8:56 AM

Share

ಹೈದರಾಬಾದ್: ಕೊರೊನಾ ವೈರಸ್‌ ಹಾವಳಿಯಿಂದಾಗಿ ಚಿತ್ರಮಂದಿರಗಳೆಲ್ಲಾ ಬಂದ್ ಆಗಿವೆ. ಸಿನಿಮಾ ಶೂಟಿಂಗ್‌ಗಳು ಕೂಡ ಸ್ಥಗಿತಗೊಂಡಿವೆ. ಟಾಲಿವುಡ್‌ ಸಿನಿಮಾ ಕಲಾವಿದರು ಈ ಬಿಡುವಿನ ಅವಧಿಯಲ್ಲಿ ಗ್ರೀನ್‌ ಚಾಲೆಂಜ್‌.. ಕೊರೊನಾ ಜಾಗೃತಿ, ಇನ್ನಿತರ ಕಾರ್ಯಗಳಲ್ಲಿ ತೊಡಗಿದ್ದಾರೆ. ಈಗ ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.

ಅದ್ಧೂರಿ ವೇದಿಕೆ.. ಸಡಗರ.. ಸಂಭ್ರಮ.. ಜಗಮಗಿಸುವ ಬೆಳಕಿನ ಚಿತ್ತಾರ… ಎಲ್ಲರ ಮೊಗದಲ್ಲೂ ಸಂತಸ.. ಸಡಗರ..

ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್‌ ಅಲ್ಲು ಅರ್ಜುನ್‌.. ಮೆಗಾ ಸ್ಟಾರ್ ಚಿರಂಜೀವ್‌ ಪುತ್ರ ರಾಮ್‌ಚರಣ್ ದಂಪತಿ.. ನಟ ಸಾಯಿಧರಮ್‌ ತೇಜ ಸೇರಿದಂತೆ ಅನೇಕ ಕಲಾವಿದರ ಬಳಗ ಸಂಭ್ರಮದಿಂದ ಓಡಾಡಿಕೊಂಡಿದ್ದಾರೆ. ಮೆಗಾಸ್ಟಾರ್ ಜಿರಂಜೀವಿ ಮೊಗದಲ್ಲಿ ಮಂದಹಾಸ ಎದ್ದುಕಾಣ್ತಿತ್ತು. ಅಷ್ಟಕ್ಕೂ ಈ ಸಂಭ್ರಮ ಸಡಗರಕ್ಕೆ ಕಾರಣವೇನು ಅಂದುಕೊಂಡ್ರಾ. ಅದು ಬೇರೇನೂ ಅಲ್ಲ. ಮೆಗಾ ಸ್ಟಾರ್‌ ಕುಟುಂಬದ ಎಂಗೇಜ್‌ ಮೆಂಟ್‌ ಕಾರ್ಯಕ್ರಮ. ಹೌದು ಹೈದರಾಬಾದ್‌ನಲ್ಲಿ ಚಿರಂಜೀವಿ ಸಹೋದರ ನಾಗಬಾಬು ಪುತ್ರಿಯ ಎಂಗೇಜ್‌ಮೆಂಟ್‌ ಸಮಾರಂಭ.

ಚಿರಂಜೀವಿ ಸಹೋದರ ನಾಗಬಾಬು ಸಹ ಟಾಲಿವುಡ್‌ನ ಫಿಲ್ಮ್ ಚೇಂಬರ್‌ನಲ್ಲಿ ಪ್ರಮುಖ ಪದಾಧಿಕಾರಿಯಾಗಿ ಹಾಗೂ ಅನೇಕ ಚಿತ್ರಗಳಲ್ಲೂ ಪ್ರಮುಖ ಪಾತ್ರಗಳಲ್ಲಿ ನಟಿಸಿದವರು. ನಾಗಬಾಬು ಪುತ್ರಿ ನಿಹಾರಿಕಾ ಕೂಡ ಹಲವು ಸಿನಿಮಾ, ಸೀರಿಯಲ್‌ಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲಾ ಪೊಲೀಸ್ ಅಧಿಕಾರಿ ಪುತ್ರ ಚೈತನ್ಯ ಜತೆ ನಿಶ್ಚಿತಾರ್ಥ ನೆರವೇರಿತು.

ಕೊರೊನಾ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರು ಮಾತ್ರ ಪಾಲ್ಗೊಂಡಿದ್ರು. ಆದ್ರೆ ಟಾಲಿವುಡ್‌ನ ಮೆಗಾ ಫ್ಯಾಮಿಲಿಯಲ್ಲಿ ಬಹಳ ದಿನಗಳ ಬಳಿಕ ಇಂಥಾದ್ದೊಂದು ಅದ್ದೂರಿ ಕಾರ್ಯಕ್ರಮ ಜರುಗಿದ್ದು, ಮೆಗಾಸ್ಟಾರ್‌ ಚಿರಂಜೀವಿ ಹಾಗೂ ಅವ್ರ ಸಹೋದರ ನಾಗಬಾಬುರ ಸಂತಸಕ್ಕೆ ಪಾರವೇ ಇರಲಿಲ್ಲ. ಎಲ್ಲರೂ ಕೂಡಿ ನಿಹಾರಿಕಾಳ ಎಂಗೇಜ್‌ಮೆಂಟ್‌ ಕಾರ್ಯಕ್ರಮವನ್ನ ಸಂಭ್ರಮದಿಂದಲೇ ನೆರವೇರಿಸಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.

Published On - 7:38 am, Fri, 14 August 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ