AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದ ಖುಷ್ಬೂ ಹೇಗಾದ್ರು ನೋಡಿ; ಅಚ್ಚರಿಯ ರೀತಿ ಸ್ಲಿಮ್​ ಆದ ‘ರಣಧೀರ’ ಚೆಲುವೆಯ ಸೀಕ್ರೆಟ್​ ಇಲ್ಲಿದೆ

Kushboo Sundar: ಈ ಮೊದಲಿನ ಫೋಟೋ ಜತೆಗೆ ಇಂದಿನ ಫೋಟೋವನ್ನು ಅಕ್ಕಪಕ್ಕ ಇಟ್ಟು ಖುಷ್ಬೂ ಪೋಸ್ಟ್​ ಮಾಡಿದ್ದಾರೆ. ಎರಡೂ ಫೋಟೋದಲ್ಲಿನ ವ್ಯತ್ಯಾಸ ಕಂಡು ಅಭಿಮಾನಿಗಳು ಹುಬ್ಬೇರಿಸುತ್ತಿದ್ದಾರೆ.

ಹೇಗಿದ್ದ ಖುಷ್ಬೂ ಹೇಗಾದ್ರು ನೋಡಿ; ಅಚ್ಚರಿಯ ರೀತಿ ಸ್ಲಿಮ್​ ಆದ ‘ರಣಧೀರ’ ಚೆಲುವೆಯ ಸೀಕ್ರೆಟ್​ ಇಲ್ಲಿದೆ
ಖುಷ್ಬೂ
TV9 Web
| Updated By: ಮದನ್​ ಕುಮಾರ್​|

Updated on:Dec 05, 2021 | 11:48 AM

Share

ಒಂದು ಕಾಲದ ಸ್ಟಾರ್​ ಹೀರೋಯಿನ್​ ಖುಷ್ಬೂ ಸುಂದರ್​ (Kushboo Sundar) ಅವರು ಈಗ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ರಾಜಕೀಯದಲ್ಲೂ ಸಕ್ರಿಯರಾಗಿರುವ ಅವರು ಈಗ ಫಿಟ್ನೆಸ್ (Fitness)​ ಬಗ್ಗೆ ಹೆಚ್ಚು ಗಮನ ಹರಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಖುಷ್ಬೂ ಸಖತ್​ ದಪ್ಪ ಆಗಿದ್ದರು. ಅವರ ದೇಹದ ತೂಕ ಅಗತ್ಯಕ್ಕಿಂತ ಜಾಸ್ತಿ ಆಗಿತ್ತು. ಆದರೆ ಈಗ ಅವರು ಬದಲಾಗಿದ್ದಾರೆ. ಕಠಿಣ ಪರಿಶ್ರಮದಿಂದ ಬಳುಕುವ ಬಳ್ಳಿಯಂತೆ ಸ್ಲಿಮ್​ ಆಗಿದ್ದಾರೆ. ದೇಹದ ತೂಕ ಇಳಿಸಿಕೊಳ್ಳುವಲ್ಲಿ (Weight Loss) ತಾವು ಅನುಸರಿಸುತ್ತಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಸ್ಲಿಮ್​ ಅವತಾರದ ಫೋಟೋ (Kushboo Photos) ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

‘ಅಲ್ಲಿಂದ ಇಲ್ಲಿಯವರೆಗಿನ ಪಯಣ. 20 ಕೆಜಿ ಸಣ್ಣಗಾಗಿದ್ದೇನೆ. ತುಂಬ ಆರೋಗ್ಯಕರವಾಗಿದ್ದೇನೆ. ನಿಮ್ಮನ್ನು ನೀವು ನೋಡಿಕೊಳ್ಳಿ. ಆರೋಗ್ಯವೇ ಭಾಗ್ಯ. ನನಗೆ ಹುಷಾರಿಲ್ಲವೇ ಎಂದು ಕೆಲವರು ಕೇಳುತ್ತಿದ್ದೀರಿ. ನಿಮ್ಮ ಕಾಳಜಿಗೆ ಧನ್ಯವಾದ. ಈ ಹಿಂದೆ ಯಾವಾಗಲೂ ನಾನು ಇಷ್ಟು ಫಿಟ್​ ಆಗಿರಲಿಲ್ಲ. ತೂಕ ಕಡಿಮೆ ಮಾಡಿಕೊಂಡು ಫಿಟ್​ ಆಗುಲು ನಿಮ್ಮಲ್ಲಿ ಕನಿಷ್ಠ 10 ಜನರಿಗೆ ನಾನು ಸ್ಫೂರ್ತಿಯಾದರೆ ನಾನು ಗೆದ್ದಿದ್ದೇನೆ ಅಂತ ತಿಳಿದುಕೊಳ್ಳುತ್ತೇನೆ’ ಎಂದು ಖುಷ್ಬೂ ಹೇಳಿದ್ದಾರೆ.

ತಮ್ಮ ಈ ಮೊದಲಿನ ಫೋಟೋ ಜತೆಗೆ ಇಂದಿನ ಫೋಟೋವನ್ನು ಅಕ್ಕಪಕ್ಕ ಇಟ್ಟು ಖುಷ್ಬೂ ಪೋಸ್ಟ್​ ಮಾಡಿದ್ದಾರೆ. ಎರಡೂ ಫೋಟೋದಲ್ಲಿನ ವ್ಯತ್ಯಾಸ ಕಂಡು ಅಭಿಮಾನಿಗಳು ಹುಬ್ಬೇರಿಸುತ್ತಿದ್ದಾರೆ. ಈ ಬದಲಾವನೆಯ ರಹಸ್ಯ ಏನು ಎಂದು ಕೂಡ ಅನೇಕರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಖುಷ್ಬೂ ಉತ್ತರ ನೀಡಿದ್ದಾರೆ. ‘ಪರಿಶ್ರಮ.. ಡಯೆಟ್​ ಜತೆಗೆ ವ್ಯಾಯಾಮ’ ಎಂದು ಅವರು ಕಮೆಂಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

1980 ಮತ್ತು 1990ರ ದಶಕದಲ್ಲಿ ಖುಷ್ಬೂ ಅವರು ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಆಗಿದ್ದರು. ರವಿಚಂದ್ರನ್​ ಜತೆ ‘ರಣಧೀರ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕರುನಾಡಿನಲ್ಲಿ ಮನೆಮಾತಾಗಿದರು. ಬಳಿಕ ‘ಅಂಜದ ಗಂಡು’, ‘ಯುಗ ಪುರುಷ’ ಸಿನಿಮಾಗಳ ಮೂಲಕವೂ ಮೋಡಿ ಮಾಡಿದರು. ಕನ್ನಡ ಚಿತ್ರರಂಗದ ಜತೆ ಅವರು ಈಗಲೂ ನಂಟು ಹೊಂದಿದ್ದಾರೆ. ಇತ್ತೀಚೆಗೆ ಪುನೀತ್​ ರಾಜ್​ಕುಮಾರ್ ನಿಧನರಾದಾಗ ಅವರ ಆತ್ಮಕ್ಕೆ ಖುಷ್ಬೂ ಶಾಂತಿ ಕೋರಿದ್ದರು.

ಇದನ್ನೂ ಓದಿ:

ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

Published On - 11:47 am, Sun, 5 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ